ಗೌರಿ ಹತ್ಯೆಯ ಪ್ರಚೋದಕರನ್ನು ಬಂಧಿಸಿ: ಸರ್ಕಾರಕ್ಕೆ ಬರಗೂರು ಆಗ್ರಹ
ಬೆಂಗಳೂರು, ಜೂನ್ 23: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಯಾರಿಂದಾಗಿದೆ, ಹತ್ಯೆ ಮಾಡಲು ಯಾರು ಪ್ರಚೋದನೆ ನೀಡಿದ್ದಾರೆ ಎನ್ನುವುದು ಪತ್ತೆಯಾಗಬೇಕೇ ಹೊರತು, ಧರ್ಮ, ಜಾತಿಯ ಬಗ್ಗೆ ಚರ್ಚೆಯಾಗಬಾರದು ಎಂದು ಸಾಹಿತಿ ಬರಗೂರು ರಾಮಚಂದ್ರಪ್ಪ ಹೇಳಿದರು.
ಹತ್ಯೆ ಮಾಡಿದವರು ಮತ್ತು ಮಾಡಿಸಿದವರು ಯಾರು ಎಂಬುದಷ್ಟೇ ಮುಖ್ಯ. ಆತ ಹಿಂದೂ ಆಗಿರಬಹುದು ಅಥವಾ ಮುಸ್ಲಿಂ ಆಗಿರಬಹುದು, ಜಾತಿ ಧರ್ಮಗಳು ಅಡ್ಡಿಯಾಗಬಾರದು, ತನಿಖೆ ಸ್ವತಂತ್ರವಾಗಿ ನಡೆಯಬೇಕು. ಈ ಹಂತದಲ್ಲಿ ಯಾರೂ ಹಸ್ತಕ್ಷೇಪ ಮಾಡಬಾರದು ಎಂದು ತಿಳಿಸಿದರು.
ಗೌರಿ ಹತ್ಯೆ ಪ್ರಕರಣದಲ್ಲಿ ಹಿಂದೂ ಕಾರ್ಯಕರ್ತರನ್ನು ಸಿಲುಕಿಸಲಾಗಿದೆ ಎಂದು ಹಿಂದು ಸಂಘಟನೆಗಳು ಆರೋಪ ಮಾಡಿವೆ. ಮೂಲಭೂತವಾದಿಗಳು ಪ್ರಗತಿಪರ ಸಾಹಿತಿಗಳನ್ನು ಹತ್ಯೆ ಮಾಡಲು ಹಿಟ್ಲಿಸ್ಟ್ ತಯಾರಿಸಿರುವುದು ಅತ್ಯಂತ ಆಘಾತಕಾರಿ.

ಇದರಿಂದ ದೇಶ ಅತ್ಯಂತ ಸೂಕ್ಷ್ಮ ಸಂದರ್ಭದಲ್ಲಿ ಹಾದುಹೋಗುತ್ತದೆ ಎಂಬುದು ಗೊತ್ತಾಗುತ್ತದೆ. ಹಿಟ್ಲಿಸ್ಟ್ ನನ್ನ ಹೆಸರಿರುವುದು ದುರಂತ. ನಾನು ಹಿಂದೂ ಮತ್ತು ಮುಸ್ಲಿಂ ಎರಡೂ ರೀತಿಯ ಮೂಲಭೂತವಾದವನ್ನು ವಿರೋಧಿಸುತ್ತಿದ್ದೇನೆ. ಧರ್ಮ, ಜಾತಿ ನೋಡಿ ಯಾವತ್ತೂ ಚರ್ಚೆ ಮಾಡಿಲ್ಲ. ಆರೋಗ್ಯಕರ ನಿಲುವು ಇರುವ ನನ್ನನ್ನೂ ಹಿಟ್ಲಿಸ್ಟ್ನಲ್ಲಿದ್ದಾರೆ ಎಂದರೆ ರಾಷ್ಟ್ರ ಯಾವ ದಿಕ್ಕಿನಲ್ಲಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಭೇಕು ಎಂದರು.
ಕೋಮುವಾದ ಎಂದರೆ ಅದು ಹಿಂದೂ ಧರ್ಮದಲ್ಲಾದರೂ ಸರಿ, ಮುಸ್ಲಿಂ ಧರ್ಮದಲ್ಲಾದರೂ ಸರಿ. ಸಮಾಜದ ಶಾಂತಿ ಕದಡುವ ಯಾವುದೇ ಕೋಮುವಾದವಾದರೂ ಖಂಡಿಸಲೇಬೇಕು. ಸರ್ಕಾರ ನನ್ನ ಮನೆಗೆ ರಕ್ಷಣೆ ನೀಡಿದೆ. ಮನೆ ಬಳಿ ಗನ್ಮ್ಯಾನ್ ಇದ್ದಾರೆ. ಗೌರಿ ಹತ್ಯೆ ಪ್ರಕರಣದ ತನಿಖೆ ಕ್ಷಿಪ್ರವಾಗಿ ನಡೆಯುತ್ತಿದೆ. ಹತ್ಯೆಗೆ ಪ್ರಚೋದನೆ ನೀಡಿದವರ ಬಂಧನವೂ ಆಗಬೇಕು, ಅದೇ ರೀತಿ ಚಿಂತಕರಾದ ಎಂ.ಎಂ.ಕಲ್ಬುರ್ಗಿ ಹತ್ಯೆ ಪ್ರಕರಣವನ್ನು ಸರ್ಕಾರ ಭೇದಿಸಬೇಕು ಎಂದು ಉಪಮುಖ್ಯಮಂತ್ರಿಯವರಲ್ಲಿ ಮನವಿ ಮಾಡಿದ್ದೇನೆ ಎಂದರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications