Get Updates
Get notified of breaking news, exclusive insights, and must-see stories!

Kadalekai Parishe 2022: ಐತಿಹಾಸಿಕ ಬಸವನಗುಡಿ ಕಡಲೆಕಾಯಿ ಪರಿಷೆಯಲ್ಲಿ ಈ ಬಾರಿ ತೆಪ್ಪೋತ್ಸವ

ಕಳ್ಳೆಕಾಯ್...ಕಳ್ಳೆಕಾಯ್...ಗರುಮ ಗರಂ ಕಳ್ಳೇಕಾಯಿ...ತಾಜಾ ತಾಜಾ ಕಳ್ಳೆಕಾಯ್..ಬೆಂಗಳೂರು ಕರಗದ.. ಬಸವನ ಪರಿಷೇಯ.. ಬಡವರ ಬಾದಾಮಿ ಕಳ್ಳೇಕಾಯ್... ಎಂದು ಹಾಡು ಗುನುಗುತ್ತಾ, ಕೈಯಲ್ಲಿ ಕಡಲೆಕಾಯಿ ಪೊಟ್ಟಣ್ಣ ಹಿಡಿದುಕೊಂಡು ಸಾಗುವ ಬಸವನಗುಡಿಯ ಪರಿಷೆ ಇನ್ನೇನು ಬಂದೆ ಬಿಡ್ತು.

ಬೆಂಗಳೂರು ಜನರು, ಬೆಂಗಳೂರಿನ ಸುತ್ತಲಿನ ಜಿಲ್ಲೆಗಳ ಜನರು ಬಹು ಆಸಕ್ತಿಯಿಂದ ವರ್ಷಪೂರ್ತಿ ಕಾಯುವ ಬಸವನಗುಡಿ ಪರಿಷೆ ನವೆಂಬರ್ ತಿಂಗಳ 21 ರಂದು ಪ್ರಾರಂಭವಾಗಲಿದೆ. ಈ ಬಾರಿಯ ಮೂರು ದಿನಗಳ ಪರಿಷೆಗೆ ನವೆಂಬರ್ 20ರ ಸಂಜೆಯೇ ಚಾಲನೆ ದೊರೆಯಲಿದೆ.

ಕಡೇ ಕಾರ್ತಿಕದ ಸೋಮವಾರ ಕಡಲೆಕಾಯಿ ಪರಿಷೆ ನಡೆಯಲಿದೆ. ಶನಿವಾರವೇ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬರುವ ಕಾರಣ ಪೂರ್ವ ಸಿದ್ಧತೆಗಳನ್ನು ಮಾಡಕೊಳ್ಳಲಾಗುತ್ತಿದೆ. ಭಾನುವಾರ ಸಂಜೆ ಪರಿಷೆಗೆ ಚಾಲನೆ ನೀಡಿ ಸೋಮವಾರದಿಂದ ಜನರು ಯಾವುದೇ ತೊಡಕುಗಳಿಲ್ಲದೆ ಕಡಲೆಕಾಯಿ ಪರಿಷೆಯನ್ನು ಕಣ್ತುಂಬಿಕೊಳ್ಳುವಂತೆ ಮಾಡಲು ಅಧಿಕಾರಿಗಳು ಸಜ್ಜಾಗಿದ್ದಾರೆ.

ಪರಿಷೆಯಲ್ಲಿ ದೊಡ್ಡ ಪ್ರಮಾಣದಲ್ಲಿ ರೈತರ ಭಾಗಿ ನಿರೀಕ್ಷೆ

ಪರಿಷೆಯಲ್ಲಿ ದೊಡ್ಡ ಪ್ರಮಾಣದಲ್ಲಿ ರೈತರ ಭಾಗಿ ನಿರೀಕ್ಷೆ

ಕಡಲೆಕಾಯಿ ಪರಿಷೆ ಕೆಲವರಿಗೆ ಒಂದು ಜಾತ್ರೆಯ ಸಂಭ್ರಮವನ್ನು ನೀಡಿದರೆ, ರೈತರಿಗೆ ಇದೊಂದು ಪೂಜಾ ಸ್ಥಳ. ತಮ್ಮ ದೇವರಿಗೆ ನೈವೇದ್ಯ ಅರ್ಪಿಸುವಂತೆ ದೊಡ್ಡಬಸವಣ್ಣನಿಗೆ, ನಂದಿಗೆ ಕಡಲೆಕಾಯಿ ಅಭಿಷೇಕ ಮಾಡಿ ಸಂಭ್ರಮಿಸುತ್ತಾರೆ.

ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಈ ಬಾರಿ ಉತ್ತಮ ಮಳೆಯಾಗಿದ್ದು, ಕಡಲೆಕಾಯಿ ಬೆಳೆ ಕೂಡಾ ಉತ್ತಮವಾಗಿದೆ. ಹೀಗಾಗಿ ಕನಕಪುರ, ರಾಮನಗರ, ಮಾಗಡಿ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ ಮತ್ತಿತರ ಜಿಲ್ಲೆಗಳ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಇದರ ಜೊತೆಗೆ ಬಗೆ ಬಗೆಯ ಕಡಲೆಕಾಯಿ ಪರಿಷೆಗೆ ಬರಲಿವೆ.

ದಶಕಗಳ ಬಳಿಕ ಕೆಂಪಾಂಬುಧಿ ಕೆರೆಯಲ್ಲಿ ನಂದಿ ತೆಪ್ಪೋತ್ಸವ

ದಶಕಗಳ ಬಳಿಕ ಕೆಂಪಾಂಬುಧಿ ಕೆರೆಯಲ್ಲಿ ನಂದಿ ತೆಪ್ಪೋತ್ಸವ

ಬಸವನಗುಡಿ ಪರಿಷೆಯಲ್ಲಿ ಈ ಬಾರಿ ಮತ್ತೆ ತೆಪ್ಪೋತ್ಸವ ಆರಂಭವಾಗಲಿದೆ. ಇದು ಪರಿಷೆಯ ಆಕರ್ಷಣೆಯೂ ಆಗಲಿದೆ. ಇದರ ಜೊತೆಗೆ ಬ್ಯೂಗಲ್‌ ರಾಕ್‌ ಮತ್ತು ನರಸಿಂಹಸ್ವಾಮಿ ಉದ್ಯಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

2008ರಲ್ಲ ಕೆಂಪಾಂಬುಧಿ ಕೆರೆಯಲ್ಲಿ ನಡೆದಿದ್ದ ನಂದಿ ತೆಪ್ಪೋತ್ಸವ ಬಳಿಕ ನಾನಾ ಕಾರಣಗಳಿಂದ ನಡೆಸಿರಲಿಲ್ಲ. ಈ ಬಾರಿ ಮತ್ತೆ ಅದು ಆರಂಭವಾಗುತ್ತಿದೆ. ಇದು ಪರಿಷೆಗೆ ಹೊಸ ಮೆರಗು ನೀಡಲಿದೆ. ತೆಪ್ಪೋತ್ಸವಕ್ಕೆ ಈಗಾಗಲೇ ಸಿದ್ಧತೆ ನಡೆಯುತ್ತಿದ್ದು, ಕೆರೆಯಲ್ಲಿನ ಪಾಚಿ, ತ್ಯಾಜ್ಯವನ್ನು ಹೊರಹಾಕಲಾಗುತ್ತಿದೆ.

ಪರಿಷೆಯಲ್ಲಿ ಎರಡು ಸಾವಿರಕ್ಕೂ ಹೆಚ್ಚು ಮಳಿಗೆಗಳು

ಪರಿಷೆಯಲ್ಲಿ ಎರಡು ಸಾವಿರಕ್ಕೂ ಹೆಚ್ಚು ಮಳಿಗೆಗಳು

ಪರಿಷೆಗಾಗಿ ಬಸವನಗುಡಿಯಲ್ಲಿ ಸ್ವಚ್ಛತಾ ಕೆಲಸ ಆರಂಭವಾಗಿದೆ. ಪಾದಚಾರಿ ಮಾರ್ಗಗಳ ಮೇಲೆ ಈಗಾಗಲೇ ಅಂಗಡಿ ಮಳಿಗೆಗಳನ್ನು ತೆರಯಲಾಗುತ್ತಿದೆ. ದಾರಿಗಳನ್ನು ಕ್ಲೀನ್ ಮಾಡಿ ಮಳಿಗೆ ಹಾಕುವ ಕಾರ್ಯ ನಡೆಯುತ್ತಿದೆ. ಪರಿಷೆ ಆರಂಭವಾಗುವ ಮುನ್ನವೇ ಕಡಲೆಕಾಯಿ ವ್ಯಾಪಾರ ಶುರುವಾಗಿಬಿಡುತ್ತದೆ.

ಪರಿಷೆಯಲ್ಲಿ ಬಣ್ಣ - ಬಣ್ಣದ ಆಟಿಕೆ, ರುಚಿ ರುಚಿಯಾದ ಕಡಲೆ ಕಾಯಿ, ಜಾತ್ರೆ ತಿನಿಸುಗಳು, ಪೀಪಿ, ಬಲೂನ್‌ಗಳು, ಕಲರ್‌ಪೂಲ್‌ ಲೈಟಿಂಗ್‌ನಲ್ಲಿ ಬಸವನಗುಡಿ ಕಂಗೊಳಿಸುತ್ತದೆ. ಹಳ್ಳಿಗಾಡಿನ ವಾತಾವರಣ ನಿಮ್ಮನ್ನು ಮತ್ತಷ್ಟು ಸೆಳೆಯುತ್ತದೆ. ಈ ಬಾರಿಯ ಪರಿಷೆಯಲ್ಲಿ ಸುಮಾರು ಎರಡು ಸಾವಿರಕ್ಕೂ ಹೆಚ್ಚು ಮಳಿಗೆಗಳು ತೆರೆಯುವ ಸಾಧ್ಯತೆಯಿದೆ.

1537 ರಲ್ಲಿ ಆರಂಭವಾಗಿರುವ ಕಡಲೆಕಾಯಿ ಪರಿಷೆ

1537 ರಲ್ಲಿ ಆರಂಭವಾಗಿರುವ ಕಡಲೆಕಾಯಿ ಪರಿಷೆ

1537 ರಲ್ಲಿ ಬೆಂಗಳೂರಿನ ನಿರ್ಮಾತ ಕೆಂಪೇಗೌಡರು ಬಸವನಗುಡಿ ಬೆಟ್ಟದ ಮೇಲೆ ದೊಡ್ಡ ಬಸವ ದೇವಾಲಯವನ್ನು ಸ್ಥಾಪಿಸಿದರು. ಈ ದೇವಾಲಯವನ್ನು ಬುಲ್ ಟೆಂಪಲ್ ಎಂದು ಕರೆಯಲಾಗುತ್ತದೆ. ಅಂದಿನಿಂದ ಇಲ್ಲಿಗೆ ಸುತ್ತಲಿನ ಗ್ರಾಮಗಳ ರೈತರು ಪ್ರತಿ ವರ್ಷ ಇಲ್ಲಿಗೆ ಬಂದು ತಮ್ಮ ವಾರ್ಷಿಕ ಕಡಲೆಕಾಯಿಯನ್ನು ಬಸವಣ್ಣನಿಗೆ ಅರ್ಪಿಸುತ್ತಾರೆ. ಆ ಸಂಪ್ರದಾಯ ಇಂದಿಗೂ ಮುಂದುವರೆಯುತ್ತಿದೆ.

ಕಡಲೆಕಾಯಿ ಪರಿಷೆಯಲ್ಲಿ ವಿವಿಧ ಬಗೆಯ ಥರಾವರಿ ಕಡಲೆಕಾಯಿ ದೊರೆಯುತ್ತದೆ. ಎರಡು ಬೀಜಗಳಿರುವ, ಮೂರು ಬೀಜಗಳಿರುವ ಕಾಯಿಗಳ ಜೊತೆಗೆ ಒಂಟಿ ಬೀಜದ ಕಾಯಿಗಳು ದೊರೆಯುತ್ತದೆ. ಬಾದಾಮಿ, ಗಡಂಗ್, ಸಾಮ್ರಾಟ್ ಸೇರಿದಂತೆ ಹಲವು ವಿಧಗಳ ಕಡಲೆಕಾಯಿ ಇಲ್ಲಿರುತ್ತದೆ. ಇದರ ಜೊತೆಗೆ ಕಪ್ಪು, ಕೆಂಪು ಮಣ್ಣಿನ ಘಮ ಬೇರೆ ಅವುಗಳ ಜೊತೆಗೆ ಬೆರೆತಿರುತ್ತದೆ.

ಕಡಲೆಕಾಯಿ ಪರಿಷೆ ಬೆಂಗಳೂರಿಗರಿಗೆ ಒಂದು ಹಳ್ಳಿಯ ವಾತಾವರಣದ ಅನುಭವ ನೀಡುತ್ತದೆ. ವರ್ಷದಿಂದ ವರ್ಷಕ್ಕೆ ಜಾತ್ರೆಯಲ್ಲಿ ಭಾರೀ ಜನಸಂಖ್ಯೆ ಸೇರುತ್ತಲೇ ಇದೆ. ಜನರನ್ನು ನಿಯಂತ್ರಿಸುವುದು ಕೂಡ ಅಧಿಕಾರಿಗಳಿಗೆ ಸವಾಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+