Get Updates
Get notified of breaking news, exclusive insights, and must-see stories!

Bagalkote: ಕೃಷ್ಣ ಮೇಲ್ದಂಡೆ ಯೋಜನೆ ವಿಳಂಬಕ್ಕೆ ಕಾಂಗ್ರೆಸ್ಸೇ‌ ಕಾರಣ: ವಿವರ ಬಿಚ್ಚಿಟ್ಟ ಬಸವರಾಜ ಬೊಮ್ಮಾಯಿ

ಬಾಗಲಕೋಟೆ: ಪ್ರಮುಖ ನೀರಾವರಿ ಯೋಜನೆ '‌ಕೃಷ್ಣಾ ಮೇಲ್ದಂಡೆ ಯೋಜನೆ'ಗೆ (ಯುಕೆಪಿ) ಇಷ್ಟೊಂದು ಹಿನ್ನಡೆಯಾಗಲು ಕಾಂಗ್ರೆಸ್ ನ ಪಾತ್ರ ಬಹಳ ದೊಡ್ಡದಿದೆ. ಸಿಎಂ ಸಿದ್ದರಾಮಯ್ಯ ಹಾಗೂ ನೀರಾವರಿ ಸಚಿವರಾಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ರಾಜಕೀಯ ಸಲುವಾಗಿ ಆರೋಪ ಮಾಡಬೇಡಿ, ರಾಜ್ಯದ ವಕೀಲರು ಸರಿಯಾಗಿ ವಾದ ಮಾಡಿ ಸುಪ್ರೀಂ ಕೊರ್ಟ್ ನಲ್ಲಿ ರಾಜ್ಯದ ಪರ ಆದೇಶ ಬರುಂವತೆ ಮಾಡಿ. ಕೋರ್ಟ್ ನಿಂದ ಆದೇಶ ಬಂದು ಒಂದು ತಿಂಗಳಲ್ಲಿ ಒಳಗಡೆ ಕೆಂದ್ರದಿಂದ ಆದೇಶ ಮಾಡಿಸುವ ಕೆಲಸ ನಾವು ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬಾಗಲಕೋಟೆ ಚುನಾವಣೆ ಪ್ರಯುಕ್ತ ಬಿಜೆಪಿ ನಾಯಕರು ಕ್ಷೇತ್ರದಲ್ಲಿದ್ದಾರೆ. ಇಂದು ಮಹಿಳಾ ಮೋರ್ಚಾ ಸಭೆ ನಡೆಸಿದರು. ಚುನಾವಣೆ ಕುರಿತು ಮಾತನಾಡಿದ ಬೆನ್ನಲ್ಲೆ ಮಹತ್ವದ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಮಾತನಾಡಿದ ಬೊಮ್ಮಾಯಿ ಅವರು, ಚುನಾವಣೆ ಹೊತ್ತಲ್ಲಿ ಯುಕೆಪಿ ಬಗ್ಗೆ ಚರ್ಚೆ ಆಗುತ್ತಿದೆ. ಉಳಿದ ಸಮಯದಲ್ಲಿ ಸರ್ಕಾರದಲ್ಲಿ ಯಾರೂ ಚಕಾರ ಎತ್ತುವುದಿಲ್ಲ. ಯುಕೆಪಿ ಸ್ಟೇಜ್ 1 ಬಚಾವತ್ ಆಯೋಗದಿಂದ 1975 ರಲ್ಲಿ ಆದೇಶ ಆಯಿತು. ಆಗ ಕೇಂದ್ರದಲ್ಲಿಯೂ ಕಾಂಗ್ರೆಸ್ ಸರ್ಕಾರ ಇತ್ತು. ಕೇವಲ ಡಿಪಿಆರ್ ಮಾಡಲು 14 ವರ್ಷ ತೆಗೆದುಕೊಂಡಿತು. ಕಾಂಗ್ರೆಸ್ ಸರಕಾರ ಮತ್ತು ಕಾಂಗ್ರೆಸ್ಸೇತರ ಸರ್ಕಾರದ ಅವಧಿಯಲ್ಲಿ ಏನಾಗಿದೆ ಎನ್ನುವ ತಲುನಾತ್ಮಕ ದಾಖಲೆ ಬಿಡುಗಡೆ ಮಾಡುತ್ತೇನೆ ಎಂದು ಹೇಳಿದರು.

Basavaraj Bommai

ಕೃಷ್ಣಾ ಮೇಲ್ದಂಡೆ ಯೋಜನೆ ಇಷ್ಟೊಂದು ಹಿನ್ನಡೆಯಾಗಲು ಕಾಂಗ್ರೆಸ್ ಕಾರಣ ಎಂದು ಪುನರುಚ್ಚರಿಸಿದರು. ನಮ್ಮ ಅವಧಿಯಲ್ಲಿ 2009 ರಲ್ಲಿ ಇನ್ನೂ ಆದೇಶ ಆಗದಿದ್ದರೂ ಮುಳವಾಡ, ಚಿಮ್ಮಲಗಿ, ಗುತ್ತಿ ಬಸವಣ್ಣ ಕೊಪ್ಪಳ ಏತ ನೀರಾವರಿ ಯೋಜನೆಗಳಿಗೆ ನಾನೇ ಅನುಮೊದನೆ ಕೊಟ್ಟು ಯೋಜನೆ ಆರಂಭಿಸಿದ್ದೇವು. ಕಾಂಗ್ರೆಸ್ ನವರು ಬರೇ ಎ ಸ್ಕಿಮ್ ಬಿ ಸ್ಕೀಮ್ ಅಂತ ಹೇಳುವವರು. ಮುಳವಾಡ, ಚಿಮ್ಮಲಗಿ ಏತ ನೀರಾವರಿ ಈಗಾಗಲೇ ಮಾಡಿದ್ದೇವೆ. ಕೃಷ್ಣಾ ಮೇಲ್ದಂಡೆ ಯೋಜನೆ ಜಾರಿ ಮಾಡುವಲ್ಲಿ ಅತಿ ಹೆಚ್ಚು ಕೊಡುಗೆ ಇರುವುದು ಕಾಂಗ್ರೆಸ್ಸೇತರ ಸರ್ಕಾರದಿಂದ. ಕೆರೂರು ಏತ ನಿರಾವರಿ ನಾವೇ ಮಾಡಿ ಸಿದ್ದರಾಮಯ್ಯ ಪ್ರತಿಪಕ್ಷದ ನಾಯಕರಿದ್ದಾಗ ನಾವೇ ಕರೆದುಕೊಂಡು ಬಂದು ಉದ್ಘಾಟನೆ ಮಾಡಿದ್ದೇವೆ. ಕೆರೆ ತುಂಬಿಸುವ ಯೊಜನೆ ನಾವೇ ಮಾಡಿದ್ದೇವೆ ಎಂದು ವಿವರಿಸಿದರು.

By Election: ಒಬ್ಬರಿಂದ ಪಕ್ಷ ಗೆಲ್ಲಲ್ಲ, ಇದು ಕಾಂಗ್ರೆಸ್ ಸಿದ್ಧಾಂತಕ್ಕೆ ಸಿಗುವ ಜಯ: ಸಲೀಂ ಅಹ್ಮದ್ ಟಾಂಗ್ ಕೊಟ್ಟಿದ್ಯಾರಿಗೆ?
By Election: ಒಬ್ಬರಿಂದ ಪಕ್ಷ ಗೆಲ್ಲಲ್ಲ, ಇದು ಕಾಂಗ್ರೆಸ್ ಸಿದ್ಧಾಂತಕ್ಕೆ ಸಿಗುವ ಜಯ: ಸಲೀಂ ಅಹ್ಮದ್ ಟಾಂಗ್ ಕೊಟ್ಟಿದ್ಯಾರಿಗೆ?

ರಾಜಕೀಯಕ್ಕಾಗಿ ಕಾಂಗ್ರೆಸ್ ಸುಳ್ಳು

ಕೇಂದ್ರ ಸರ್ಕಾರ ಗೆಜೆಟ್ ನೊಟಿಫಿಕೇಶನ್ ಹೊರಡಿಸುತ್ತಿಲ್ಲ ಎಂದು ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿ ಆರೋಪ ಮಾಡುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ರಾಯರೆಡ್ಡಿಯವರಿಗೆ ಆಗಾಗ ಜ್ಞಾನ ಮರೆಯಾಗುತ್ತಿದೆ. ಕೃಷ್ಣಾ ಬಿ ಸ್ಕೀಮ್ ಮಾಡಲು ಬರುವುದಿಲ್ಲ ಎಂದು ಹೇಳಿದ್ದರು. ನಾವು ಅವರ ಕೆರೆಗೆ ನೀರು ತುಂಬಿಸಿದ್ದು ಅವರೇ ಉದ್ಘಾಟನೆ ಮಾಡಿದ್ದರು ಎಂದು ತಿರುಗೇಟು ನೀಡಿದರು.

ಆಂಧ್ರ ಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಕರ್ನಾಟಕ ನಾಲ್ಕು ರಾಜ್ಯಗಳು ಸುಪ್ರೀಂ ಕೋರ್ಟನಲ್ಲಿ ಅರ್ಜಿ ಹಾಕಿರುವುದರಿಂದ ಕೋರ್ಟ್ ನಲ್ಲಿ ವಾದ ನಡೆಯುತ್ತಿದೆ. ಮೂರು ರಾಜ್ಯಗಳ ವಾದ ಮುಗಿದಿದೆ. ಅದು ಮುಗಿದರೆ ಟ್ರಿಬ್ಯುನಲ್ ಆದೇಶ ಬರಬೇಕಿದೆ. ಜಲ ಸಂಪನ್ಮೂಲ ಸಚಿವರಾಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ರಾಜಕೀಯ ಸಲುವಾಗಿ ಆರೋಪ ಮಾಡಬೇಡಿ. ರಾಜ್ಯದ ವಕೀಲರಿಗೆ ಸರಿಯಾಗಿ ವಾದ ಮಾಡಿ ಸುಪ್ರೀಂ ಕೊರ್ಟ್ ನಲ್ಲಿ ರಾಜ್ಯದ ಪರ ಆದೇಶ ಬರುವಂತೆ ಮಾಡಿ ಎಂದು ಸಲಹೆ ನೀಡಿದರು. ಕೋರ್ಟ್ ನಿಂದ ಆದೇಶ ಬಂದು ಒಂದು ತಿಂಗಳಲ್ಲಿ ಕೆಂದ್ರದಿಂದ ಆದೇಶ ಮಾಡಿಸುವ ಕೆಲಸ ನಾವು ಮಾಡುತ್ತೇವೆ. ಸಿಎಂ ಸಿದ್ದರಾಮಯ್ಯ ಅವರಿಗೂ ಇದನ್ನೇ ಹೇಳುತ್ತೇನೆ ಎಂದು ತಿಳಿಸಿದರು.

ಮಹಾದಾಯಿಗೆ ರಾಜ್ಯದ ಅಡ್ಡಿ

ಉತ್ತರ ಕರ್ನಾಟಕದ ಜೀವಾನಡಿ ಮಹದಾಯಿ ನದಿ ನೀರು ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಮಹದಾಯಿಗೆ ಅರಣ್ಯ ಇಲಾಖೆ ಅನುಮತಿ ಇದೆ. ವೈಲ್ಡ್ ಲೈಫ್ ನಿಂದ ಅನುಮತಿ ಬೇಕು. ಈ ವಿಚಾರದಲ್ಲಿ ರಾಜ್ಯ ಸರ್ಕಾರ ಕೊರ್ಟ್ ಗೆ ಹೋಗಿದ್ದಾರೆ ಇವರೆ ಕೊರ್ಟ್ ಗೆ ಹೋಗಿ ಅಡ್ಡಿಪಡಿಸುತ್ತಿದ್ದಾರೆ ಎಂದು ಅವರು ಆರೋಪಿಸಿದರು.

ಸಿದ್ದರಾಮಯ್ಯ ಅವರಿಂದ ದಾಖಲೆಯ ಸಾಲ

ಬಿಜೆಪಿ ಸರ್ಕಾರದ ಅವಧಿಯಲ್ಲಿ 5.30 ಲಕ್ಷ ಕೋಟಿ ಸಾಲ ಮಾಡಿದ್ದಾರೆ ಎಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸಿಎಂ ಬಹಳ ಸುಳ್ಳು ಹೇಳ್ಳುವ 'ಸುಳ್ಳು ರಾಮಯ್ಯ'. ಕಾಂಗ್ರೆಸ್ ಗೆ ನಿಷ್ಟೆ ತೋರಿಸಲು ಹೋಗಿ ಸುಳ್ಳು ಹೇಳುತ್ತಿದ್ದಾರೆ‌. ಸಿಎಂ ಸಿದ್ದರಾಮಯ್ಯ ಅವರು 2013 ರಿಂದ 2018 ರ ವರೆಗೆ ಮತ್ತು ಈಗಿನ ಅವಧಿಯಲ್ಲಿ 5,55,573.44 ಕೋಟಿ ಸಾಲ ಮಾಡಿದ್ದಾರೆ ಎಂದು ಲೆಕ್ಕ ಕೊಡುವ ಮೂಲಕ ತಿರುಗೇಟು ನೀಡಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+