ಮಹಾಭಾರತ ವಿರುದ್ಧ ಹೇಳಿಕೆ, ಕಮಲ್ ವಿರುದ್ಧ ಪ್ರಣವಾನಂದ ಸ್ವಾಮೀಜಿ ದೂರು
ಬೆಂಗಳೂರು, ಮಾರ್ಚ್. 26 : ಮಹಾಭಾರತದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ನಟ ಕಮಲ್ ಹಾಸನ್ ವಿರುದ್ಧ ಹಾವೇರಿ ಜಿಲ್ಲೆ ಅರೆಮಲ್ಲಾಪುರದ ಶರಣಬಸವೇಶ್ವರ ದೇವಸ್ಥಾನದ ಪೀಠಾಧಿಪತಿ ಪ್ರಣವಾನಂದ ಸ್ವಾಮೀಜಿ ದೂರು ನಿಡಿದ್ದಾರೆ.
ಇತ್ತೀಚಿಗೆ ಕಮಲ್ ಹಾಸನ್ ಅವರು ಖಾಸಗಿ ಸುದ್ದಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನವೊಂದರಲ್ಲಿ ಮಹಾಭಾರತದ ಬಗ್ಗೆ ಕೀಳಾಗಿ ಮಾತನಾಡಿದ್ದರು. ಇದರಿಂದ ಕಮಲ್ ಹಾಸನ್ ವಿರುದ್ಧ ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಣವಾನಂದ ಸ್ವಾಮೀಜಿ ದೂರು ದಾಖಲಿಸಿದ್ದಾರೆ.[ಮಹಾಭಾರತ ವಿರುದ್ಧ ಹೇಳಿಕೆ, ಕಮಲ್ ವಿರುದ್ಧ ಪಿಐಎಲ್]
Bengaluru: Pranavananda Swami from Basaveshwara Mutt files police complaint against Kamal Hassan for his remarks on Mahabharata pic.twitter.com/MaiWOKIwIj
— ANI (@ANI_news) March 26, 2017
ಮಹಾಭಾರತದಲ್ಲಿ ಹೆಣ್ಣನ್ನು ಕೀಳಾಗಿ ನಡೆಸಿಕೊಳ್ಳಲಾಗಿದೆ. ಜೂಜಾಟದಲ್ಲಿ ದಾಳದಂತೆ ಬಳಸಿಕೊಳ್ಳಲಾಗಿದೆ. ಇಂಥ ಕೀಳುಕಥೆಗಳನ್ನು ನಾವು ಪಠ್ಯದಲ್ಲಿ ಮಕ್ಕಳಿಗೆ ಹೇಳಿಕೊಡಬೇಕಾಗಿದೆ ಎಂದಿದ್ದರು.