ವೀರಶೈವ ವೇದಿಕೆಯಿಂದ ಬಸವ ಸಿರಿ ಪ್ರಶಸ್ತಿ ಪ್ರದಾನ
ಪ್ರಶಾಂತ್ ಕಲ್ಲೂರು ನೇತೃತ್ವದ ವೀರಶೈವ ಲಿಂಗಾಯತ ಯುವ ವೇದಿಕೆ ವತಿಯಿಂದ ಇಂದು ಸಿಲಿಕಾನ್ ಸಿಟಿ ಬೆಂಗಳೂರಿನ ಗಾಂಧಿ ಭವನದಲ್ಲಿ ಆಯೋಜಿಸಲ್ಪಟ್ಟ ಬಸವ ಜಯಂತೋತ್ಸವ ಹಾಗೂ 'ಬಸವ ಸಿರಿ' ಪ್ರಶಸ್ತಿ ಪ್ರದಾನ ಸಮಾರಂಭ ಸರಳವಾಗಿ ಅರ್ಥಪೂರ್ಣವಾಗಿ ಜರುಗಿತು.[ಲಂಡನ್ನಿನಲ್ಲಿ ಪ್ರಥಮ ಬಾರಿಗೆ ಬಸವ ಜಯಂತಿ ಆಚರಣೆ!]
ರಾಜ್ಯದಲ್ಲಿ ತಲೆದೋರಿರುವ ಭೀಕರ ಬರಗಾಲ ಹಾಗೂ ರೈತರು ಎದುರಿಸುತ್ತಿರುವ ತೀವ್ರ ಜಲಕ್ಷಾಮದ ನಿಮಿತ್ತ ಈ ಸಲದ ಬಸವ ಜಯಂತಿಯನ್ನು ಸರಳವಾಗಿ ಆಚರಿಸಲಾಗುತ್ತಿದೆ ಎಂದು ಸಂಘಟನೆಯ ಅಧ್ಯಕ್ಷ ಪ್ರಶಾಂತ್ ಕಲ್ಲೂರ್ ತಿಳಿಸಿದರು. ಪ್ರಾಸ್ತಾವಿಕ ನುಡಿಗಳನ್ನಾಡಿದ ಅವರು ಸಂಘಟನೆಯ ಮೂರು ವರ್ಷದ ಸಾಧನೆಗಳನ್ನು ಸಂಕ್ಷಿಪ್ತವಾಗಿ ವಿವರಿಸಿದರು.[ವಚನಗಳಲ್ಲಿ ನಾಮಾಮೃತ ತುಂಬಿದ ಅಣ್ಣ ಬಸವಣ್ಣ]
ಶಿವರುದ್ರ ಸ್ವಾಮಿಗಳು :ಸಾನ್ನಿಧ್ಯ ವಹಿಸಿದ್ದ ಬೆಂಗಳೂರು ಬೇಲಿ ಮಠದ ಶ್ರೀ ಶಿವರುದ್ರ ಸ್ವಾಮಿಗಳು ಬಸವಣ್ಣನ ತತ್ವಗಳು ಇಂದು ಕೇವಲ ಭಾಷಣಗಳಿಗೆ ಸೀಮಿತವಾಗಿವೆ, ಡಾಂಭಿಕತೆ ಹೆಚ್ಚಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಬಹುತೇಕರು ಇಂದು ಮಾನ ಸಮ್ಮಾನಗಳ ಹೊನ್ನ ಶೂಲದಲ್ಲಿ ನಾಶವಾಗುತ್ತಿದ್ದಾರೆ ಎಂದರಲ್ಲದೆ ರಾಜಕಾರಣಿಗಳ ಸೋಗಲಾಡಿತನವನ್ನು ಕಟುವಾಗಿ ವಿಡಂಬಿಸಿದರು.[ಬಸವಣ್ಣ ಎಂದೆಂದಿಗೂ ಜಗತ್ತಿಗೆ ಜ್ಯೋತಿ: ಸಿದ್ದರಾಮಯ್ಯ]
ಇದೇ ಸಂದರ್ಭದಲ್ಲಿ ಮೂವರು ಮಹನೀಯರಿಗೆ 'ಬಸವ ಸಿರಿ' ಪುರಸ್ಕಾರ ಹಾಗೂ ಒಬ್ಬರಿಗೆ ನಾಗರಾಜ್ ಜಮಖಂಡಿ ಹೆಸರಿನಲ್ಲಿ ನೀಡಲಾಗುವ 'ಸುದ್ದಿ ಸಿರಿ' ಪ್ರಶಸ್ತಿ ಕೊಟ್ಟು ಗೌರವಿಸಲಾಯಿತು.

ಬಸವ ಸಿರಿ ಪ್ರಶಸ್ತಿ: ಪರಿಸರವಾದಿ ಶ್ರೀಮತಿ ಸಾಲುಮರದ ತಿಮ್ಮಕ್ಕ, ಚಿತ್ರದುರ್ಗದ ಉದ್ಯಮಿ ಹಾಗೂ ಪ್ರಗತಿಪರ ಕೃಷಿಕ ಜಿಎಸ್ ಮಂಜುನಾಥ್ ಮತ್ತು ಸಂಶೋಧಕ ಮಳಲಿಗೌಡ ಇವರಿಗೆ ಬಸವ ಸಿರಿ ಪ್ರಶಸ್ತಿ ಸ್ವೀಕರಿಸಿದರು. ಪ್ರಶಸ್ತಿ ಸ್ವೀಕರಿಸಿದ ಜಿಎಸ್ ಮಂಜುನಾಥ್ ಮಾತನಾಡಿ ರೈತರು ತಮ್ಮ ಉನ್ನತಿಗಾಗಿ ಅಳವಡಿಸಿಕೊಳ್ಳಬೇಕಾದ ಕೃಷಿ ವಿಧಾನಗಳ ಕುರಿತು ಬಹಳ ಉಪಯುಕ್ತವಾದ ಮಾತುಗಳನ್ನು ಪ್ರಸ್ತಾಪಿಸಿದರಲ್ಲದೆ ನಗರಗಳಲ್ಲಿ ಪರಿಸರ ಜಾಗೃತಿ ಹೆಚ್ಚಬೇಕಿದೆ ಎಂದು ತಿಳಿಸಿದರು.[ವಚನಗಳ ವಿಶಿಷ್ಟ ಸಂಗ್ರಹವಿರುವ ವೆಬ್ ತಾಣ]
ಹಾಗೆಯೇ ಸಂಶೋಧಕ ಹಾಗೂ ಸಾಹಿತಿ ಮಳಲಿಗೌಡ ನಾಡಿನಲ್ಲಿ ಒಂದೆಡೆ ಬರಗಾಲ ತಾಂಡವವಾಡುತ್ತಿದ್ದರೆ ಇನ್ನೊಂದು ವರ್ಗದ ಜನತೆ ಅಕ್ಷಯ ತೃತೀಯದ ಹೆಸರಿನಲ್ಲಿ ಏಳೆಂಟು ಕ್ವಿಂಟಾಲ್ಗಟ್ಟಲೇ ಚಿನ್ನ ಖರೀದಿಸಿರುವುದು ವಿಪರ್ಯಾಸ ಎಂದು ನುಡಿದರು. ಜನರಲ್ಲಿ ಮೌಢ್ಯ ತಂದೊಡ್ಡುತ್ತಿರುವ ಅನಾಹುತಗಳ ಬಗ್ಗೆ ಅವರು ಆತಂಕ ವ್ಯಕ್ತಪಡಿಸಿದರು. ಪತ್ರಕರ್ತ ಬಿಪಿ ಮಲ್ಲಪ್ಪನವರು 'ಸುದ್ದಿ ಸಿರಿ' ಪ್ರಶಸ್ತಿಗೆ ಭಾಜನರಾದರು.[ಡೌನ್ಲೋಡ್ ಮಾಡ್ಕೊಳಿ: ವಚನಗಳು ಆಗಲಿ ನಿಮ್ಮ ಕರಗತ]
ವೀರಶೈವ ವೇದಿಕೆಯಿಂದ ಬಸವ ಸಿರಿ ಪ್ರಶಸ್ತಿ ಪ್ರದಾನ
ಮೈಸೂರಿನ ಉರಿಲಿಂಗ ಪೆದ್ದಿ ಮಠದ ಶ್ರೀ ಜ್ಞಾನಪ್ರಕಾಶ ಸ್ವಾಮಿಗಳು ಆಶೀರ್ವಚನ ನೀಡಿ ಬ್ರಾಹ್ಮಣ್ಯ ಮತ್ತು ವೈದಿಕ ಸಂಪ್ರದಾಯಗಳು ದಲಿತರನ್ನು ತಲೆಮಾರುಗಳಿಂದಲೂ ಅಪಾರವಾಗಿ ಶೋಷಿಸುತ್ತಾ ಬಂದಿವೆ. ಎಲ್ಲ ಬಗೆಯ ಸಾಮಾಜಿಕ ಅಸಮಾನತೆ ತಾರತಮ್ಯಗಳಿಗೆ ಬಸವಣ್ಣನ ವಿಚಾರಗಳ ಅಳವಡಿಕೆಯೇ ಪರಿಹಾರ ಎಂಡೌನ್ಲೋಡ್ ಮಾಡ್ಕೊಳಿ: ವಚನಗಳು ಆಗಲಿ ನಿಮ್ಮ ಕರಗತದು ಅನೇಕ ದೃಷ್ಟಾಂತಗಳ ಮೂಲಕ ಅವರು ವಿವರಿಸಿದರು.
ವೇದಿಕೆಯಲ್ಲಿ ಹಾಜರಿದ್ದ ವಿಧಾನ ಪರಿಷತ್ ಸದಸ್ಯ ಅಶ್ವಥ ನಾರಾಯಣ, ನಿವೃತ್ತ ಐಎಎಸ್ ಅಧಿಕಾರಿ ಕೆ.ಶಿವರಾಮ್ ಕೂಡಾ ಅನೇಕ ವಿಷಯಗಳನ್ನು ಸಭೆಯಲ್ಲಿ ಹಂಚಿಕೊಂಡರು. ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅವರಿಗೆ ವಿಶೇಷ ಸನ್ಮಾನ ಮಾಡಲಾಯಿತು.
ಈ ಸಂದರ್ಭದಲ್ಲಿ ಮಲ್ಲೇಶ್ವರಂ ಶಾಸಕ ಡಾ.ಅಶ್ವಥ್ ನಾರಾಯಣ, ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಗಿರಿ ಎಂ ಜಾನಕಲ್, ಸ್ಟಾರ್ಸ್ ಕ್ರಿಕೆಟ್ ಲೀಗ್ ನಾಯಕ ಗಜಾನನ ಎಸ್ ಕಲ್ಬುರ್ಗಿ, ವೀರಶೈವ ಲಿಂಗಾಯತ ಯುವ ವೇದಿಕೆ ಕಲ್ಬುರ್ಗಿ ಜಿಲ್ಲಾಧ್ಯಕ್ಷ ರವಿ ಪಾಟೀಲ್, ಚಿತ್ರದುರ್ಗ ಜಿಲ್ಲಾಧ್ಯಕ್ಷ ಜಿಎಸ್ ಯುಧಿಷ್ಠಿರ ಇನ್ನೂ ಅನೇಕ ಗಣ್ಯರು ಹಾಜರಿದ್ದರು. ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಕುಮಾರಿ ಕವನ ಬಸವಕುಮಾರ್ ಕಾರ್ಯಕ್ರಮ ನಿರೂಪಿಸಿದರು.
ಇಂಚರ ಪ್ರವೀಣ್ ಇವರಿಂದ ವಚನ ಗಾಯನ ನಡೆಯಿತು. ಆಗಮಿಸಿದ್ದ ಗಣ್ಯರಿಗೆ ಹಾಗೂ ವೇದಿಕೆಯ ಪದಾಧಿಕಾರಿಗಳಿಗೆ ಗೌರವ ಸಮರ್ಪಣೆಯ ಮೂಲಕ ಕಾರ್ಯಕ್ರಮಕ್ಕೆ ಮಂಗಳ ಹಾಡಲಾಯಿತು.
ಹೆಚ್ಚಿನ ಮಾಹಿತಿ ಸಂಪರ್ಕಿಸಿ: ಶರಣ ಪ್ರಶಾಂತ್ ಕಲ್ಲೂರ್, ರಾಜ್ಯ ಅಧ್ಯಕ್ಷರು, ವೀರಶೈವ ಲಿಂಗಾಯತ ಯುವ ವೇದಿಕೆ (ರಿ.) 92424 44444 / 080 6455 5554
-
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್ -
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ












Click it and Unblock the Notifications