ಮಳೆನೀರು ಕೊಳಚೆನೀರು ಬೇರ್ಪಡಿಸುವ ಯೋಜನೆ
2010ರಲ್ಲಿ ಬಿಡಬ್ಲ್ಯೂಎಸ್ಎಸ್ಬಿ ಪೈಲಟ್ ಪ್ರಾಜೆಕ್ಟನ್ನು ಬಸವನಗುಡಿಗೂ ವಿಸ್ತರಿಸಿದ್ದಾಗಿ ಹೆಮ್ಮೆಯಿಂದ ಹೇಳಿಕೊಂಡ ಅವರು, ಬಿಜೆಪಿ ಸರಕಾರವಿದ್ದಾಗ ಮಳೆ ನೀರನ್ನು ಚರಂಡಿ ನೀರಿನೊಂದಿಗೆ ಬೇರ್ಪಡಿಸಲು 30 ಕೋಟಿ ರು. ಅನುದಾನ ದೊರಕಿತ್ತು ಎಂದು ಹೇಳಿದರು. ಈ ಕೆಲಸ ಕೆಲ ಪ್ರದೇಶದಲ್ಲಿ ಮುಗಿದಿದ್ದು, ಗಿರಿನಗರ, ಚೆನ್ನಮ್ಮನಕೆರೆ ಅಚ್ಚುಕಟ್ಟು, ವಿದ್ಯಾಪೀಠ, ಶ್ರೀನಗರ, ಕತ್ರಿಗುಪ್ಪೆ, ಹನುಮಂತನಗರಗಳಲ್ಲಿ ಕಾಮಗಾರಿ ನಡೆಯುತ್ತಿದೆ. ಚರಂಡಿ ನೀರಿನ ಲೈನಿಗಾಗಿ 22 ಕೋಟಿ ಮತ್ತು ಮಳೆ ನೀರು ಲೈನಿಗಾಗಿ 28 ಕೋಟಿ ರು. ತಗುಲಲಿದ್ದು, ಇನ್ನು ಐದಾರು ತಿಂಗಳಲ್ಲಿ ಇದರ ಕಾಮಗಾರಿ ಮುಗಿಯಲಿದೆ ಎಂದು ಅವರು ವಿವರಿಸಿದರು.
ಕಾವೇರಿ ನೀರಿನ ಸರಬರಾಜಿಗಾಗಿ 40-50 ವರ್ಷ ಹಳೆಯ ಪೈಪುಗಳನ್ನು ಕಿತ್ತುಹಾಕಿ, ಮುಖ್ಯ ಸಂಪರ್ಕವಾಗಿ ಡಿಐ ಪೈಪುಗಳನ್ನು ಮತ್ತು ಮನೆಗಳಿಗೆ ನೈಲಾನ್ ಪೈಪುಗಳನ್ನು ಅಳವಡಿಸಲಾಗಿದೆ. 20 ಸಾವಿರಕ್ಕೂ ಹೆಚ್ಚು ಮನೆಗಳಿಗೆ ಹೊಸ ಮೀಟರುಗಳನ್ನು ಉಚಿತವಾಗಿ ನೀಡಲಾಗಿದೆ. ಎಲ್ಲಕ್ಕಿಂತ ಮುಖ್ಯವಾಗಿ ಈ ಕಾಮಗಾರಿಯಿಂದ ನೀರು ಪೋಲಾಗುವುದನ್ನು ನಿಲ್ಲಿಸಲಾಗಿದೆ. ಅಲ್ಲದೆ, ಅನೇಕ ಬಡಾವಣೆಗಳಲ್ಲಿ ಮಳೆನೀರು ಕೊಯ್ಲು ಕಟ್ಟುನಿಟ್ಟಾಗಿ ಪಾಲಿಸುವುದರ ಜೊತೆಗೆ, ರಸ್ತೆಯಲ್ಲಿಯೂ ಅಲ್ಲಲ್ಲಿ ತೆಗ್ಗುತೆಗೆದು ಮಳೆನೀರು ಕೊಯ್ಲಿಗೆ ಬೇಕಾದ ಅಗತ್ಯ ವಸ್ತುಗಳನ್ನು ತುಂಬಿಸಿ ನೀರು ಭೂಮಿಯೊಳಗೆ ಇಂಗಿಕೊಳ್ಳುವಂತೆ ವ್ಯವಸ್ಥೆ ಮಾಡಲಾಗಿದೆ.

ಬಸವನಗುಡಿಯಲ್ಲಿ ದಿನನಿತ್ಯ ಅಡ್ಡಾಡುವವರಿಗೆ ವಾಹನ ಸಂಚಾರ ಹೇಗಿರುತ್ತದೆ ಎಂದು ವಿವರಿಸಿ ಹೇಳಬೇಕಾಗಿಲ್ಲ. ಜನಸಂಖ್ಯೆ ಮತ್ತು ವಾಹನ ಸಂಖ್ಯೆ ವೃದ್ಧಿಯಾಗುತ್ತಿದ್ದಂತೆ ಈ ಜನನಿಬಿಡ ಪ್ರದೇಶಗಳು ಸಾಕಷ್ಟು ಸಮಸ್ಯೆಯನ್ನು ತಂದೊಡ್ಡುತ್ತಿವೆ. ಇನ್ನು ಈ ಪ್ರದೇಶಗಳಲ್ಲಿ ಕೆಳಸೇತುವೆ, ಮೇಲುಸೇತುವೆ ಅಳವಡಿಸುವುದು ದೂರದ ಮಾತು. ಹೀಗಾಗಿ, ವಿದ್ಯಾಪೀಠ, ಹನುಮಂತನಗರ, ರಾಮಾಂಜನೇಯ ಗುಡ್ಡ, ಕೆಆರ್ ರಸ್ತೆ, ಕತ್ರಿಗುಪ್ಪೆ ಮುಂತಾದ ಕೆಲವೆಡೆಗಳಲ್ಲಿ 50 ಅಡಿ ರಸ್ತೆ ಅಗಲೀಕರಿಸುವ ಅಗತ್ಯ ಇದೆ. ಆದರೆ, ಅದು ಬಿಬಿಎಂಪಿ ಮತ್ತು ಬಿಡಿಎ ಮತ್ತು ಸರಕಾರದ ಸಹಯೋಗದೊಂದಿಗೆ ಆಗುವ ಕೆಲಸ, ಶಾಸಕರಿಂದಲ್ಲ. [ಬಿಬಿಎಂಪಿ ಯೋಜನೆಗಳು]
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications