ಸಾಂಸ್ಕೃತಿಕ ಪ್ರವಾಸಿ ಕೇಂದ್ರವಾಗಿ ಬಸವನಗುಡಿ ಅಭಿವೃದ್ಧಿ: ರವಿ ಸುಬ್ರಹ್ಮಣ್ಯ
ಬೆಂಗಳೂರು, ಡಿಸೆಂಬರ್ 3: ಹಲವಾರು ಐತಿಹಾಸಿಕ ದೇವಸ್ಥಾನಗಳನ್ನು ಒಳಗೊಂಡ ಹಾಗೂ ಐತಿಹಾಸಿಕ ಕಡಲೆಕಾಯಿ ಪರಿಷೆ ನಡೆಯುವ ಬಸವನಗುಡಿ ಪ್ರದೇಶವನ್ನು ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಬಸವನಗುಡಿ ಶಾಸಕ ರವಿ ಸುಬ್ರಹ್ಮಣ್ಯ ಭರವಸೆ ನೀಡಿದರು.
ಕಾರ್ತಿಕ ಕಡೇ ಸೋಮವಾರವಾದ ಇಂದು ಬಸವನಗುಡಿ ಕಡಲೆಕಾಯಿ ಪರಿಷೆ ಉದ್ಘಾಟಿಸಿ ಮಾತನಾಡಿದರು, ವರ್ಷಕ್ಕೊಂದು ಬಾರಿ ನಡೆಯುವ ಕಡಲೆ ಕಾಯಿ ಪರಿಷೆ ಬೆಂಗಳೂರು ಹಾಗೂ ಸುತ್ತಮುತ್ತಲಿನ ಜನರನ್ನು ಆಕರ್ಷಿಸುತ್ತಿದೆ.
ಇದನ್ನು ಒಳಗೊಂಡಂತೆ ಈ ಪರಿಸರದಲ್ಲಿನ ಐತಿಹಾಸಿಕ ದೇವಾಲಯಗಳು ಹಾಗೂ ಸ್ಮಾರಕಗಳನ್ನು ಒಳಗೊಂಡು ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿಪಡಿಸಲು ಈಗಾಗಲೇ ಬಿಬಿಎಂಪಿ ಸಹಕಾರ ನೀಡುವ ಭರವಸೆ ನೀಡಿದೆ. ಶೀಘ್ರದಲ್ಲೇ ಪ್ರವಾಸಿ ಕೇಂದ್ರದ ಪಟ್ಟಿಯಲ್ಲಿ ಬಸವನಗುಡಿಯನ್ನು ಸೇರ್ಪಡೆ ಮಾಡುವ ಮೂಲಕ ಪ್ರವಾಸಿಗರನ್ನು ಆಕರ್ಷಿಸಲು ಯೋಜನೆ ರೂಪಿಸಲಾಗುವುದು ಎಂದು ಹೇಳಿದರು.
ಬಿಬಿಎಂಪಿ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ಮಾತನಾಡಿ, ವರ್ಷಕ್ಕೊಂದು ಬಾರಿ ನಡೆಯುವ ಕಡಲೆಕಾಯಿ ಪರಿಷೆ ಬೆಂಗಳೂರಿನ ಮೂಲ ಸಾಂಪ್ರದಾಯಿಕ ಸೊಗಡನ್ನು ನೆನಪಿಸುತ್ತದೆ. ಅಲ್ಲದೆ ಪ್ರತಿ ವರ್ಷದ ಚಳಿಗಾಲದ ಸಂದರ್ಭದಲ್ಲಿ ಕಡಲೆಕಾಯಿ ಪರಿಷೆ ನಮ್ಮ ನೆಲಮೂಲದ ಸಂಸ್ಕೃತಿಯನ್ನು ನೆನಪಿಸುತ್ತದೆ ಎಂದರು.

ವ್ಯಾಪಾರದ ಭರಾಟೆ ಜೋರು
ಈ ಪರಿಷೆಯ ಪ್ರಮುಖ ಆಕರ್ಷಣೆ ಕಡಲೆಕಾಯಿ , ಪರಿಷೆಗೆ ಕಾಲಿಟ್ಟ ತಕ್ಷಣವೇ ಕಡಲೆಕಾಯ್ ಕಡಲೆಕಾಯ್ ಎನ್ನುವ ಸದ್ದು ಕಿವಿಗೆ ಅಪ್ಪಳಿಸುತ್ತದೆ.ಪರಿಷೆಯಲ್ಲಿ ತರಹೇವಾರಿ ಕಡಲೆಕಾಯಿ ಕಾಣುತ್ತದೆ. ಬಣ್ಣ ಹಾಗೂ ಗಾತ್ರ ಆಧರಿಸಿ ಹಸಿ ಕಾಯಿ ಹಾಗೂ ಹುರಿದ ಕಾಯಿಗೆ ಪ್ರತ್ಯೇಕ ಬೆಲೆಯನ್ನು ವ್ಯಾಪಾರಸ್ಥರು ನಿಗದಿ ಮಾಡುತ್ತಾರೆ.

ಕಡಲೆಕಾಯಿ ಸೇರಿಗೆ 25 ರೂ
ಗ್ರಾಹಕರು ಕಡಲೆಕಾಯಿ ಅಂಗಡಿಗೆ ಹೋಗಿ ಎಷ್ಟಪ್ಪಾ ಕಡಲೆಕಾಯಿ ಎನ್ನುವುದು ಅದಕ್ಕೆ ಪ್ರತಿಯಾಗಿ ಎಷ್ಟು ಬೇಕಮ್ಮಾ ನಿಮಗೆ ಎಂದು ಹೇಳಿ ಒಂದು ಸೇರಿಗೆ 25 ರೂ ನಂತೆ ಮಾರಾಟ ಮಾಡುತ್ತಿದ್ದಾರೆ. ಹುರಿದ ಹಸಿ ಕಡಲೆಗೆ 30 ರೂ ಹಾಗೂ ಹುಡಿದ ಒಣಗಿದ ಕಡಲೆಗೆ 25 ರೂ ಇದೆ.

ಕಡಲೆಕಾಯಿ ಪರಿಷೆಗೆ ರೈತರು ಎಲ್ಲೆಲ್ಲಿಂದ ಬಂದಿದ್ದಾರೆ ಗೊತ್ತಾ?
ಮಾಲೂರು, ಕೋಲಾರ, ಚಾಮರಾಜನಗರ, ಚಿಕ್ಕಬಳ್ಳಾಪುರ, ರಾಮನಗರ, ದೊಡ್ಡಬಳ್ಳಾಪುರ, ಹೊಸಕೋಟೆ, ಮಾಗಡಿ,ತಮಿಳುನಾಡು, ಆಂಧ್ರಪ್ರದೇಶದಿಂದ ರೈತರು ಬಂದಿದ್ದಾರೆ. ಸುಮಾರು 5ರಿಂದ 6 ಲಕ್ಷ ಮಂದಿ ಸೇರುವ ನಿರೀಕ್ಷೆ ಇದೆ.

ಎರಡು ದಿನ ನಡೆಯಲಿದೆ ಪರಿಷೆ
ಬಸವನಗುಡಿ ಕಡಲೆಕಾಯಿ ಪರಿಷೆ ಡಿಸೆಂಬರ್ 3-4 ಎರಡು ದಿನಗಳ ಕಾಲ ನಡೆಯಲಿದೆ. ಆದರೆ 15 ದಿನಗಳ ಕಾಲ ಕಡಲೆಕಾಯಿ ಮಾರಾಟವಾಗಲಿದೆ. ವಿಶೇಷ ಪೂಜೆಗಳು ಸಾಂಸ್ಕೃತಿಕ ಕಾರ್ಯಕ್ರಮಗಳು ಕೂಡ ನಡೆಯಲಿದೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ












Click it and Unblock the Notifications