ಬಸನಗೌಡ ಪಾಟೀಲ್ ಯತ್ನಾಳರನ್ನು ರಾಜಕೀಯವಾಗಿ ಮುಗಿಸಲು ಪ್ಲಾನ್: ಬಸವರಾಜ್ ಬೊಮ್ಮಾಯಿ
ಬೆಂಗಳೂರು, ಆಗಸ್ಟ್ 28: ಕರ್ನಾಟಕ ರಾಜ್ಯದಲ್ಲಿ ಕಾನೂನು, ನ್ಯಾಯ ಸತ್ತು ಹೋಗಿದ್ದು, ಆಡಳಿತ ಪಕ್ಷ ದ್ವೇಷದ ರಾಜಕಾರಣ ಮಾಡುತ್ತಿದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಕಬ್ಬಿನ ಕಾರ್ಖಾನೆಗೆ ಅನುಮತಿ ನೀಡದೇ ಅವರನ್ನು ರಾಜಕೀಯವಾಗಿ ಮುಗಿಸುವ ಯತ್ನ ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಹಾಗೂ ಬಿಜೆಪಿ ಸಂಸದ ಸವರಾಜ ಬೊಮ್ಮಾಯಿ ಆರೋಪಿಸಿದರು.
ಕಬ್ಬಿನ ಕಾರ್ಖಾನೆಗೆ ಅನುಮತಿ ನೀಡದ ಸರ್ಕಾರ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿ ಅನ್ಯಾಯದ ವಿರುದ್ಧ ಶಾಸಕ ಬಸವನಗೌಡ ಪಾಟೀಲ್ ಅವರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನೆಯಲ್ಲಿ ಪಾಲ್ಗೊಂಡ ಬಸವರಾಜ ಬೊಮ್ಮಾಯಿ ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದರು.

ತಾಂತ್ರಿಕ ಕಾರಣದ ನೆಪ ಹೇಳುತ್ತಿರುವ ಮಂಡಳಿ
ಶಾಸಕ ಯತ್ನಾಳ್ ಅವರು ಕಾನೂನು ಪ್ರಕಾರವೇ ಸಕ್ಕರೆ ಕಾರ್ಖಾನೆ ಆರಂಭ ಮಾಡಿದ್ದಾರೆ. ಆದರೆ, ಕಳೆದ ವರ್ಷ ಇವರಿಗೆ ಮಾಲಿನ್ಯ ನಿಯಂತ್ರಣ ಮಂಡಳಿ ಕಾರ್ಖಾನೆಗೆ ಅನುಮತಿ ಕೊಡಲಿಲ್ಲ. ಆಗ ಇವರು ಕೋರ್ಟ್ ಮೊರೆ ಹೋದರು, ಕೋರ್ಟ್ ನಾಲ್ಕು ವಾರದೊಳಗೆ ಕಾರ್ಖಾನೆ ಪುನಾರಂಭಕ್ಕೆ ಆದೇಶ ನೀಡಿತ್ತು. ಹೀಗಿದ್ದರೂ ಸಹ ಮಾಲಿನ್ಯ ನಿಯಂತ್ರಣ ಮಂಡಳಿಯವರು ತಾಂತ್ರಿಕ ಕಾರಣದ ನೆಪದ ಹೇಳಿ ಅನುಮತಿ ನೀಡುತ್ತಿಲ್ಲ ಎಂದರು.
ರಾಜ್ಯದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ರಾಜಕೀಯವಾಗಿ ಮುಗಿಸಬೇಕಂತಲೂ ಈ ರೀತಿ ಮಾಡಲಾಗುತ್ತಿದೆ. ಎಲ್ಲರನ್ನು ಒಂದೇ ರೀತಿಯಾಗಿ ನೋಡಬೇಕಾದ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಯತ್ನಾಳ್ ಅವರಿಗೆ ತಾರತಮ್ಯ ಮಾಡುತ್ತಿದೆ. ಹಲವು ಸಕ್ಕರೆ ಕಾರ್ಖಾನೆಗಳಿಗೆ ಅನುಮತಿ ಕೊಟ್ಟಿದೆ ಎಂದು ಅವರು ವಿವರಿಸಿದರು.
ಪಿಸಿಬಿ ಕಾನೂನು ಉಲ್ಲಂಘಿಸಿದ ಕಾರ್ಖಾನೆಗಳಿಗೆ ಅನುಮತಿ
ಸರ್ಕಾರ ಅನುಮತಿ ನೀಡುತ್ತಿಲ್ಲ ಎಂದು ನಾವು ಸುಮ್ಮನಾಗಿಲ್ಲ. ಪ್ರತಿಭಟನೆ ನಡೆಸಿ ಇಲ್ಲಿಗೇ ಸುಮ್ಮನಾಗುವುದಿಲ್ಲ. ಮುಂದೆಯೂ ಸರ್ಕಾರ ಹಾಗೂ ಇಲಾಖೆ ವಿರುದ್ಧ ಹೋರಾಟ ಮಾಡುತ್ತೇವೆ. ಈ ಕಾರ್ಖಾನೆ ನಂಬಿ ಸಾವಿರಾರು ರೈತರು ಇದ್ದಾರೆ. ಈ ಸಲ ಆ ಭಾಗದಲ್ಲಿ ಹೆಚ್ಚು ಕಬ್ಬು ಬೆಳೆದಿದ್ದಾರೆ, ಯತ್ನಾಳ್ ಅವರ ಮಾಲೀಕತ್ವ ಕಾರ್ಖಾನೆ ತೆರೆಯಬೇಕಿದೆ ಎಂದು ಅವರ ಕಾರ್ಖಾನೆ ಅಗತ್ಯತೆ ತಿಳಿಸಿದರು.

ಕೈಗಾರಿಕೆ ಸಚಿವ ಎಂಬಿ ಪಾಟೀಲ್ ನೇತೃತ್ವದಲ್ಲಿ ರಾಜ್ಯ ಸರ್ಕಾರ ಒಂದು ಕಡೆ ಉತ್ತರ ಕರ್ನಾಟಕದ ಕಡೆಗೆ ಕೈಗಾರಿಕೆಗಳು ಬರಬೇಕು ಎಂದು ಹೇಳುತ್ತದೆ. ಆದರೆ, ಇನ್ನೊಂದು ಕಡೆ ಈ ರೀತಿಯ ರಾಜಕೀಯ ದುರುದ್ದೇಶದಿಂದ ಅನ್ಯಾಯ, ತಾರತಮ್ಯ ಮಾಡುತ್ತದೆ ಎಂದು ಅವರು ಹೇಳಿದರು.
ಈ ಪ್ರತಿಭಟನೆಯಲ್ಲಿ ವಿಪಕ್ಷ ನಾಯಕ ಆರ್.ಅಶೋಕ್, ವಿರೋಧ ಪಕ್ಷದ ಉಪ ನಾಯಕ ಅರವಿಂದ್ ಬೆಲ್ಲದ್, ಮಾಜಿ ಸಚಿವ ಅಶ್ವಥ್ ನಾರಾಯಣ, ಸಿಟಿ ರವಿ ಹಾಗೂ ಇನ್ನಿತರ ಮುಖಂಡರು ಪಾಲ್ಗೊಂಡಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications