1 ಗಂಟೆವರೆಗೆ ಮಾತ್ರ ಬಾರ್, ಹೋಟೆಲ್ ತೆರೆದಿಡಲು ಒಪ್ಪಿಗೆ
ಬೆಂಗಳೂರು, ಡಿ. 29: ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಮೇಲೆ ಕವಿದಿದ್ದ ಕಾರ್ಮೋಡ ಕರಗಿದೆ. ಬಾರ್ ಆ್ಯಂಡ್ ರೆಸ್ಟೋರೆಂಟ್ ಸೇರಿದಂತೆ ವಿವಿಧ ಹೋಟೆಲ್ಗಳು ಡಿ. 31ರಂದು ರಾತ್ರಿ ಒಂದು ಗಂಟೆಯವರೆಗೆ ಮಾತ್ರ ತೆರೆದಿಡಲು ನಗರ ಪೊಲೀಸ್ ಆಯುಕ್ತರು ಒಪ್ಪಿಗೆ ಸೂಚಿಸಿದ್ದಾರೆ.
ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಡಿ. 31ರಂದು ರಾತ್ರಿ 12 ಗಂಟೆ ನಂತರವೂ ಬಾರ್ ಮತ್ತು ಹೋಟೆಲ್ ತೆರೆಡಿದಲು ಅನುಮತಿ ನೀಡಬೇಕೆಂದು ಕೋರಲಾಗಿತ್ತು. ಇದಕ್ಕೆ ಸ್ಪಂದಿಸಿದ್ದ ಪೊಲೀಸ್ ಆಯುಕ್ತ ಎಂ.ಎನ್. ರೆಡ್ಡಿ, ರಾತ್ರಿ 2 ಗಂಟೆವರೆಗೆ ತೆರೆದಿಡಲು ಒಪ್ಪಿಗೆ ಸೂಚಿಸಿದ್ದರು. ಆದರೆ, ಈ ಕುರಿತು ಸೋಮವಾರ ಹೊಸ ಆದೇಶ ಹೊರಡಿಸಿದ್ದು, ರಾತ್ರಿ 1 ಗಂಟೆಯವರೆಗೆ ಮಾತ್ರ ತೆರೆದಿಡಬಹುದು ಎಂದು ತಿಳಿಸಿದ್ದಾರೆ.

ಏನೇನು ಷರತ್ತುಗಳು...? :
- ಬಾರ್ ಆ್ಯಂಡ್ ರೆಸ್ಟೋರೆಂಟ್ಗಳು ಡಿ. 31ರಂದು ರಾತ್ರಿ ಒಂದು ಗಂಟೆಯವರೆಗೆ ತೆರೆದಿಡಬಹುದು. ಆದರೆ, ಇದಕ್ಕೆ ಅಬಕಾರಿ ಇಲಾಖೆಯಿಂದ ಅನುಮತಿ ಪಡೆಯಬೇಕು.
- ಮದ್ಯ ಸರಬರಾಜು ಮಾಡದ ಹೋಟೆಲ್ಗಳೂ ಹೆಚ್ಚುವರಿ ಅವಧಿಗೆ ತೆರೆದಿಡಬಹುದು. ಇವು ಅಬಕಾರಿ ಇಲಾಖೆಯಿಂದ ಅನುಮತಿ ಪಡೆಯುವ ಅಗತ್ಯವಿಲ್ಲ.
- 1 ಗಂಟೆಯವರೆಗೆ ತೆರೆದಿರುವ ಹೋಟೆಲ್ ಹಾಗೂ ಬಾರ್ಗಳು ಭದ್ರತೆಗಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲೇಬೇಕು. ಅಕ್ಕಪಕ್ಕದಲ್ಲಿ ವಾಸಿಸುತ್ತಿರುವವರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು.
More From
-
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ












Click it and Unblock the Notifications