Kadalekai Parishe: ನಾಳೆ ಸೋಮವಾರ ಕಡಲೆಕಾಯಿ ಪರಿಷೆಗೆ ವಿದ್ಯುಕ್ತ ಚಾಲನೆ, ಸಿಂಗಾರಗೊಂಡ ಬಸವನಗುಡಿ, ಏನೆಲ್ಲ ಇದೆ?
ಬೆಂಗಳೂರು, ಡಿಸೆಂಬರ್ 10: ಎರಡು ದಿನಗಳಿಂದ ತರಹೇವಾರಿ ಕಡಲೆಕಾಯಿಗಳಿಂದ ತುಂಬಿ ತುಳುಕುತ್ತಿರುವ ಬೆಂಗಳೂರಿನ ಐತಿಹಾಸಿಕ ಕಡಿಲೆಕಾಯಿ ಪರಿಷೆಗೆ (Bengaluru Kadalekai Parishe) ಸೋಮವಾರ ಅಧಿಕೃತ ಚಾಲನೆ ದೊರೆಯಲಿದೆ. ಈ ಸಂಬಂಧ ಮಧುವಣಗಿತ್ತಿಯಂತೆ ಬಸವನಗುಡಿಯ ದೊಡ್ಡ ಗಣಪತಿ ದೇವಸ್ಥಾನ ಸುತ್ತಮುತ್ತಲಿನ ಆವರಣ, ರಸ್ತೆ ಸಿದ್ಧವಾಗಿದೆ. ರಾಶಿ ರಾಶಿ ಕಡಲೆಕಾಯಿ ಜನರನ್ನು ಕೈ ಬೀಸಿ ಕರೆಯುತ್ತಿವೆ.
ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಕಡಲೆಕಾಯಿ ಪರಿಷೆಗೆ ಅತಿಥಿಗಳಾಗಿ ಆಗಮಿಸಲಿದ್ದಾರೆ. ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಪರಿಷೆ ಉದ್ಘಾಟಿಸಲಿದ್ದಾರೆ. ಸುಮಾರು 200 ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದೆ. ಸುರಕ್ಷತೆಗೆ ಹೆಚ್ಚು ಆದ್ಯತೆ ನೀಡಲಾಗಿದೆ. ಅಗತ್ಯ ವ್ಯವಸ್ಥೆ ಕೈಗೊಳ್ಳಲಾಗಿದೆ.

ದೊಡ್ಡ ಬಸವಣ್ಣ, ದೊಡ್ಡಗಣಪತಿ ದೇವಸ್ಥಾನಗಳಲ್ಲಿ ದೇವರಿಗೆ ವಿಶೇಷ ಅಲಂಕಾರ, ಪೂಜೆ, ಅಭಿಷೇಕ ನಡೆಯಲಿವೆ. ಕಡಲೆಕಾಯಿಗಳಿಂದ ದೊಡ್ಡಗಣಪತಿಗೆ ಅಭಿಷೇಕ ನಡೆಯಲಿದೆ. ರೈತರು ಮತ್ತು ವ್ಯಾಪಾರಿಗಳು ಸೇರಿದಂತೆ ಸಾರ್ವಜನಿಕರು ವಿಶೇಷ ಪೂಜೆ ಸಲ್ಲಿಸುತ್ತಾರೆ.
ಕಡಲೆ ವ್ಯಾಪಾರ ಆರಂಭ: ಶನಿವಾರ ಭಾರೀ ಜನ
ಸೋಮವಾರ ವಿದ್ಯುಕ್ತವಾಗಿ ಚಾಲನೆಗೊಳ್ಳಲಿರುವ ಬಸವನಗುಡಿಯ ಇಕ್ಕೇಲಗಳಲ್ಲಿ ರೈತರು, ವ್ಯಾಪಾರಿಗಳು ನಾನಾ ಬಗೆಯ ಹಸಿ, ಹುರಿದ ಕಡಲೆಕಾಯಿ ಹಾಕಿಕೊಂಡು ವ್ಯಾಪಾರ ಆರಂಭಿಸಿದ್ದಾರೆ. ಜನ ತಂಡೋಪ ತಂಡವಾಗಿ ಪರಿಷೆಗೆ ಆಗಮಿಸುತ್ತಿದ್ದಾರೆ. ಹಸಿದ ಮತ್ತು ಹುರಿದ ಕಡಲೆ ಕಾಯಿ ಖರೀದಿಸುತ್ತಿದ್ದಾರೆ, ಸವಿಯುತ್ತಿದ್ದಾರೆ. ನ
ಶನಿವಾರ ಸಾಕಷ್ಟು ಮಂದಿ ಪರಿಷೆಯತ್ತ ಮುಖ ಮಾಡಿ ಕಡಲೆಕಾಯಿ ಖರೀದಿಸಿ ಹರ್ಷ ವ್ಯಕ್ತಪಡಿಸಿದ್ದಾರೆ. ಇಂದು ಭಾನುವಾರ ಸಹ ವಾರಾಂತ್ಯ ಹಿನ್ನೆಲೆಯಲ್ಲಿ ಅತ್ಯಧಿಕ ಜನರು ಆಗಮಿಸುವ ನಿರೀಕ್ಷೆ ಇದೆ. ಸದ್ಯ ಬಸವನಗುಡಿಯ ರಸ್ತೆಗಳು ವಿದ್ಯುತ್ ದೀಪಗಳಿಂದ ಅಲಂಕಾರಗೊಂಡಿವೆ. ರಸ್ತೆ ಎರಡು ಬದಿಯಲ್ಲಿ ಕಡಲೆಕಾಯಿ ರಾಶಿಗಳೇ ಕಾಣಿಸುತ್ತವೆ.

ಮಳಿಗೆಗಳಿಂದ ತುಂಬಿರುವ ರಸ್ತೆಗಳು: ಅಗತ್ಯ ಕ್ರಮ
ಆಟಿಕೆ ಸಾಮಾನುಗಳು, ಗೃಹ ಉಪಯೋಗಿ ವಸ್ತುಗಳು, ಅಲಂಕಾರಿಕೆ ವಸ್ತುಗಳ ಮಳಿಗೆ, ಬಗೆ ಬಗೆಯ ತಿಂಡಿ-ತಿನಿಸುಗಳ ಮಳಿಗೆಗಳು ರಸ್ತೆಗಳ ಪಕ್ಕ ತೆರೆಯಲಾಗಿದ್ದು, ಸಾರ್ವಜನಿಕರು, ಮಕ್ಕಳು, ಮಹಿಳೆಯರನ್ನು ಆಕರ್ಷಿಸುತ್ತಿವೆ.
ಪರಿಷೆಯಲ್ಲಿ ಸಿಸಿಟಿ ಕ್ಯಾಮೆರಾ ಕಣ್ಗಾವಲು ಇಡಲಾಗಿದೆ. ದೇವಸ್ಥಾನ ಸುತ್ತಮುತ್ತ ಅಗತ್ಯ ಎಚ್ಚರಿಕೆ, ಸೂಕ್ತ ಭದ್ರತೆ ಇರಲಿದೆ. ಸಂಚಾರ ದಟ್ಟಣೆ ಆಗದಂತೆ ನೋಡಿಕೊಳ್ಳುವ ಜೊತೆಗೆ ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ತುರ್ತು ಸಂದರ್ಭ ಎದುರಾದರೂ ನಿರ್ವಹಿಸಲು ಕ್ರಮ ವಹಿಸಲಾಗಿದೆ.
ಸಂಜೆ ತೆಪ್ಪೋತ್ಸವ
ನಾಳೆ ಸೋಮವಾರ ಸಂಜೆ ಆರು ಗಂಟೆಗೆ ಕಂಪಾಂಬುದಿ ಕೆರೆಯಲ್ಲಿ ತೆಪ್ಪೋತ್ಸವ (Teppotsava in Kempambudi lake)
ನಡೆಯಲಿದೆ. ಈ ವೇಳೆ ಕೆರೆಯ ಸುತ್ತ ಮುತ್ತ ವಿದ್ಯುತ್ ದೀಪಗಳು ಆಕರ್ಷಣೀಯವಾಗಿ ಕಾಣಲಿದೆ.
-
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ












Click it and Unblock the Notifications