ಗುಂಡು ಹೊಡೆದು ಪತ್ನಿ ಹತ್ಯೆ; ತಾನೂ ಆತ್ಮಹತ್ಯೆಗೆ ಯತ್ನಿಸಿದ ಪತಿ !
ಬೆಂಗಳೂರು, ನವೆಂಬರ್ 16: ಕೌಟುಂಬಿಕ ಕಲಹ ಕೊಲೆಯಲ್ಲಿ ಅಂತ್ಯವಾಗಿದೆ. ಪತ್ನಿಗೆ ಗುಂಡು ಹೊಡೆದು ಹತ್ಯೆ ಮಾಡಿರುವ ಪತಿ ತಾನೂ ಗುಂಡು ಹೊಡೆದುಕೊಂಡು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಘಟನೆ ಬೆಂಗಳೂರಿನ ಬಸವೇಶ್ವರನಗರದಲ್ಲಿ ನಡೆದಿದೆ.
ಕೊಡಗಿನ ಸೋಮವಾರಪೇಟೆ ಮೂಲದ ಕಾಳಪ್ಪ ಪತ್ನಿಯನ್ನು ಹತ್ಯೆ ಮಾಡಿ ತಾನೂ ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಆರೋಪಿ. ಸುಮಿತ್ರಾ ಪತಿಯಿಂದ ಕೊಲೆಯಾದ ಮಹಿಳೆ. ಬಸವೇಶ್ವರನಗದಲ್ಲಿ ನೆಲೆಸಿರುವ ಈ ದಂಪತಿಗೆ ಮೂವರು ಹೆಣ್ಣು ಮಕ್ಕಳಿದ್ದಾರೆ.
ದಂಪತಿ ನಡುವೆ ಪದೇ ಪದೇ ಜಗಳವಾಗುತ್ತಿತ್ತು. ಹಣ ತುಂಬಿಸುವ ಎಟಿಎಂ ವಾಹನದ ಸೆಕ್ಯುರಿಟಿ ಗಾರ್ಡ್ ಆಗಿದ್ದ ಕಾಳಪ್ಪ ಸಿಂಗಲ್ ಬ್ಯಾರಲ್ ಬಂದೂಕು ಹೊಂದಿದ್ದ. ಪತ್ನಿಯ ನಡವಳಿಕೆ ಮೇಲೆ ಅನುಮಾನ ಪಡುತ್ತಿದ್ದ. ಕೆಲಸಕ್ಕೆ ಹೋಗುವಾಗ ಪತ್ನಿಯನ್ನು ಮನೆಯಲ್ಲಿಟ್ಟು ಬೀಗ ಹಾಕಿಕೊಂಡು ಕೆಲಸಕ್ಕೆ ಹೋಗುತ್ತಿದ್ದ. ಈ ವಿಚಾರವಾಗಿ ದಂಪತಿ ನಡುವೆ ಪದೇ ಪದೇ ಜಗಳ ಆಗುತ್ತಿತ್ತು.

Recommended Video
ಇದೇ ವಿಚಾರವಾಗಿ ದೀಪಾವಳಿ ಹಬ್ಬದ ದಿನವೂ ಇಬ್ಬರ ನಡುವೆ ಜಗಳವಾಗಿದೆ. ಬೆಂಗಳೂರಿನಲ್ಲಿಯೇ ನಲೆಸಿರುವ ಮಕ್ಕಳು ಕಾಳಪ್ಪನಿಗೆ ಬುದ್ಧಿವಾದ ಹೇಳಿದ್ದರು. ಸುಮಿತ್ರ ನಿನ್ನೆ ಮಗಳ ಮನೆಗೆ ಹೋಗಿದ್ದರು. ಇಂದು ಬೆಳಗ್ಗೆ ಮನೆಗೆ ವಾಪಸು ಬಂದಿದ್ದ ಸುಮಿತ್ರಾ ಜತೆ ಕಾಳಪ್ಪ ಜಗಳ ತೆಗೆದಿದ್ದಾನೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಪತ್ನಿಗೆ ಬಂದೂಕಿನಿಂಧ ಗುಂಡು ಹೊಡೆದು ಹತ್ಯೆ ಮಾಡಿದ್ದಾನೆ. ಬಳಿಕ ತಾನೂ ಗುಂಡು ಹಾರಿಸಿಕೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಕಾಳಪ್ಪ ಚಿಕಿತ್ಸೆ ಪಡೆಯುತ್ತಿದ್ದಾನೆ. ಸಾವಿತ್ರಿ ಅವರ ಮೃತ ದೇಹ ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಬಸವೇಶ್ವರನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
-
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು












Click it and Unblock the Notifications