Kadalekai Parishe 2024: ಇದೇ ನವೆಂಬರ್ಗೆ ಬಸವನಗುಡಿ ಕಡಲೆಕಾಯಿ ಪರಿಷೆ: ಶುಲ್ಕ ರಹಿತ ಮಳಿಗೆಗಳು..
ಬೆಂಗಳೂರು, ನವೆಂಬರ್ 17: ಬೆಂಗಳೂರು ಐತಿಹಾಸಿಕ ಬಸನವಗುಡಿ ಕಡಲೆಕಾಯಿ ಪರಿಷೆಗೆ ಮಹೂರ್ತ ನಿಗದಿಯಾಗಿದೆ. ಪ್ರತಿ ವರ್ಷದಂತೆ ವರ್ಷವು ಬುಲ್ ಟೆಂಪಲ್ ರಸ್ತೆಯಲ್ಲಿ ಎರಡು ದಿನದ ಅದ್ಧೂರಿ ಪರಿಷೆಗೆ ಸರ್ಕಾರ ಸಜ್ಜಾಗಿದೆ. ಈ ಕುರಿತು ಸಾರಿಗೆ ಸಚಿವ ಮತ್ತು ಮುಜರಾಯಿ ಇಲಾಖೆ ರಾಮಲಿಂಗಾ ರೆಡ್ಡಿ ನೇತೃತ್ವದಲ್ಲಿ ಶನಿವಾರ ಪೂರ್ವಭಾವಿ ಸಭೆ ನಡೆಯಿತು. ಇದೇ ನವೆಂಬರ್ ನಲ್ಲಿ ಕಡಲೆಕಾಯಿ ಪರಿಷೆ ನಡೆಸುವುದಾಗಿ ಅವರು ತಿಳಿಸಿದ್ದಾರೆ.
ನವೆಂಬರ್ 25 ಮತ್ತು 26ರಂದು ಎರಡು ದಿನಗಳ ಕಾಲ ಬೆಂಗಳೂರಿನ ಬಸವನಗುಡಿ ದೊಡ್ಡ ಗಣಪತಿ ದೇವಸ್ಥಾನ ಆವರಣದಲ್ಲಿ ಎಂದಿನಂತೆ ವಿಶೇಷ ಪೂಜೆ ಪುನಸ್ಕಾರಗಳು, ಧಾರ್ಮಿಕ ಕೈಂಕರ್ಯಗಳ ಸಮೇತವಾಗಿ ವಿಜೃಂಭಣೆಯ ಪರಿಷೆ ನಡೆಯಲಿದೆ. ಈ ಸಂಬಂಧ ಬಿಬಿಎಂಪಿಯು ಅಗತ್ಯ ಸಿದ್ಧತೆಯಲ್ಲಿ ತೊಡಗಿದೆ.

ಮೊನ್ನೆಯಷ್ಟೇ ಮಲ್ಲೇಶ್ವರಂ ನಲ್ಲಿ ಕಡಲೆಕಾಯಿ ಪರಿಷೆ ನಡೆದಿತ್ತು. ಅದರ ಬೆನ್ನಲ್ಲೆ ಐತಿಹಾಸಿಕ ಹಿನ್ನೆಲೆ ಇರುವ ಬಸವನಗುಡಿ ಕಡಲೆಕಾಯಿ ಪರಿಷೆ ನಡೆಯಲಿದೆ. ಈ ಭಾರಿ ಇಲ್ಲಿ ಹಾಕುವ ಮಳಿಗೆಗಳಿಂದ ಯಾವುದೇ ಶುಲ್ಕ ಪಡೆಯದೇ ಅವಕಾಶ ನೀಡಲು ತೀರ್ಮಾನಿಸಲಾಗಿದೆ ಎಂದು ಸಭೆಯಲ್ಲಿ ರಾಮಲಿಂಗಾರೆಡ್ಡಿ ಅವರು ತಿಳಿಸಿದರು.
ಬೀದಿ ಬದಿ ವ್ಯಾಪಾರಿಗಳಿಂದ ಸುಂಕ ಸಂಗ್ರಹಿಸಲು ಟೆಂಡರ್ ವ್ಯವಸ್ಥೆ ಇದೆ. ಹೀಗಿದ್ದರೂ ಕಳೆದ ಬಾರಿಗೆ ಹಣ ವಸೂಲಿ ಮಾಡಲಾಗಿತ್ತು ಎಂಬ ದೂರುಗಳು ಕೇಳಿ ಬಂದಿವೆ. ಕಡಲೆಕಾಯಿ ಪರಿಷೆಯಲ್ಲಿ ಬಲವಂತದಿಂದ ಗುತ್ತಿಗೆದಾರರು ಮಳಿಗೆದಾರರಿಂದ ಹಣ ಪಡೆದಿದ್ದಾರೆ ಎನ್ನಲಾಗಿದೆ.
ಈ ಕಾರಣದಿಂದಾಗಿ ಈ ವರ್ಷ ಸುಂಕ ವಸೂಲಾತಿ ಟೆಂಡರ್ ಕೈ ಬಿಡಬೇಕು. ಪರಿಷೆಯಲ್ಲಿ ಅವಕಾಶ ನೀಡಲಾದ ಮಳಿಗೆಗಳಿಂದ ಯಾವುದೇ ಶುಲ್ಕ ಪಡೆಯದಂತೆ ಅವರು ಸೂಚಿಸಿದ್ದಾರೆ. ಇದರ ಹೊರತಾಗಿಯೂ ಗುತ್ತಿಗೆದಾರರು ಪರಿಷೆಯಲ್ಲಿ ಆಟಿಕೆಗಳು, ಕಡಲೆಕಾಯಿ ಮಾರಾಟಗಾರರು, ಇನ್ನಿತರ ಮಳೆಗಳಿಂದ ಹಣ ವಸೂಲಿ ಮಾಡಿದ್ದು ಕಂಡು ಬಂದರೆ, ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಲಕ್ಷಾಂತರ ಭಕ್ತರು ಪರಿಷೆಗೆ ಆಗಮನ: ಅಗತ್ಯ ವ್ಯವಸ್ಥೆ
ಇನ್ನೂ ಈ ಬಾರಿಯು ಎರಡು ದಿನ ಕಡಲೆಕಾಯಿ ಪರಿಷೆಯಲ್ಲಿ ಲಕ್ಷಗಟ್ಟಲೇ ಭಕ್ತರು ಆಗಮಿಸುತ್ತಾರೆ. ಬಸನ ಮೂರ್ತಿ ಪೂಜೆ ಸಲ್ಲಿಸಲು, ದೊಡ್ಡ ಗಣಪತಿ ದೇವರ ದರ್ಶನಕ್ಕೆ ಬರಲಿದ್ದಾರೆ. ಹೀಗಾಗಿ ನೂಕು ನುಗ್ಗಲು ಆಗದಂತೆ ಅಗತ್ಯ ವ್ಯವಸ್ಥೇ ಮಾಡಲಾಗುತ್ತದೆ. ಸರತಿ ಸಾಲಿನಲ್ಲಿ ಬರಲು, ಹೋಗಲು ಅನುಕೂಲವಾಗುವಂತೆ ಬ್ಯಾರಿಕೇಡ್ ಅಳವಡಿಸಲಾಗುತ್ತದೆ.
ಮಹಿಳೆಯರು, ಮಕ್ಕಳು, ಹಿರಿಯನಾಗರಿಕರು ಸರಾಗವಾಗಿ ದೇವಸ್ಥಾನದ ಒಳಗೆ ಬಂದು ಹೋಗಲು ಅನುವಾಗುವಂತೆ ವ್ಯವಸ್ಥೆ ಮಾಡಲಾಗುವುದು ಎಂದರು.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications