Get Updates
Get notified of breaking news, exclusive insights, and must-see stories!

ಬಸವನಗುಡಿ ಕಡ್ಲೆಕಾಯಿ ಪರಿಷೆ; ಈ ಬಾರಿ ತುತ್ತೂರಿ ಸೌಂಡ್ ಬಂದ್?

ಬೆಂಗಳೂರು, ನವೆಂಬರ್ 26; ಬೆಂಗಳೂರು ನಗರದಲ್ಲಿ ಅತಿ ಹೆಚ್ಚು ಜನರು ಸೇರುವ ಕಾರ್ಯಕ್ರಮಗಳಲ್ಲಿ ಬಸವನಗುಡಿಯಲ್ಲಿ ಮೂರು ದಿನಗಳ ಕಾಲ ನಡೆಯುವ ಕಡ್ಲೆಕಾಯಿ ಪರಿಷೆಯೂ ಒಂದು. ಈ ಪರಿಷೆಯಲ್ಲಿ ತುತ್ತೂರಿ ಶಬ್ದ ಕೇಳಿ ಬರುವುದು ಸಾಮಾನ್ಯ.

ಬುಲ್ ಟೆಂಪಲ್ ರಸ್ತೆಯಲ್ಲಿ ನಡೆಯುವ ಬಸವನಗುಡಿ ಕಡ್ಲೆಕಾಯಿ ಪರಿಷೆಯಲ್ಲಿ ತುತ್ತೂರಿ ಸೌಂಡ್ ನಿಲ್ಲಿಸಿ ಎಂದು ಸ್ಥಳೀಯರು ಪೊಲೀಸರ ಮೊರೆ ಹೋಗಿದ್ದಾರೆ. ಈ ಬಾರಿಯ ಪರಿಷೆ ಡಿಸೆಂಬರ್ 9 ರಿಂದ 11ರ ತನಕ ನಡೆಯಲಿದೆ.

kadale-kai-parishe

ಬಸವನಗುಡಿ ಕಡ್ಲೆಕಾಯಿ ಪರಿಷೆ ಅಧಿಕೃತವಾಗಿ ನಡೆಯುವುದು ಮೂರು ದಿನ. ಆದರೆ ಒಂದು ವಾರದ ಮುಂಚಿನಿಂದ ಅಂಗಡಿಗಳು ಬರುತ್ತವೆ. ನೂರಾರು ಕಡ್ಲೆಕಾಯಿ ವ್ಯಾಪಾರಸ್ಥರು ಆಗಮಿತ್ತಾರೆ. ಇದರ ಜೊತೆಗೆ ವಿವಿಧ ವಸ್ತುಗಳ ಮಾರಾಟದ ಅಂಗಡಿಯೂ ಬರುತ್ತದೆ. ಅದರಲ್ಲಿ ತುತ್ತೂರಿಯೂ ಒಂದು.

ತುತ್ತೂರಿಯ ಸೌಂಡ್ ನಿಲ್ಲಿಸಿ; ಬುಲ್ ಟೆಂಪಲ್ ರಸ್ತೆಯಲ್ಲಿ ಚುಮು ಚುಮು ಚಳಿಯ ನಡುವೆ ಸಾವಿರಾರು ಜನರ ನಡುವೆ ಕಡ್ಲೆಕಾಯಿ ತಿನ್ನುತ್ತಾ ತುತ್ತೂರಿ ಊದುತ್ತಾ ಹೋಗುವ ಜನರಿದ್ದಾರೆ. ಇದು ಹಲವರಿಗೆ ಸಂತೋಷ ನೀಡುತ್ತದೆ. ಆದರೆ ಇದರ ಶಬ್ದವೇ ಸ್ಥಳೀಯ ನಿವಾಸಿಗಳಿಗೆ ಕಿರಿಕಿರಿ ತಂದಿದೆ.

ಹಲವು ವರ್ಷಗಳಿಂದಲೂ ತುತ್ತೂರಿ ಮಾರಾಟಕ್ಕೆ ತಡೆ ಹಾಕಬೇಕು ಎಂಬ ಬೇಡಿಕೆ ಇದೆ. ಈಗ ಮತ್ತೆ ಕಡ್ಲೆಕಾಯಿ ಪರಿಷೆ ಎದುರಾಗಿದೆ. ಆದ್ದರಿಂದ ಬಸವನಗುಡಿ ನಿವಾಸಿಗಳ ಹಿತರಕ್ಷಣಾ ವೇದಿಕೆ ತುತ್ತೂರಿ ಸೌಂಡ್ ನಿಲ್ಲಿಸಿ ಎಂದು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಯುವಕರು, ಕಾಲೇಜು ವಿದ್ಯಾರ್ಥಿ/ ವಿದ್ಯಾರ್ಥಿನಿಯರು, ಮಕ್ಕಳು ತುತ್ತೂರಿ ಊದುತ್ತಾ ಸಾಗುತ್ತಾರೆ. ಬಸನವಗುಡಿಯಲ್ಲಿ ಕೊಂಡ ತುತ್ತೂರಿ ಶಬ್ದ ಇತರ ಬಡಾವಣೆಗಳಲ್ಲಿಯೂ ಕೇಳಿ ಬರುತ್ತದೆ. ಇದು ಕೆಲವರಿಗೆ ಕಿರಿಕಿರಿ ಉಂಟು ಮಾಡುತ್ತದೆ.

ತುತ್ತೂರಿ ಬಳಕೆಯಿಂದ ಶಬ್ದ ಮಾಲಿನ್ಯವಾಗುತ್ತದೆ. ವೃದ್ಧರು, ಹೃದ್ರೋಗಿಗಳಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಕಡ್ಲೆಕಾಯಿ ಪರಿಷೆಯಲ್ಲಿ ತುತ್ತೂರಿಯ ಶಬ್ಧವನ್ನು ನಿಲ್ಲಿಸಿ, ಮಾರಾಟ ಮಾಡದಂತೆ ಕ್ರಮ ಕೈಗೊಳ್ಳಿ ಎಂದು ಬಸವನಗುಡಿ ನಿವಾಸಿಗಳ ಹಿತರಕ್ಷಣಾ ವೇದಿಕೆ ಪೊಲೀಸರಿಗೆ ದೂರು ನೀಡಿದೆ.

ಪೊಲೀಸರು ಸಹ ದೂರು ಸ್ವೀಕಾರ ಮಾಡಿದ್ದು, ಈ ಬಾರಿ ತುತ್ತೂರಿ ಮಾರಾಟ, ಊದುವುದಕ್ಕೆ ಖಂಡಿತ ತಡೆ ಹಾಕುತ್ತೇವೆ ಎಂದು ಭರವಸೆ ನೀಡಿದ್ದಾರೆ. ಈ ಬಾರಿಯ ಕಡ್ಲೆಕಾಯಿ ಪರಿಷೆ ಆರಂಭಕ್ಕೆ ಕೆಲವೇ ದಿನಗಳು ಉಳಿದಿವೆ. ಬುಲ್ ಟೆಂಪಲ್ ರಸ್ತೆಯಲ್ಲಿ ಅಂಗಡಿಗಳ ಜಮಾವಣೆ ಆರಂಭವಾಗಿದೆ. ಪೊಲೀಸರು ಯಾವ ಕ್ರಮ ಕೈಗೊಳ್ಳಲಿದ್ದಾರೆ? ಎಂದು ಕಾದು ನೋಡಬೇಕಿದೆ.

ಬಸವನಗುಡಿ ನಿವಾಸಿಗಳ ಹಿತರಕ್ಷಣಾ ವೇದಿಕೆ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಕೋರ್ಟ್ ಮೆಟ್ಟಿಲೇರುತ್ತೇವೆ ಎಂದು ಸಹ ಎಚ್ಚರಿಕೆ ನೀಡಿದ್ದಾರೆ. ತುತ್ತೂರಿ ಮಾರಾಟಗಾರರನ್ನು ಗುರುತಿಸಿ ಅವರಿಗೆ ಪೊಲೀಸರು ಎಚ್ಚರಿಕೆ ನೀಡುವ ನಿರೀಕ್ಷೆ ಇದೆ.

ಬೆಂಗಳೂರು ನಗರದಲ್ಲಿ ನಡೆಯುವ ಕರಗ, ಬಸವನಗುಡಿ ಕಡ್ಲೆಕಾಯಿ ಪರಿಷೆ ಲಕ್ಷಾಂತರ ಜನರನ್ನು ಸೆಳೆಯುತ್ತದೆ. ಕಡ್ಲೆಕಾಯಿ ಪರಿಷೆಗೆ ಅಕ್ಕಪಕ್ಕದ ಜಿಲ್ಲೆಗಳಿಂದ ವ್ಯಾಪಾರಿಗಳು ಬರುವ ಹಾಗೆ ನಗರದ ವಿವಿಧ ಬಡಾವಣೆಯ ಜನರು ಆಗಮಿಸುತ್ತಾರೆ.

ಬುಲ್ ಟೆಂಪಲ್ ರಸ್ತೆಯಲ್ಲಿ ವಾಹನ ಸಂಚಾರವನ್ನು ಮೂರು ದಿನಗಳ ಕಾಲ ಸಂಪೂರ್ಣ ಬಂದ್ ಮಾಡಿ ಕಡ್ಲೆಕಾಯಿ ಸೇರಿದಂತೆ ವಿವಿಧ ವ್ಯಾಪಾರಿಗಳಿಗೆ ಜಾಗವನ್ನು ಮಾಡಿಕೊಡಲಾಗುತ್ತದೆ. ದೊಡ್ಡ ಗಣಪತಿ ದೇವಾಲಯಕ್ಕೆ ಆಗಮಿಸುವ ಜನರು ದೇವರಿಗೆ ನಮಸ್ಕಾರ ಮಾಡಿ, ಬುಲ್ ಟೆಂಪಲ್ ರೋಡ್‌ನಲ್ಲಿ ಒಂದು ಸುತ್ತು ಹೊಡೆದು ವಾಪಸ್ ಆಗುತ್ತಾರೆ.

ಕಡ್ಲೆಕಾಯಿ ಪರಿಷೆ ಸಂದರ್ಭದಲ್ಲಿ ಭದ್ರತೆ, ಸಂಚಾರ ದಟ್ಟಣೆ ನಿವಾರಿಸಲು ಪೊಲೀಸರು ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಾರೆ. ಇಂತಹ ಸಂದರ್ಭದಲ್ಲಿಯೇ ಈ ಬಾರಿ ತುತ್ತೂರಿಯ ಶಬ್ದವನ್ನು ನಿಲ್ಲಿಸಿ ಎಂದು ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+