ಎಸ್ಸಿ-ಎಸ್ಟಿ ಮೀಸಲಾತಿ ರದ್ದುಗೊಳಿಸಿ ದಲಿತರಿಗೆ ಅನ್ಯಾಯ: ಬಿಜೆಪಿಯಿಂದ ಮಹತ್ವದ ತೀರ್ಮಾನ ಬಸವರಾಜ ಬೊಮ್ಮಾಯಿ

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಕ್ಕೆ ಹೆಚ್ಚಳ ಮಾಡಿದ್ದ ಮೀಸಲಾತಿಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ರದ್ದು ಮಾಡಿರುವುದು ಕಂಡನೀಯ ಇದರ ವಿರುದ್ಧ ಬಿಜೆಪಿ ವತಿಯಿಂದ ರಾಜ್ಯದ ಜನತೆಗೆ ಜಾಗೃತಿ ಮೂಡಿಸಲು ತೀರ್ಮಾನಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬೊಮ್ಮಾಯಿ ತಿಳಿಸಿದರು.

ಬೆಂಗಳೂರಿನಿ ಅವರ ನಿವಾಸದಲ್ಲಿ ಬಿಜೆಪಿಯ ಎಸ್ಸಿ ಎಸ್ಟಿ ಮುಖಂಡರ ಜೊತೆಗಿನ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ರಾಜ್ಯ ಸರ್ಕಾರ ಎಸ್ಸಿ ಎಸ್ಟಿ ಮತ್ತು ಒಬಿಸಿ ಜನಾಂಗಕ್ಕೆ ಬಹಳ ದೊಡ್ಡ ಅನ್ಯಾಯ ಮಾಡುತ್ತಿದೆ. ಅಹಿಂದ ಹೆಸರಲ್ಲಿ ರಾಜಕಾರಣ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ ಅವರು ಯಾವ ವರ್ಗದಿಂದ ಬೆಂಬಲ ಪಡೆದಿದ್ದಾರೆ ಅವರಿಗೆ ಅನ್ಯಾಯ ಮಾಡುತ್ತಿದ್ದಾರೆ.

SC-ST Reservation Rollback

ಎಸ್‌ಸಿ, ಎಸ್‌ಟಿ ಒಳ ಮೀಸಲಾತಿ ಗೊಂದಲದ ಬಗ್ಗೆ ಸಂವಿಧಾನ ಪೀಠ ರಾಜ್ಯ ಸರ್ಕಾರಗಳಿಗೆ ಅಧಿಕಾರ ಕೊಟ್ಟಿದೆ ಅದನ್ನು ತೆಲಂಗಾಣ, ಹರಿಯಾಣ ಸೇರಿದಂತೆ ಅನೇಕ ರಾಜ್ಯಗಳು ಜಾರಿ ಮಾಡಿವೆ. ಒಳ ಮೀಸಲಾತಿ ಜಾರಿ ಮಾಡಲು ರಾಜ್ಯ ಕಾಂಗ್ರೆಸ್ ಗೆ ಹಾಗೂ ಅಲ್ಲಿನ ದಲಿತ ನಾಯಕರಿಗೆ ಅಸಕ್ತಿ ಇಲ್ಲ ಎಂದು ಆರೋಪಿಸಿದರು.

ಮೋದಿ ಮಿತ ಬಳಕೆ ಮನವಿಗೆ ಪರ-ವಿರೋಧ ಚರ್ಚೆ: ಮೊದಲು ಜನಪ್ರತಿನಿಧಿಗಳು ದುಂದು ವೆಚ್ಚ ಕಡಿಮೆ ಮಾಡಲಿ..
ಮೋದಿ ಮಿತ ಬಳಕೆ ಮನವಿಗೆ ಪರ-ವಿರೋಧ ಚರ್ಚೆ: ಮೊದಲು ಜನಪ್ರತಿನಿಧಿಗಳು ದುಂದು ವೆಚ್ಚ ಕಡಿಮೆ ಮಾಡಲಿ..

ಬಿಜೆಪಿ ಅವಧಿಯಲ್ಲಿ ಹೆಚ್ಚಳ

ಮೀಸಲಾತಿ ಹೆಚ್ಚಳದ ಕುರಿತು ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ನಾಗಮೋಹನ್ ದಾಸ್ ವರದಿ ಬಂದಿದೆ. ನಾನು ಸಿಎಂ ಆಗಿದ್ದಾಗ ಎಸ್ಸಿ ಸಮುದಾಯಕ್ಕೆ ಶೇ 15 ರಿಂದ 17 ಹಾಗೂ ಎಸ್ಟಿ ಸಮುದಾಯಕ್ಕೆ ಶೇ 3 ರಿಂದ ಶೇ 7 ಮೀಸಲಾತಿ ಹೆಚ್ಚಿಗೆ ಮಾಡಿದ್ದೇನೆ. ಇದರಿಂದ ಎಸ್ಸಿ ಎಸ್ಟಿ ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ. ಸುಮಾರು ನಾಲ್ಕು ಸಾವಿರ ಎಂಜನೀಯರಿಂಗ್ ಹಾಗೂ ಸುಮಾರು ನಾಲ್ಕು ನೂರು ವೈದ್ಯಕೀಯ ಸೀಟುಗಳು ಹೆಚ್ಚಿಗೆ ಲಭ್ಯವಾಗಿವೆ. ಈ ಆದೇಶ ಜಾರಿಯಾಗಿ ನಾಲ್ಕು ವರ್ಷ ಆಗಿದೆ ಎಂದು ಹೇಳಿದರು.

ವರದಿ ಜಾರಿಗೊಳಿಸದೇ ಗೊಂದಲ ಸೃಷ್ಟಿ

ರಾಜ್ಯ ಕಾಂಗ್ರೆಸ್ ಸರ್ಕಾರ ಸುಪ್ರಿಂ ಕೋರ್ಟ್ ಆದೇಶ, ನಾಗಮೋಹನ ದಾಸ್ ವರದಿ, ಜೆ.ಸಿ.ಮಾಧುಸ್ವಾಮಿ ಸಮಿತಿ ವರದಿ ಯಾವುದನ್ನೂ ಜಾರಿ ಮಾಡದೇ ಗೊಂದಲ ಸೃಷ್ಟಿ ಮಾಡಿದ್ದಾರೆ. ಈಗ ಕೋರ್ಟ್ ನಲ್ಲಿ ಶೇ 15ರಷ್ಟು ರಷ್ಟು ಮೀಸಲಾತಿ ಜಾರಿ ಮಾಡುತ್ತೇವೆ ಎಂದು ತಾವೇ ಬರೆದು ಕೊಟ್ಟಿದ್ದಾರೆ. ಬೆಳಗಾವಿ ಅಧಿವೇಶನದಲ್ಲಿ ಎಸ್ಸಿ ಎಸ್ಟಿ ಮೀಸಲಾತಿ ಪ್ರಮಾಣ 17ರಷ್ಟು ಮತ್ತು 7ರಷ್ಟು ಅಂತ ಕಾನೂನು ಮಾಡಿದ್ದಾರೆ. ಇನ್ನೊಂದು ಕಡೆ ಶೇ 15ರಷ್ಟು ಮತ್ತು ಶೇ 3ರಷ್ಟು ರಷ್ಟು ಮೀಸಲಾತಿ ಜಾರಿ ಮಾಡಿತ್ತಾರೆ. ಇದನ್ನು ದಲಿತ ಸಮುದಾಯಗಳು ಅರ್ಥ ಮಾಡಿಕೊಳ್ಳಬೇಕು. ಈ ಬಗ್ಗೆ ಜಾಗೃತಿ ಮೂಡಿಸಲು ನಮ್ಮ ಪಕ್ಷದ ನಾಯಕರು ತೀರ್ಮಾನ ಮಾಡಿದ್ದಾರೆ‌.

ನಮ್ಮ ಪಕ್ಷದ ರಾಜ್ಯಾಧ್ಯಕ್ಷರು, ಪ್ರತಿಪಕ್ಷದ ನಾಯಕರು, ಸಂಸದ ಗೋವಿಂದ ಕಾರಜೋಳ, ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಎಲ್ಲರೂ ಜಾಗೃತಿ ಮೂಡಿಸಲು (ಹೋರಾಟ) ತೀರ್ಮಾನ ಮಾಡಿದ್ದೇವೆ ಎಂದು ಹೇಳಿದರು.

Gold Price Hike: ಇಂದು ಚಿನ್ನ-ಬೆಳ್ಳಿ ದರದಲ್ಲಿ ಭಾರೀ ಏರಿಕೆ: ಒಂದೇ ದಿನಕ್ಕೆ ಬೆಳ್ಳಿ 15,000 ರೂ ಹೆಚ್ಚಳ
Gold Price Hike: ಇಂದು ಚಿನ್ನ-ಬೆಳ್ಳಿ ದರದಲ್ಲಿ ಭಾರೀ ಏರಿಕೆ: ಒಂದೇ ದಿನಕ್ಕೆ ಬೆಳ್ಳಿ 15,000 ರೂ ಹೆಚ್ಚಳ

ತಪ್ಪು ಮುಚ್ಚಿಕೊಳ್ಳಲು ಒತ್ತಡ

ಮೀಸಲಾತಿ ಹೆಚ್ಚಳ ಮಾಡಿರುವುದನ್ನು ಸಂವಿಧಾನದ ಶೆಡ್ಯೂಲ್ 9ಕ್ಕೆ ಸೇರಿಸುವ ಬಗ್ಗೆಯೂ ಚರ್ಚೆ ಮಾಡಿದ್ದೇವೆ. ಶೆಡ್ಯೂಲ್ 9 ನಲ್ಲಿ ಸೇರಿಸಿದರೂ ಅದನ್ನು ಪ್ರಶ್ನೆ ಮಾಡಲು ಅವಕಾಶ ಇದೆ. ರಾಜ್ಯ ಸರ್ಕಾರ ತಮ್ಮ ತಪ್ಪು ಮುಚ್ಚಿಕೊಳ್ಳಲು ಶೆಡ್ಯೂಲ್ 9ಗೆ ಸೇರಿಸುವಂತೆ ಒತ್ತಡ ಹೇರುವ ಹುನ್ನಾರ ಮಾಡಿದ್ದಾರೆ. ಇದರ ವಿರುದ್ಧ ಜಾಗೃತಿ ಮೂಡಿಸುತ್ತೇವೆ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+