ಮತ್ತೆ ಬಂತು ಕಡೆಲೆಕಾಯಿ ಪರಿಷೆ, ಬನ್ನಿ ಬಸವನಗುಡಿಗೆ
ಬೆಂಗಳೂರು, ನವೆಂಬರ್ 10 : ಬೆಂಗಳೂರಿನ ಬಸವನಗುಡಿಯಲ್ಲಿ ನಡೆಯುವ ಕಡಲೆಕಾಯಿ ಪರಿಷೆಗೆ ದಿನಗಣನೆ ಆರಂಭವಾಗಿದೆ. ನವೆಂಬರ್ 13 ರಂದು ಕಡಲೆಕಾಯಿ ಪರಿಷೆಗೆ ಚಾಲನೆ ಸಿಗಲಿದೆ. ಸೋಮವಾರದಿಂದ ಎರಡು ದಿನಗಳಕಾಲ ಪರಿಷೆ ನಡೆಯಲಿದೆ.
ದೊಡ್ಡ ಬಸವಣ್ಣ ದೇವಸ್ಥಾನದ ನಂದಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೋಮವಾರ ಪರಿಷೆ ಆರಂಭವಾಗುತ್ತದೆ. ಆದರೆ, ಈಗಾಗಲೇ ಕಡೆಲೆಕಾಯಿ ಮಾರುವ ರೈತರು ಅಂಗಡಿಗಳನ್ನು ತೆರೆದಿದ್ದು, ಜನರು ಆಗಮಿಸುತ್ತಿದ್ದಾರೆ.

ರಾಮಕೃಷ್ಣ ಆಶ್ರಮದಿಂದ ಬಿಎಂಎಸ್ ಕಾಲೇಜು ವೃತ್ತದವರೆಗೂ, ಕಡಲೆಕಾಯಿ, ತಿಂಡಿ-ತಿನಿಸು, ಆಟಿಕೆ ಅಂಗಡಿಗಳು ಇರುತ್ತವೆ. ಕಡಲೆಕಾಯಿ ಪ್ರಿಯರಿಗಾಗಿ ಬೇಯಿಸಿದ ಕಡಲೆ, ಹುರಿಗಡಲೆ, ಸಕ್ಕರೆ ಮಿಶ್ರಿತ ಕಡಲೆ ಹೀಗೆ ವಿವಿಧ ಬಗೆಯ ಕಡಲೆಗಳು ಲಭ್ಯವಿರಲಿದೆ.
ಈಗಾಗಲೇ ಮಾರಾಟ ಆರಂಭ : ಶ್ರೀನಿವಾಸಪುರ, ಕೋಲಾರ, ಚಿಕ್ಕಬಳ್ಳಾಪುರ, ಮಾಗಡಿ, ಮಂಡ್ಯ, ಮೈಸೂರು, ತುಮಕೂರು, ಕುಣಿಗಲ್ ಹೀಗೆ ನಾನಾ ಭಾಗಗಳಿಂದ ಅಷ್ಟೇ ಅಲ್ಲದೆ ಆಂಧ್ರಪ್ರದೇಶ, ತಮಿಳುನಾಡಿನ ರೈತರು ಹಾಗೂ ವ್ಯಾಪರಿಗಳು ಕೂಡ ಪರಿಷೆಯಲ್ಲಿ ಭಾಗವಹಿಸುತ್ತಾರೆ.
ಪರಿಷೆಗಾಗಿ ಕಡಲೆಕಾಯಿಗಳನ್ನು ತಂದ ರೈತರು ಈಗಾಗಲೇ ಮಾರಾಟವನ್ನು ಆರಂಭಿಸಿದ್ದಾರೆ. ಲೀಟರ್ ಮಾನದಂಡದಲ್ಲಿ ಕಡಲೆಕಾಯಿ ಗುಣಮಟ್ಟಕ್ಕೆ ತಕ್ಕಂತೆ 25ರೂ.ನಿಂದ 60ರೂ.ವರೆಗೂ ದರ ನಿಗದಿಮಾಡಲಾಗಿದೆ.
ಪರಿಷೆಯಲ್ಲಿ ಪ್ಲಾಸ್ಟಿಕ್ ಬ್ಯಾಗ್ ಜಾಗೃತಿ : ಐತಿಹಾಸಿಕ ಕಡಲೆಕಾಯಿ ಪರಿಷೆಯಲ್ಲಿ ಈ ಬಾರಿಯೂ ಪ್ಲಾಸ್ಟಿಕ್ ಮುಕ್ತ ಪರಿಷೆಯನ್ನಾಗಿಸಲು ರಾಜ್ಯ ಮುಜರಾಯಿ ಇಲಾಖೆ ಮುಂದಾಗಿದೆ. ಬಸವನಗುಡಿಯ ಬಿಎಂಎಸ್ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ವತಿಯಿಂದ ವ್ಯಾಪಾರಿಗಳು ಮತ್ತು ಗ್ರಾಹಕರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಕೈಗೊಳ್ಳಲಾಗಿದೆ.
4 ಲಕ್ಷ ಭಕ್ತರು ಸೇರುವ ನಿರೀಕ್ಷೆ : ಈ ಬಾರಿಯ ಕಡಲೆಕಾಯಿ ಪರಿಷೆಗೆ 4 ಲಕ್ಷ ಭಕ್ತರು ಸೇರುವ ನಿರೀಕ್ಷೆ ಇದೆ. ಇದಕ್ಕೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಸೋಮವಾರ ಬೆಳಗ್ಗೆ 6ಗಂಟೆಯಿಂದಲೇ ನಂದಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. 5 ಮೂಟೆ ಕಡಲೆಕಾಯಿ ಅಭಿಷೇಕ ಕ್ಷೀರಾಭಿಷೇಕ, ಮಾಡಲಾಗುತ್ತದೆ.
-
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ












Click it and Unblock the Notifications