ಹಿಮಾಲಯ ಚಾರಣಕ್ಕೆ ಹೋದ ಬೆಂಗಳೂರು ವೈದ್ಯ ಕಣ್ಮರೆ!
ಬೆಂಗಳೂರು, ಜೂ. 27: ಹಿಮಾಲಯ ಪರ್ವತವೇರಲು ನೇಪಾಳಕ್ಕೆ ಹೋಗಿದ್ದ ಮಣಿಪಾಲ್ ಆಸತ್ರೆಯ ವೈದ್ಯ ನಾಪತ್ತೆಯಾಗಿದ್ದು, ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಇಲ್ಲಿನ ಮಣಿಪಾಲ ಆಸ್ಪತ್ರೆಯಲ್ಲಿ ವೈದ್ಯರಾಗಿ ಕೆಲಸ ಮಾಡುತ್ತಿದ್ದ ಡಾ. ಎಸ್. ಚಂದ್ರಮೋಹನ್ (31) ಅನುಮಾನಸ್ಪದವಾಗಿ ನಾಪತ್ತೆಯಾದವರು. ಬೆಂಗಳೂರಿನ ವಸಂತನಗರದಲ್ಲಿ ನೆಲೆಸಿದ್ದ ಚಂದ್ರಮೋಹನ್ ಸರ್ಜಾಪುರ ರಸ್ತೆಯ ಮಣಿಪಾಲ್ ಆಸ್ಪತ್ರೆಯಲ್ಲಿ ಹಲವು ವರ್ಷದಿಂದ ಕೆಲಸ ಮಾಡುತ್ತಿದ್ದರು. ಹಿಮಾಲಯಕ್ಕೆ ತೆರಳಿದ್ದು, ವಾಪಸು ಬರದ ಬಗ್ಗೆ ತಂದೆ ಶಿವನಾಥ್ ನೀಡಿದ ದೂರಿನ ಮೇರೆಗೆ ಹೈಗ್ರೌಂಡ್ಸ್ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳ ಮೂಲಕ ನೇಪಾಳ ಪೊಲೀಸರಿಗೆ ಮಾಹಿತಿ ವಿನಿಯಮ ಮಾಡಿಕೊಳ್ಳಲಾಗಿದೆ.
ಸ್ಥಳೀಯ ಪೊಲೀಸರು ಚಂದ್ರಮೋಹನ್ಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಚಂದ್ರಮೋಹನ್ ಪೋಷಕರು ಮತ್ತು ಸಹೋದರ ನೇಪಾಳಕ್ಕೆ ಹೋಗಿ ಹುಡುಕಾಡುತ್ತಿದ್ದಾರೆ. ಇನ್ನು ಹಿಮಾಯಲಯಕ್ಕೆ ತೆರಳಿದ್ದ ಬಗ್ಗೆ ಚಂದ್ರ ಮೋಹನ್ ಅಲ್ಲಿಂದ ಪೋಟೋ ಕಳುಹಿಸಿ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದರು. ಬೆಂಗಳೂರಿನಿಂದ ನೇಪಾಳಕ್ಕೆ ಮೇ 03 ರಂದು ತೆರಳಿದ್ದರು. ಪೋಷಕರಿಗೆ ವಿಷಯ ತಿಳಿಸಿದ್ದು, ಇದೀಗ ಎರಡು ತಿಂಗಳು ಸಮೀಪಿಸುತ್ತಿದ್ದರೂ ಡಾ. ಚಂದ್ರಮೋಹನ್ ಸುಳಿವು ಸಿಕ್ಕಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಕೆಲ ದಿನಗಳ ಕಾಲ ನೇಪಾಳದ ಪ್ರವಾಸಿ ತಾಣಗಳಿಗೆ ಭೇಟಿ ನೀಡಿರುವ ವೈದ್ಯ ಚಂದ್ರಮೋಹನ್, ಹಿಮಾಲಯ ಪರ್ವತಕ್ಕೆ ಚಾರಣ ತೆರಳಲು ಎವರೆಸ್ಟ್ ಕ್ಯಾಂಪ್ನಲ್ಲಿ ತಂಗಿದ್ದರು. ಮೇ. 20 ರಂದು ವಾಟ್ಸಪ್ ಮೂಲಕ ಪೋಟೋ ಹಾಗೂ ಸಂದೇಶ ಕಳುಹಿಸಿದ್ದರು. ಆ ಬಳಿಕ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಪೋಷಕರು ಎಷ್ಟೇ ಪ್ರಯತ್ನಿಸಿದರು ಸಂಪರ್ಕಕ್ಕೆ ಸಿಕ್ಕಿರಲಿಲ್ಲ ಎಂದು ಹೇಳಲಾಗಿದೆ. ಚಂದ್ರಮೋಹನ್ ಒಂಟಿಯಾಗಿ ನೇಪಾಳಕ್ಕೆ ಹೋಗಿದ್ದು, ಅವರೊಬ್ಬರೇ ಹಿಮಾಲಯ ಪರ್ವತಕ್ಕೆ ತೆರಳಿರುವ ಸಾಧ್ಯತೆಯಿದೆ. ಅವರನ್ನು ಪತ್ತೆ ಮಾಡುವುದು ಸವಾಲಾಗಿದ್ದು ಎಂದು ಪೊಲೀಸರು ತಿಳಿಸಿದ್ದಾರೆ.

ದೇವರ ಭಕ್ತಿಯಲ್ಲಿ ಮುಳಗಿದ್ದ ವೈದ್ಯ:
Recommended Video
ವೈದ್ಯಕೀಯ ಕ್ಷೇತ್ರದಲ್ಲಿ ಹೆಸರು ಮಾಡಿರುವ ಚಂದ್ರಮೋಹನ್, ಹಲವು ಸರ್ಜರಿಗಳ ಮೂಲಕ ಹೆಸರು ಗಳಿಸಿದ್ದರು. ವಿಶ್ರಾಂತಿ ಸಿಕ್ಕಾಗ ಮನೆಯಲ್ಲಿ ಪದೇ ಪದೇ ದೇವರ ಧ್ಯಾನ ಮಾಡುತ್ತಿದ್ದರು. ದೇವರ ಭಕ್ತಿಯಿಂದ ಹಿಮಾಲಯಕ್ಕೆ ಹೋಗಿದ್ದು, ಇಷ್ಟು ದಿನವಾದರೂ ಸಂಪರ್ಕಕ್ಕೆ ಸಿಕ್ಕಿಲ್ಲ. ಹೀಗಾಗಿ ಚಂದ್ರಮೋಹನ್ ಅವರನ್ನು ಹುಡುಕಿಕೊಡಿ ಎಂದು ದೂರು ಕೊಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
-
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Dawood Ibrahim: "ರಿಯಲ್ ಡಾನ್ ದಾವೂದ್ ಇಬ್ರಾಹಿಂ" ಸ್ಟಿಕ್ಕರ್ ಹಾಕಿಸಿದ್ದ ಬಸ್ ಚಿಕ್ಕಮಗಳೂರಿನಲ್ಲಿ ಪೊಲೀಸ್ ವಶಕ್ಕೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ












Click it and Unblock the Notifications