''GST ಸರಳೀಕರಣ ಘೋಷಣೆ: ವ್ಯಾಪಾರಸ್ಥರು, ಗ್ರಾಹಕರಿಗೆ ಅನುಕೂಲ''
ಬೆಂಗಳೂರು, ಆಗಸ್ಟ್ 17: ಸರಕು ಸೇವಾ ತೆರಿಗೆಯನ್ನು (GST) ತರ್ಕ ಬದ್ಧಗೊಳಿಸುವಿಕೆ ಮತ್ತು ತೆರಿಗೆ ಕಾನೂನು ಸರಳೀಕರಣಗೊಳಿಸುವುದು ಸೇರಿದಂತೆ ತೆರಿಗೆ ವಿಚಾರ ಒಂದಷ್ಟು ಬೇಡಿಕೆ ಸಲ್ಲಿಕೆ ಆಗಿದ್ದವು. ಇತ್ತೀಚೆಗೆ ಕೇಂದ್ರ ಸರ್ಕಾರ
ವ್ಯಾಪಾರಸ್ಥರು, ಗಾಹಕರು ಇಬ್ಬರಿಗೂ ಅನುಕೂಲ ಆಗುವಂತೆ ಕೇಂದ್ರ ಸರ್ಕಾರ ಜಿಎಸ್ಟಿ ಸರಳೀಕರಣಗೊಳಿಸಿರುವುದು ಸ್ವಾಗತಾರ್ಹ ಎಂದಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು, ಕೇಂದ್ರದ ಈ ನಿರ್ಧಾರದಿಂದ ಆಗುವ ಪ್ರಯೋಜನ ಬಗ್ಗೆ ವಿವರಿಸಿದ್ದಾರೆ.
ಕೆಂಪು ಕೋಟೆಯ ಮೇಲೆ ಪ್ರಧಾನಿ ನರೇಂದ್ರ ಮೋದಿಯವರು ಜಿಎಸ್ಟಿ ಕಡಿತ ಮಾಡುವ ಘೋಷಣೆ ಮಾಡಿರುವುದು ಅತ್ಯಂತ ಸ್ವಾಗತಾರ್ಹ. ತೆರಿಗೆಯ ಸರಳೀಕರಣ ಮಹತ್ವದ ಹೆಜ್ಜೆ ಘೋಷಣೆ ಮಾಡಿದ್ದಾರೆ. ಇದರಿಂದ ಬರುವಂತಹ ದಿನಗಳಲ್ಲಿ ವ್ಯಾಪಾರಸ್ಥರಿಗೆ ಮತ್ತು ಗ್ರಾಹಕರಿಗೆ ಬಹಳ ಅನುಕೂಲಕವಾಗಲಿದೆ. ಜಿಎಸ್ಟಿ ತೆರಿಗೆ ಬಂದು ಐದು ವರ್ಷ ತುಂಬುತ್ತಿರುವ ಸಂದರ್ಭದಲ್ಲಿ ಜಿಎಸ್ಟಿ ಒಂದು ರಾಷ್ಟ್ರ ಒಂದು ತೆರಿಗೆ ಮತ್ತು ತೆರಿಗೆ ಸರಳೀಕರಣ ಮತ್ತು ಅತ್ಯಂತ ಸರಳವಾಗಿರುವ ತೆರಿಗೆ ಪದ್ಧತಿ ಇರಬೇಕು. ವಿಶೇಷವಾಗಿ ಸಣ್ಣ ವ್ಯಾಪರಸ್ಥರಿಗೆ, ರೈತರಿಗೆ ಅನುಕೂಲವಾಗಲಿ ಎನ್ನುವ ಉದ್ದೇಶದಿಂದ ನೆಚ್ಚಿನ ಪಧಾನಿ ನರೇಂದ್ರ ಮೋದಿಯವರು ತಂದಿದ್ದಾರೆ ಎಂದರು.

ಈ ಐದು ವರ್ಷದ ಅನುಭವದಲ್ಲಿ ಕೆಲವು ಬದಲಾವಣೆ ಬಯಸಿ, ರೈತರು, ಸಣ್ಣ ವ್ಯಾಪಾರಸ್ಥರು, ದೊಡ್ಡ ವ್ಯಾಪಾರಸ್ಥರು ಎಲ್ಲರೂ ಕೂಡ ಅಭಿಪ್ರಾಯಪಟ್ಟ ಹಿನ್ನೆಲೆಯಲ್ಲಿ ತೆರಿಗೆಯ ಸ್ಲ್ಯಾಬ್ ಕಡಿಮೆ ಮಾಡಬೇಕು ಮತ್ತು ಕೆಲವು ವಸ್ತುಗಳ ತೆರಿಗೆ ಕಡಿಮೆ ಮಾಡಬೇಕು ಎಂದು ತಿರ್ಮಾನಿಸಲಾಗಿದೆ. ಜಿಎಸ್ಟಿ ಕೌನ್ಸಿಲ್ನಲ್ಲಿ ನನ್ನ ನೇತೃತ್ವದಲ್ಲಿ ಗ್ರೂಪ್ ಆಫ್ ಮಿನಿಸ್ಟರ್ಸ್ ಸುಮಾರು ಒಂದೂವರೆ ವರ್ಷ ನಾವು ಅಧ್ಯಯನ ಮಾಡಿ ಹಲವಾರು ಸರಳೀಕರಣ ಮತ್ತು ವರ್ಗೀಕರಣ ಮಾಡಿ ನಮ್ಮ ವರದಿ ಕೊಟ್ಟಿದ್ದೇವೆ.
ವರದಿಯಲ್ಲಿ ಬಹಳಷ್ಟು ದಿನಬಳಕೆಯಾಗುವ ವಸ್ತುಗಳು ಅವುಗಳನ್ನು ಕಡಿಮೆ ಸ್ಲ್ಯಾಬ್ನಲ್ಲಿ ಹಾಕುವಂಥದ್ದು ಸ್ಲ್ಯಾಬ್ ಸಂಖ್ಯೆ ಕಡಿಮೆ ಮಾಡುವುದು. ಇದರಿಂದ ವ್ಯಾಪಾರಸ್ಥರಿಗೆ ಮತ್ತು ಖರೀದಿದಾರರಿಗೆ ಇಬ್ಬರಿಗೂ ಅನುಕೂಲವಾಗುವ ರೀತಿಯಲ್ಲಿ ನಾವು ಕೆಲವು ಸಲಹೆ ಸೂಚನೆಗಳನ್ನು ಅಂದು ಜಿಎಸ್ಟಿ ಕೌನಿಲ್ನಲ್ಲಿ ಮಂಡನೆ ಮಾಡಿದ್ದೇವು ಎಂದು ಹೇಳಿದರು.

ಜಿಎಸ್ಟಿ ಕೌನ್ಸಿಲ್ನಲ್ಲಿ ಒಪ್ಪಿರುವ ಕೆಲವು ತಿದ್ದುಪಡಿಗಳನ್ನು ತರಬೇಕೆಂದು ಕೇಂದ್ರ ಸರ್ಕಾರದ ತೀರ್ಮಾನವನ್ನು ಕೆಂಪು ಕೋಟೆಯ ಮೇಲೆ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿರುವುದು ಅತ್ಯಂತ ಸ್ವಾಗತಾರ್ಹ. ತೆರಿಗೆಯ ಸರಳೀಕರಣ ಮಹತ್ವದ ಹೆಜ್ಜೆ ಘೋಷಿಸಿದ್ದಾರೆ.
ಬರುವಂತಹ ದಿನಗಳಲ್ಲಿ ವ್ಯಾಪಾರಸ್ಥರಿಗೆ ಮತ್ತು ಗ್ರಾಹಕರಿಗೆ ಬಹಳ ಅನುಕೂಲಕವಾಗಲಿದೆ. ಇದೊಂದು ನರೇಂದ್ರ ಮೋದಿಯವರ ವಿಶೇಷವಾಗಿರುವ ಕೊಡುಗೆ ಬರುವ ದೀಪಾವಳಿಗೆ ಅವರು ಮಾಡುತ್ತಿರುವುದು ಇಡೀ ರಾಷ್ಟ್ರವೇ ಸ್ವಾಗತ ಮಾಡುತ್ತದೆ ಎನ್ನುವ ವಿಶ್ವಾಸ ನನಗಿದೆ ಎಂದು ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ.
-
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ












Click it and Unblock the Notifications