ಸಾಂಸ್ಕೃತಿಕ ಪ್ರವಾಸಿ ಕೇಂದ್ರವಾಗಿ ಬಸವನಗುಡಿ ಅಭಿವೃದ್ಧಿ: ರವಿ ಸುಬ್ರಹ್ಮಣ್ಯ
ಬೆಂಗಳೂರು, ಡಿಸೆಂಬರ್ 3: ಹಲವಾರು ಐತಿಹಾಸಿಕ ದೇವಸ್ಥಾನಗಳನ್ನು ಒಳಗೊಂಡ ಹಾಗೂ ಐತಿಹಾಸಿಕ ಕಡಲೆಕಾಯಿ ಪರಿಷೆ ನಡೆಯುವ ಬಸವನಗುಡಿ ಪ್ರದೇಶವನ್ನು ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಬಸವನಗುಡಿ ಶಾಸಕ ರವಿ ಸುಬ್ರಹ್ಮಣ್ಯ ಭರವಸೆ ನೀಡಿದರು.
ಕಾರ್ತಿಕ ಕಡೇ ಸೋಮವಾರವಾದ ಇಂದು ಬಸವನಗುಡಿ ಕಡಲೆಕಾಯಿ ಪರಿಷೆ ಉದ್ಘಾಟಿಸಿ ಮಾತನಾಡಿದರು, ವರ್ಷಕ್ಕೊಂದು ಬಾರಿ ನಡೆಯುವ ಕಡಲೆ ಕಾಯಿ ಪರಿಷೆ ಬೆಂಗಳೂರು ಹಾಗೂ ಸುತ್ತಮುತ್ತಲಿನ ಜನರನ್ನು ಆಕರ್ಷಿಸುತ್ತಿದೆ.
ಇದನ್ನು ಒಳಗೊಂಡಂತೆ ಈ ಪರಿಸರದಲ್ಲಿನ ಐತಿಹಾಸಿಕ ದೇವಾಲಯಗಳು ಹಾಗೂ ಸ್ಮಾರಕಗಳನ್ನು ಒಳಗೊಂಡು ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿಪಡಿಸಲು ಈಗಾಗಲೇ ಬಿಬಿಎಂಪಿ ಸಹಕಾರ ನೀಡುವ ಭರವಸೆ ನೀಡಿದೆ. ಶೀಘ್ರದಲ್ಲೇ ಪ್ರವಾಸಿ ಕೇಂದ್ರದ ಪಟ್ಟಿಯಲ್ಲಿ ಬಸವನಗುಡಿಯನ್ನು ಸೇರ್ಪಡೆ ಮಾಡುವ ಮೂಲಕ ಪ್ರವಾಸಿಗರನ್ನು ಆಕರ್ಷಿಸಲು ಯೋಜನೆ ರೂಪಿಸಲಾಗುವುದು ಎಂದು ಹೇಳಿದರು.
ಬಿಬಿಎಂಪಿ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ಮಾತನಾಡಿ, ವರ್ಷಕ್ಕೊಂದು ಬಾರಿ ನಡೆಯುವ ಕಡಲೆಕಾಯಿ ಪರಿಷೆ ಬೆಂಗಳೂರಿನ ಮೂಲ ಸಾಂಪ್ರದಾಯಿಕ ಸೊಗಡನ್ನು ನೆನಪಿಸುತ್ತದೆ. ಅಲ್ಲದೆ ಪ್ರತಿ ವರ್ಷದ ಚಳಿಗಾಲದ ಸಂದರ್ಭದಲ್ಲಿ ಕಡಲೆಕಾಯಿ ಪರಿಷೆ ನಮ್ಮ ನೆಲಮೂಲದ ಸಂಸ್ಕೃತಿಯನ್ನು ನೆನಪಿಸುತ್ತದೆ ಎಂದರು.

ವ್ಯಾಪಾರದ ಭರಾಟೆ ಜೋರು
ಈ ಪರಿಷೆಯ ಪ್ರಮುಖ ಆಕರ್ಷಣೆ ಕಡಲೆಕಾಯಿ , ಪರಿಷೆಗೆ ಕಾಲಿಟ್ಟ ತಕ್ಷಣವೇ ಕಡಲೆಕಾಯ್ ಕಡಲೆಕಾಯ್ ಎನ್ನುವ ಸದ್ದು ಕಿವಿಗೆ ಅಪ್ಪಳಿಸುತ್ತದೆ.ಪರಿಷೆಯಲ್ಲಿ ತರಹೇವಾರಿ ಕಡಲೆಕಾಯಿ ಕಾಣುತ್ತದೆ. ಬಣ್ಣ ಹಾಗೂ ಗಾತ್ರ ಆಧರಿಸಿ ಹಸಿ ಕಾಯಿ ಹಾಗೂ ಹುರಿದ ಕಾಯಿಗೆ ಪ್ರತ್ಯೇಕ ಬೆಲೆಯನ್ನು ವ್ಯಾಪಾರಸ್ಥರು ನಿಗದಿ ಮಾಡುತ್ತಾರೆ.

ಕಡಲೆಕಾಯಿ ಸೇರಿಗೆ 25 ರೂ
ಗ್ರಾಹಕರು ಕಡಲೆಕಾಯಿ ಅಂಗಡಿಗೆ ಹೋಗಿ ಎಷ್ಟಪ್ಪಾ ಕಡಲೆಕಾಯಿ ಎನ್ನುವುದು ಅದಕ್ಕೆ ಪ್ರತಿಯಾಗಿ ಎಷ್ಟು ಬೇಕಮ್ಮಾ ನಿಮಗೆ ಎಂದು ಹೇಳಿ ಒಂದು ಸೇರಿಗೆ 25 ರೂ ನಂತೆ ಮಾರಾಟ ಮಾಡುತ್ತಿದ್ದಾರೆ. ಹುರಿದ ಹಸಿ ಕಡಲೆಗೆ 30 ರೂ ಹಾಗೂ ಹುಡಿದ ಒಣಗಿದ ಕಡಲೆಗೆ 25 ರೂ ಇದೆ.

ಕಡಲೆಕಾಯಿ ಪರಿಷೆಗೆ ರೈತರು ಎಲ್ಲೆಲ್ಲಿಂದ ಬಂದಿದ್ದಾರೆ ಗೊತ್ತಾ?
ಮಾಲೂರು, ಕೋಲಾರ, ಚಾಮರಾಜನಗರ, ಚಿಕ್ಕಬಳ್ಳಾಪುರ, ರಾಮನಗರ, ದೊಡ್ಡಬಳ್ಳಾಪುರ, ಹೊಸಕೋಟೆ, ಮಾಗಡಿ,ತಮಿಳುನಾಡು, ಆಂಧ್ರಪ್ರದೇಶದಿಂದ ರೈತರು ಬಂದಿದ್ದಾರೆ. ಸುಮಾರು 5ರಿಂದ 6 ಲಕ್ಷ ಮಂದಿ ಸೇರುವ ನಿರೀಕ್ಷೆ ಇದೆ.

ಎರಡು ದಿನ ನಡೆಯಲಿದೆ ಪರಿಷೆ
ಬಸವನಗುಡಿ ಕಡಲೆಕಾಯಿ ಪರಿಷೆ ಡಿಸೆಂಬರ್ 3-4 ಎರಡು ದಿನಗಳ ಕಾಲ ನಡೆಯಲಿದೆ. ಆದರೆ 15 ದಿನಗಳ ಕಾಲ ಕಡಲೆಕಾಯಿ ಮಾರಾಟವಾಗಲಿದೆ. ವಿಶೇಷ ಪೂಜೆಗಳು ಸಾಂಸ್ಕೃತಿಕ ಕಾರ್ಯಕ್ರಮಗಳು ಕೂಡ ನಡೆಯಲಿದೆ.
-
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು












Click it and Unblock the Notifications