ಕ್ವಾರಂಟೈನ್: ಹೋಟೆಲ್ ಬಾತ್ರೂಮ್ ಸೀಲಿಂಗ್ ಕುಸಿತ, ಮಹಿಳೆ ಪಾರು
ಬೆಂಗಳೂರು, ಮೇ 21: ಕೊರೊನಾ ಹಾವಳಿಯಿಂದ ಹೊರ ದೇಶ ಹಾಗೂ ಹೊರ ರಾಜ್ಯಗಳಿಂದ ಬಂದವರು ಕಡ್ಡಾಯವಾಗಿ ಕ್ವಾರಂಟೈನ್ನಲ್ಲಿ ಇರಬೇಕಾಗುತ್ತದೆ. ಅದರಲ್ಲೂ ಹೊರ ದೇಶಗಳಿಂದ ಬಂದವರು ಕ್ವಾರಂಟೈನ್ ತಪ್ಪಿಸಿಕೊಳ್ಳುವ ಹಾಗಿಲ್ಲ.
Recommended Video
ಹೀಗೆ ಹೊರದೇಶದಿಂದ ಬಂದು ಬೆಂಗಳೂರಿನ ಮೆಜೆಸ್ಟಿಕ್ ಬಳಿ ಕ್ವಾರಂಟೈನ್ ನಲ್ಲಿ ಉಳಿದುಕೊಂಡಿರುವ ಕುಟುಂಬವೊಂದು ಹೋಟೆಲ್ ನಲ್ಲಿ ಸಂಭವಿಸಿದ ಅವಘಡದಿಂದ ಪ್ರಾಣಾಪಾಯದಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ.
ಹೌದು, ಹೊರದೇಶದಿಂದ ಬಂದು ಮೆಜೆಸ್ಟಿಕ ಬಳಿ ಹೋಟೆಲ್ ಒಂದರಲ್ಲಿ ಹಣ ಪಾವತಿಸಿ ಮೀನಾಕ್ಷಿ ವೆಂಕಟರಮಣ ಎನ್ನುವರ ಕುಟುಂಬ ತಂಗಿದೆ. ಬುಧವಾರ ಮೀನಾಕ್ಷಿ ಅವರು ಸ್ನಾನ ಮಾಡುವಾಗ ಹೋಟೆಲ್ನ ಬಾತ್ರೂಮ್ನ ಸೀಲಿಂಗ್ ಕುಸಿದು ಬಿದ್ದಿದೆ. ಘಟನೆ ನಡೆದಾಗ ಮೀನಾಕ್ಷಿ ಸ್ವಲ್ಪದರಲ್ಲೇ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಸೀಲಿಂಗ್ ಅವಸ್ಥೆ ಬಗ್ಗೆ ಮೀನಾಕ್ಷಿ ಅವರು ಹೋಟೆಲ್ ಸಿಬ್ಬಂದಿ ಗಮನಕ್ಕೆ ತಂದಿದ್ದರೂ ಹೋಟೆಲ್ನವರು ನಿರ್ಲಕ್ಷ್ಯವಹಿಸಿದ್ದರು ಎಂದು ಮೀನಾಕ್ಷಿ ಆರೋಪಿಸಿದ್ದಾರೆ.

ಈ ಬಗ್ಗೆ ಮಾಹಿತಿಯನ್ನು ಮೀನಾಕ್ಷಿ ಅವರ ಮಗ ಟ್ವಿಟ್ಟರ್ಗೆ ಹಾಕಿ ಕ್ಟಾರಂಟೈನ್ ವ್ಯವಸ್ಥೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ. "ನಾವು ಇಲ್ಲಿಗೆ ಏಳು ದಿನಗಳು ಬಂದಿದ್ದೇವೆ. ಆದರೆ, ನಮ್ಮ ಸ್ವ್ಯಾಬ್ ಪರೀಕ್ಷೆಯನ್ನು ಯಾವಾಗ ಮಾಡಲಾಗುತ್ತದೆ ಎಂದು ನಮಗೆ ತಿಳಿದಿಲ್ಲ. ನಾವು ವಿಚಾರಿಸಿದಾಗ, ಹಿರಿಯ ನಾಗರಿಕರು, ಗರ್ಭಿಣಿಯರು ಮತ್ತು 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಪರೀಕ್ಷಿಸಲು ಅಧಿಕಾರಿಗಳಿಗೆ ಮಾತ್ರ ಆದೇಶವಿದೆ ಎಂದು ನಮಗೆ ತಿಳಿಸಿದ್ದಾರೆ. ಆದರೆ, ನಮ್ಮನ್ನು ಇಂತಹ ಕೆಟ್ಟ ಹೋಟೆಲ್ನಲ್ಲಿ ಉಳಿಯಲು ಬಿಟ್ಟು ಹೋಟೆಲ್ ಬಿಲ್ ಕಟ್ಟಿಸುತ್ತಿದ್ದಾರೆ'' ಎಂದು ಮೀನಾಕ್ಷಿ ಅವರು ದೂರಿರುವುದಾಗಿ ನ್ಯೂಸ್ ಮಿನಿಟ್ ವರದಿ ಮಾಡಿದೆ.
-
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Sleeper Vande Bharat; ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್ಗೆ ಕೇಂದ್ರ ಅಸ್ತು, ಕರ್ನಾಟಕಕ್ಕೆ ಏನೆಲ್ಲ ಲಾಭ? -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
UGCET ಅಭ್ಯರ್ಥಿಗಳ ಗಮನಕ್ಕೆ: ಇದೇ ತಿಂಗಳು CET ಪರೀಕ್ಷೆ, ರಿಲೀಸಾದ ನಕಲಿ ಲಿಂಕ್ ಬಗ್ಗೆ ಎಚ್ಚರ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ












Click it and Unblock the Notifications