ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಹಾರಾಷ್ಟ್ರದಿಂದ ಕದ್ದು ಮುಚ್ಚಿ ಬರುವವರು ಹೆಚ್ಚಾಗಿದ್ದಾರೆ- ಬಸವರಾಜ್ ಬೊಮ್ಮಾಯಿ

|
Google Oneindia Kannada News

ಬೆಂಗಳೂರು, ಮೇ 7: ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಕ್ವಾರಂಟೈನ್ ಅವಧಿ ಮುಗಿಸಿದ್ದಾರೆ. ಕೆಲ ದಿನಗಳ ಹಿಂದೆ ಮಾಧ್ಯಮದರಿಗೂ ಸೋಂಕು ಹರಡಿದ್ದು, ಆ ನಂತರ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಕ್ವಾರಂಟೈನ್‌ನಲ್ಲಿ ಇದ್ದರು.

ಕ್ಚಾರಂಟೈನ್ ಅವಧಿ ಮುಗಿಸಿದ ಬಸವರಾಜ ಬೊಮ್ಮಾಯಿ‌ ಕಾಂಗ್ರೆಸ್ ನಾಯಕರ ವಿರುದ್ಧ ತಿರುಗೇಟು ನೀಡಿದ್ದಾರೆ. ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ಮಾತನಾಡಿದ ಅವರು ನಂಜನಗೂಡು ಕಾರ್ಖಾನೆಯಿಂದ ಕೊರೊನಾ ಹಬ್ಬುವಿಕೆ ಬಗ್ಗೆ ಹೇಳಿಕೆ ನೀಡಿದ್ದಾರೆ.

ಕೋವಿಡ್ - 19 ಚಿಕಿತ್ಸೆಗಾಗಿ 215 ರೈಲ್ವೆ ನಿಲ್ದಾಣ ಗುರುತಿಸಿದ ಕೇಂದ್ರಕೋವಿಡ್ - 19 ಚಿಕಿತ್ಸೆಗಾಗಿ 215 ರೈಲ್ವೆ ನಿಲ್ದಾಣ ಗುರುತಿಸಿದ ಕೇಂದ್ರ

''ನಂಜನಗೂಡು ಕಾರ್ಖಾನೆಯಿಂದ ಸೋಂಕು ಹೆಚ್ಚಳ ಆಗದಂತೆ ಗೃಹ ಇಲಾಖೆ, ಆರೋಗ್ಯ ಅಧಿಕಾರಿಗಳು ಪ್ರಯತ್ನ ನಡೆಸಿದ್ದಾರೆ. ಆದರೆ, ಇನ್ನೂ ಮೂಲ ಕಂಡುಹಿಡಿಯಲು ಸಾಧ್ಯವಾಗ್ತಿಲ್ಲ. ಆ ಫ್ಯಾಕ್ಟರಿಯಿಂದ ಯಾವುದೇ ಹೊಸ ಕೇಸ್ ಪತ್ತೆಯಾಗಿಲ್ಲ. ಸಂಪೂರ್ಣ ತನಿಖೆ ನಡೆಸಿದಾಗ ಎಲ್ಲವೂ ಹೊರಬೀಳಲಿದೆ.'' ಎಂದಿದ್ದಾರೆ.

Basavaraj Bommai Completed His Quarantine Period

ಇತರ ರಾಜ್ಯಗಳಲ್ಲಿರುವ ಕಾರ್ಮಿಕರು ರಾಜ್ಯಕ್ಕೆ ಬರುತ್ತಿದ್ದು, ಮಹಾರಾಷ್ಟ್ರ ಗಡಿ ಭಾಗದಲ್ಲಿ ತೀವ್ರ ತಪಾಸಣೆಗೆ ಸೂಚನೆ ನೀಡಲಾಗಿದೆಯಂತೆ. ಆದರೆ, ಕದ್ದು ಮುಚ್ಚಿ ಬರುವವರು ಹೆಚ್ಚಿದ್ದಾರೆ. ಖಾಸಗಿ‌ ಟ್ಯಾಕ್ಸಿ, ಇನ್ನಿತರ ವಾಹನಗಳಲ್ಲಿ ಬರುತ್ತಿದ್ದಾರೆ. ಹೀಗಾಗಿ ಬಾರ್ಡರ್‌ನಲ್ಲಿ ತೀವ್ರ ತಪಾಸಣೆಗೆ ಸೂಚಿಸಿದ್ದೇವೆ ಎಂದಿದ್ದಾರೆ.

ಅಲ್ಲದೆ, ಕೆಲವರನ್ನ ಅಲ್ಲೇ ಕ್ವಾರಂಟೈನ್ ಮಾಡೋಕೆ ಸೂಚಿಸಿದ್ದೇವೆ. ಕಾಂಗ್ರೆಸ್ ನವರು ಮೊಸರಲ್ಲಿ ಕಲ್ಲು ಹುಡುಕುತ್ತಿದ್ದಾರೆ. ವಾಸ್ತವ ಇದ್ದರೆ ಆರೋಪ ಮಾಡಲಿ. ಆರೋಪ ಮಾಡಬೇಕು ಅಂತಾನೆ ಮಾಡೋದು ಸರಿಯಲ್ಲ. ಎಂದು ಅಸಮಾಧಾನ ಹೊರಹಾಕಿದ್ದಾರೆ.

English summary
Home minister Basavaraj Bommai completed his quarantine period.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X