ಗೌರಿ ಹತ್ಯೆಯ ಪ್ರಚೋದಕರನ್ನು ಬಂಧಿಸಿ: ಸರ್ಕಾರಕ್ಕೆ ಬರಗೂರು ಆಗ್ರಹ
ಬೆಂಗಳೂರು, ಜೂನ್ 23: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಯಾರಿಂದಾಗಿದೆ, ಹತ್ಯೆ ಮಾಡಲು ಯಾರು ಪ್ರಚೋದನೆ ನೀಡಿದ್ದಾರೆ ಎನ್ನುವುದು ಪತ್ತೆಯಾಗಬೇಕೇ ಹೊರತು, ಧರ್ಮ, ಜಾತಿಯ ಬಗ್ಗೆ ಚರ್ಚೆಯಾಗಬಾರದು ಎಂದು ಸಾಹಿತಿ ಬರಗೂರು ರಾಮಚಂದ್ರಪ್ಪ ಹೇಳಿದರು.
ಹತ್ಯೆ ಮಾಡಿದವರು ಮತ್ತು ಮಾಡಿಸಿದವರು ಯಾರು ಎಂಬುದಷ್ಟೇ ಮುಖ್ಯ. ಆತ ಹಿಂದೂ ಆಗಿರಬಹುದು ಅಥವಾ ಮುಸ್ಲಿಂ ಆಗಿರಬಹುದು, ಜಾತಿ ಧರ್ಮಗಳು ಅಡ್ಡಿಯಾಗಬಾರದು, ತನಿಖೆ ಸ್ವತಂತ್ರವಾಗಿ ನಡೆಯಬೇಕು. ಈ ಹಂತದಲ್ಲಿ ಯಾರೂ ಹಸ್ತಕ್ಷೇಪ ಮಾಡಬಾರದು ಎಂದು ತಿಳಿಸಿದರು.
ಗೌರಿ ಹತ್ಯೆ ಪ್ರಕರಣದಲ್ಲಿ ಹಿಂದೂ ಕಾರ್ಯಕರ್ತರನ್ನು ಸಿಲುಕಿಸಲಾಗಿದೆ ಎಂದು ಹಿಂದು ಸಂಘಟನೆಗಳು ಆರೋಪ ಮಾಡಿವೆ. ಮೂಲಭೂತವಾದಿಗಳು ಪ್ರಗತಿಪರ ಸಾಹಿತಿಗಳನ್ನು ಹತ್ಯೆ ಮಾಡಲು ಹಿಟ್ಲಿಸ್ಟ್ ತಯಾರಿಸಿರುವುದು ಅತ್ಯಂತ ಆಘಾತಕಾರಿ.

ಇದರಿಂದ ದೇಶ ಅತ್ಯಂತ ಸೂಕ್ಷ್ಮ ಸಂದರ್ಭದಲ್ಲಿ ಹಾದುಹೋಗುತ್ತದೆ ಎಂಬುದು ಗೊತ್ತಾಗುತ್ತದೆ. ಹಿಟ್ಲಿಸ್ಟ್ ನನ್ನ ಹೆಸರಿರುವುದು ದುರಂತ. ನಾನು ಹಿಂದೂ ಮತ್ತು ಮುಸ್ಲಿಂ ಎರಡೂ ರೀತಿಯ ಮೂಲಭೂತವಾದವನ್ನು ವಿರೋಧಿಸುತ್ತಿದ್ದೇನೆ. ಧರ್ಮ, ಜಾತಿ ನೋಡಿ ಯಾವತ್ತೂ ಚರ್ಚೆ ಮಾಡಿಲ್ಲ. ಆರೋಗ್ಯಕರ ನಿಲುವು ಇರುವ ನನ್ನನ್ನೂ ಹಿಟ್ಲಿಸ್ಟ್ನಲ್ಲಿದ್ದಾರೆ ಎಂದರೆ ರಾಷ್ಟ್ರ ಯಾವ ದಿಕ್ಕಿನಲ್ಲಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಭೇಕು ಎಂದರು.
ಕೋಮುವಾದ ಎಂದರೆ ಅದು ಹಿಂದೂ ಧರ್ಮದಲ್ಲಾದರೂ ಸರಿ, ಮುಸ್ಲಿಂ ಧರ್ಮದಲ್ಲಾದರೂ ಸರಿ. ಸಮಾಜದ ಶಾಂತಿ ಕದಡುವ ಯಾವುದೇ ಕೋಮುವಾದವಾದರೂ ಖಂಡಿಸಲೇಬೇಕು. ಸರ್ಕಾರ ನನ್ನ ಮನೆಗೆ ರಕ್ಷಣೆ ನೀಡಿದೆ. ಮನೆ ಬಳಿ ಗನ್ಮ್ಯಾನ್ ಇದ್ದಾರೆ. ಗೌರಿ ಹತ್ಯೆ ಪ್ರಕರಣದ ತನಿಖೆ ಕ್ಷಿಪ್ರವಾಗಿ ನಡೆಯುತ್ತಿದೆ. ಹತ್ಯೆಗೆ ಪ್ರಚೋದನೆ ನೀಡಿದವರ ಬಂಧನವೂ ಆಗಬೇಕು, ಅದೇ ರೀತಿ ಚಿಂತಕರಾದ ಎಂ.ಎಂ.ಕಲ್ಬುರ್ಗಿ ಹತ್ಯೆ ಪ್ರಕರಣವನ್ನು ಸರ್ಕಾರ ಭೇದಿಸಬೇಕು ಎಂದು ಉಪಮುಖ್ಯಮಂತ್ರಿಯವರಲ್ಲಿ ಮನವಿ ಮಾಡಿದ್ದೇನೆ ಎಂದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications