ನ್ಯಾಷನಲ್ ಕಾಲೇಜು ಬಳಿಯ ಮೇಲ್ಸೇತುವೆಯ ದುರಸ್ತಿ ಹೇಗೆ ನಡೆದಿದೆ?
ಬಸವನಗುಡಿಯ ನ್ಯಾಷನಲ್ ಕಾಲೇಜು ಬಳಿಯ ಮೇಲ್ಸೇತುವೆಯ ದುರಸ್ತಿಗಾಗಿ ಜನವರಿ 20ರಿಂದ ಕಾಮಗಾರಿ ಕೈಗೊಳ್ಳಲಾಗಿದ್ದು, ಮೇಲ್ಸೇತುವೆ ದುರಸ್ತಿ ಕಾರ್ಯ ತಿಂಗಳವರೆಗೆ ನಡೆಯಲಿದ್ದು, ವಾಹನ ಸಂಚಾರ ಬಂದ್ ಆಗಲಿದೆ.
ಬೆಂಗಳೂರು, ಜನವರಿ 27: ಬಸವನಗುಡಿಯ ನ್ಯಾಷನಲ್ ಕಾಲೇಜು ಬಳಿಯ ಮೇಲ್ಸೇತುವೆಯ ದುರಸ್ತಿ ಕಾರ್ಯ ಜನವರಿ 20ರಿಂದ ಕಾಮಗಾರಿ ಆರಂಭಗೊಂಡಿದ್ದು, ಇನ್ನೊಂದು ತಿಂಗಳವರೆಗೆ ನಡೆಯಲಿದೆ. ವಾಹನ ಸಂಚಾರ ಬಂದ್ ಆಗಿರುವುದರಿಂದ ಕಿರಿಕಿರಿಯಾದರೂ ನಾಗರಿಕರು ರಸ್ತೆ ದುರಸ್ತಿ ಬಗ್ಗೆ ಪ್ರತಿದಿನ ಕುತೂಹಲದಿಂದ ಕಣ್ಣು ಹಾಯಿಸಿ ಮುಂದೆ ಸಾಗುತ್ತಿದ್ದಾರೆ.
ಕಾಮಗಾರಿ ಮುಕ್ತಾಯಗೊಳ್ಳುವರೆಗೂ ಮೇಲ್ಸೇತುವೆಯಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. ಜತೆಗೆ ವಾಹನಗಳ ಸಂಚಾರಕ್ಕಾಗಿ ಮಾರ್ಗ ಬದಲಾವಣೆ ಮಾಡಲಾಗಿದೆ.
'ಸುಮಾರು 750 ಮೀಟರ್ ಉದ್ದವಿರುವ ಈ ಮೇಲ್ಸೇತುವೆ ಮೂಲಕ ಜಯನಗರ, ಲಾಲ್ಬಾಗ್, ಮಿನರ್ವ ವೃತ್ತ ಸೇರಿದಂತೆ ಹಲವು ಪ್ರದೇಶಗಳ ಪ್ರಯಾಣಿಕರು ಸಂಚರಿಸುತ್ತಾರೆ. ಕಾಮಗಾರಿ ಆರಂಭವಾಗಿರುವುದರಿಂದ ಬದಲಿ ಮಾರ್ಗದ ಮೂಲಕ ಸಂಚರಿಸಬೇಕು' ಎಂದು ಬಸವನಗುಡಿ ಸಂಚಾರ ಠಾಣೆಯ ಇನ್ಸ್ಪೆಕ್ಟರ್ ಹೇಳಿದ್ದಾರೆ.

ಎಲ್ಲಿ ನಿಷೇಧ: 'ರಾಮಕೃಷ್ಣ ಆಶ್ರಮ ವೃತ್ತದಿಂದ ವಾಣಿವಿಲಾಸ್ ಮತ್ತು ಶಂಕರಮಠ ಜಂಕ್ಷನ್ನಿಂದ ಮೇಲ್ಸೇತುವೆ ಮೂಲಕ ಲಾಲ್ ಬಾಗ್ ಪಶ್ಚಿಮ ಗೇಟ್ ಕಡೆ ಹೋಗುತ್ತಿದ್ದ ವಾಹನಗಳ ಸಂಚಾರವನ್ನು ಮೇಲ್ಸೇತುವೆ ಮೇಲೆ ನಿಷೇಧಿಸಲಾಗಿದೆ.' ಪಶ್ಚಿಮ ಗೇಟ್ ಕಡೆಯಿಂದ ನಾರ್ತ್ ರಸ್ತೆ ಕಡೆ ದ್ವಿಚಕ್ರ ವಾಹನಗಳು ಆಗಾಗ ನುಸುಳಿ ಬರುತ್ತಿವೆ.
Tiki Tar sheets are being used for resurfacing Flyovers across Bengaluru as they ensure more durability of road surface. @thekjgeorge pic.twitter.com/UR0FPVMnW3
— GoK Updates (@GOKUpdates) January 25, 2017
ಸರ್ವೀಸ್ ರಸ್ತೆ ಬಳಸಿ: ಮೇಲ್ಸೇತುವೆಯ ಸರ್ವೀಸ್ ರಸ್ತೆಯಲ್ಲಿ ಸಂಚರಿಸಿ ನ್ಯಾಷನಲ್ ಕಾಲೇಜು ವೃತ್ತದ ಮಾರ್ಗವಾಗಿ ಮುಂದೆ ಹೋಗಬಹುದು.'ಶೇಷಮಹಲ್ ವೃತ್ತದಿಂದ ರಾಮಕೃಷ್ಣ ಆಶ್ರಮದ ಕಡೆಗೆ ಹೋಗುವ ವಾಹನಗಳು ಮೇಲ್ಸೇತುವೆ ಮೇಲೆ ಹೋಗುವಂತಿಲ್ಲ. ಸರ್ವೀಸ್ ರಸ್ತೆಯಲ್ಲಿ ಸಂಚರಿಸಿ, ನ್ಯಾಷನಲ್ ಕಾಲೇಜು ವೃತ್ತದ ಮೂಲಕ ರಾಮಕೃಷ್ಣ ಆಶ್ರಮ ವೃತ್ತದ ಕಡೆಗೆ ಹೋಗಬಹುದು.
ಮೆಲ್ಸೇತುವೆ ದುರಸ್ತಿ: 'ನಗರದ ಒಂದೊಂದೇ ಮೇಲ್ಸೇತುವೆಯನ್ನು ದುರಸ್ತಿ ಮಾಡಲಾಗುತ್ತಿದೆ. ಈಗಾಗಲೇ ರಿಚ್ಮಂಡ್ ಸೇರಿ ಹಲವು ಮೇಲ್ಸೇತುವೆಗಳು ದುರಸ್ತಿ ಮಾಡಲಾಗಿದೆ. ಈಗ ನ್ಯಾಷನಲ್ ಕಾಲೇಜು ಬಳಿಯ ಮೇಲ್ಸೇತುವೆ ದುರಸ್ತಿಗೆ ಚಾಲನೆ ನೀಡಲಾಗಿದೆ ನಂತರ ಮೇಲ್ಸೇತುವೆಗಳ ದುರಸ್ತಿ ಕಾರ್ಯ ಆರಂಭವಾಗಲಿದೆ. ಇದಕ್ಕಾಗಿ ಹೊಸ ತಂತ್ರಜ್ಞಾನ ಬಳಸಲಾಗುತ್ತಿದೆ' ಎಂದು ಬಿಬಿಎಂಪಿ ಪ್ರಕಟಿಸಿದೆ.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications