Kadalekai Parishe: ನಾಳೆ ಸೋಮವಾರ ಕಡಲೆಕಾಯಿ ಪರಿಷೆಗೆ ವಿದ್ಯುಕ್ತ ಚಾಲನೆ, ಸಿಂಗಾರಗೊಂಡ ಬಸವನಗುಡಿ, ಏನೆಲ್ಲ ಇದೆ?
ಬೆಂಗಳೂರು, ಡಿಸೆಂಬರ್ 10: ಎರಡು ದಿನಗಳಿಂದ ತರಹೇವಾರಿ ಕಡಲೆಕಾಯಿಗಳಿಂದ ತುಂಬಿ ತುಳುಕುತ್ತಿರುವ ಬೆಂಗಳೂರಿನ ಐತಿಹಾಸಿಕ ಕಡಿಲೆಕಾಯಿ ಪರಿಷೆಗೆ (Bengaluru Kadalekai Parishe) ಸೋಮವಾರ ಅಧಿಕೃತ ಚಾಲನೆ ದೊರೆಯಲಿದೆ. ಈ ಸಂಬಂಧ ಮಧುವಣಗಿತ್ತಿಯಂತೆ ಬಸವನಗುಡಿಯ ದೊಡ್ಡ ಗಣಪತಿ ದೇವಸ್ಥಾನ ಸುತ್ತಮುತ್ತಲಿನ ಆವರಣ, ರಸ್ತೆ ಸಿದ್ಧವಾಗಿದೆ. ರಾಶಿ ರಾಶಿ ಕಡಲೆಕಾಯಿ ಜನರನ್ನು ಕೈ ಬೀಸಿ ಕರೆಯುತ್ತಿವೆ.
ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಕಡಲೆಕಾಯಿ ಪರಿಷೆಗೆ ಅತಿಥಿಗಳಾಗಿ ಆಗಮಿಸಲಿದ್ದಾರೆ. ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಪರಿಷೆ ಉದ್ಘಾಟಿಸಲಿದ್ದಾರೆ. ಸುಮಾರು 200 ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದೆ. ಸುರಕ್ಷತೆಗೆ ಹೆಚ್ಚು ಆದ್ಯತೆ ನೀಡಲಾಗಿದೆ. ಅಗತ್ಯ ವ್ಯವಸ್ಥೆ ಕೈಗೊಳ್ಳಲಾಗಿದೆ.

ದೊಡ್ಡ ಬಸವಣ್ಣ, ದೊಡ್ಡಗಣಪತಿ ದೇವಸ್ಥಾನಗಳಲ್ಲಿ ದೇವರಿಗೆ ವಿಶೇಷ ಅಲಂಕಾರ, ಪೂಜೆ, ಅಭಿಷೇಕ ನಡೆಯಲಿವೆ. ಕಡಲೆಕಾಯಿಗಳಿಂದ ದೊಡ್ಡಗಣಪತಿಗೆ ಅಭಿಷೇಕ ನಡೆಯಲಿದೆ. ರೈತರು ಮತ್ತು ವ್ಯಾಪಾರಿಗಳು ಸೇರಿದಂತೆ ಸಾರ್ವಜನಿಕರು ವಿಶೇಷ ಪೂಜೆ ಸಲ್ಲಿಸುತ್ತಾರೆ.
ಕಡಲೆ ವ್ಯಾಪಾರ ಆರಂಭ: ಶನಿವಾರ ಭಾರೀ ಜನ
ಸೋಮವಾರ ವಿದ್ಯುಕ್ತವಾಗಿ ಚಾಲನೆಗೊಳ್ಳಲಿರುವ ಬಸವನಗುಡಿಯ ಇಕ್ಕೇಲಗಳಲ್ಲಿ ರೈತರು, ವ್ಯಾಪಾರಿಗಳು ನಾನಾ ಬಗೆಯ ಹಸಿ, ಹುರಿದ ಕಡಲೆಕಾಯಿ ಹಾಕಿಕೊಂಡು ವ್ಯಾಪಾರ ಆರಂಭಿಸಿದ್ದಾರೆ. ಜನ ತಂಡೋಪ ತಂಡವಾಗಿ ಪರಿಷೆಗೆ ಆಗಮಿಸುತ್ತಿದ್ದಾರೆ. ಹಸಿದ ಮತ್ತು ಹುರಿದ ಕಡಲೆ ಕಾಯಿ ಖರೀದಿಸುತ್ತಿದ್ದಾರೆ, ಸವಿಯುತ್ತಿದ್ದಾರೆ. ನ
ಶನಿವಾರ ಸಾಕಷ್ಟು ಮಂದಿ ಪರಿಷೆಯತ್ತ ಮುಖ ಮಾಡಿ ಕಡಲೆಕಾಯಿ ಖರೀದಿಸಿ ಹರ್ಷ ವ್ಯಕ್ತಪಡಿಸಿದ್ದಾರೆ. ಇಂದು ಭಾನುವಾರ ಸಹ ವಾರಾಂತ್ಯ ಹಿನ್ನೆಲೆಯಲ್ಲಿ ಅತ್ಯಧಿಕ ಜನರು ಆಗಮಿಸುವ ನಿರೀಕ್ಷೆ ಇದೆ. ಸದ್ಯ ಬಸವನಗುಡಿಯ ರಸ್ತೆಗಳು ವಿದ್ಯುತ್ ದೀಪಗಳಿಂದ ಅಲಂಕಾರಗೊಂಡಿವೆ. ರಸ್ತೆ ಎರಡು ಬದಿಯಲ್ಲಿ ಕಡಲೆಕಾಯಿ ರಾಶಿಗಳೇ ಕಾಣಿಸುತ್ತವೆ.

ಮಳಿಗೆಗಳಿಂದ ತುಂಬಿರುವ ರಸ್ತೆಗಳು: ಅಗತ್ಯ ಕ್ರಮ
ಆಟಿಕೆ ಸಾಮಾನುಗಳು, ಗೃಹ ಉಪಯೋಗಿ ವಸ್ತುಗಳು, ಅಲಂಕಾರಿಕೆ ವಸ್ತುಗಳ ಮಳಿಗೆ, ಬಗೆ ಬಗೆಯ ತಿಂಡಿ-ತಿನಿಸುಗಳ ಮಳಿಗೆಗಳು ರಸ್ತೆಗಳ ಪಕ್ಕ ತೆರೆಯಲಾಗಿದ್ದು, ಸಾರ್ವಜನಿಕರು, ಮಕ್ಕಳು, ಮಹಿಳೆಯರನ್ನು ಆಕರ್ಷಿಸುತ್ತಿವೆ.
ಪರಿಷೆಯಲ್ಲಿ ಸಿಸಿಟಿ ಕ್ಯಾಮೆರಾ ಕಣ್ಗಾವಲು ಇಡಲಾಗಿದೆ. ದೇವಸ್ಥಾನ ಸುತ್ತಮುತ್ತ ಅಗತ್ಯ ಎಚ್ಚರಿಕೆ, ಸೂಕ್ತ ಭದ್ರತೆ ಇರಲಿದೆ. ಸಂಚಾರ ದಟ್ಟಣೆ ಆಗದಂತೆ ನೋಡಿಕೊಳ್ಳುವ ಜೊತೆಗೆ ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ತುರ್ತು ಸಂದರ್ಭ ಎದುರಾದರೂ ನಿರ್ವಹಿಸಲು ಕ್ರಮ ವಹಿಸಲಾಗಿದೆ.
ಸಂಜೆ ತೆಪ್ಪೋತ್ಸವ
ನಾಳೆ ಸೋಮವಾರ ಸಂಜೆ ಆರು ಗಂಟೆಗೆ ಕಂಪಾಂಬುದಿ ಕೆರೆಯಲ್ಲಿ ತೆಪ್ಪೋತ್ಸವ (Teppotsava in Kempambudi lake)
ನಡೆಯಲಿದೆ. ಈ ವೇಳೆ ಕೆರೆಯ ಸುತ್ತ ಮುತ್ತ ವಿದ್ಯುತ್ ದೀಪಗಳು ಆಕರ್ಷಣೀಯವಾಗಿ ಕಾಣಲಿದೆ.
-
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
UGCET ಅಭ್ಯರ್ಥಿಗಳ ಗಮನಕ್ಕೆ: ಇದೇ ತಿಂಗಳು CET ಪರೀಕ್ಷೆ, ರಿಲೀಸಾದ ನಕಲಿ ಲಿಂಕ್ ಬಗ್ಗೆ ಎಚ್ಚರ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್











Click it and Unblock the Notifications