ನಾಮಫಲಕಗಳಲ್ಲಿ ಕನ್ನಡಕ್ಕೆ ಆದ್ಯತೆ, ಜಾಹೀರಾತು ಬೈಲಾ ತಿದ್ದುಪಡಿ: ಬಿಬಿಎಂಪಿ ಆಯುಕ್ತ
ಬೆಂಗಳೂರು,ಜನವರಿ 27: ಅಂಗಡಿ ಮುಂಗಟ್ಟುಗಳಲ್ಲಿರುವ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯಗೊಳಿಸಲು ನಿಯಮಕ್ಕೆ ತಿದ್ದುಪಡಿ ತರುವುದಾಗಿ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ.
ಕನ್ನಡ ಭಾಷೆಗೆ ಆದ್ಯತೆ ನೀಡಲು ಬಿಬಿಎಂಪಿ ಜಾಹೀರಾತು ಬೈಲಾಗಳಿಗೆ ತಿದ್ದುಪಡಿ ತರಲಾಗುತ್ತಿದೆ.
ಜಾಹೀರಾತು ಬೈಲಾ ತಿದ್ದುಪಡಿ ಜಾರಿಯಾದ ಬಳಿಕ ಕಾನೂನಾತ್ಮಕ ಸಮಸ್ಯೆ ಇರುವುದಿಲ್ಲ, ಬಳಿಕ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ನಿಯಮದ ಅನುಷ್ಠಾನ ಸುಲಭ, ಈ ನಿಯಮ ಉಲ್ಲಂಘಿಸುವ ಅಂಗಡಿ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬಹುದು ಎಂದರು.

ಎಲ್ಲ ಅಂಗಡಿ ಮುಂಗಟ್ಟುಗಳ ನಾಮಫಲಕಗಳಲ್ಲಿ ಕನ್ನಡ ಭಾಷೆಗೆ ಶೇ.67ರಷ್ಟು ಪ್ರಾತಿನಿಧ್ಯವಿರಬೇಕು. ಶೇ.33ರಷ್ಟು ಹಿಂದಿ, ಇಂಗ್ಲಿಷ್ ಅಥವಾ ಇತರೆ ಭಾಷೆ ಬಳಸಬಹುದು.
ಕನ್ನಡ ಭಾಷೆಗೆ ಆದ್ಯತೆ ನೀಡದಿದ್ದರೆ ಅಂಗಡಿ ಮಾಲೀಕರಿಗೆ ಬಿಬಿಎಂಪಿಯಿಂದ ನೀಡಲಾದ ಉದ್ದಿಮೆ ಪರವಾನಗಿ ರದ್ದು ಮಾಡುತ್ತೇವೆ ಎಂದು ಪಾಲಿಕೆ ಈ ಹಿಂದೆಯೇ ಹೇಳಿತ್ತು.
ಇದನ್ನು ಪ್ರಶ್ನಿಸಿ ಕೆಲವು ಮಾಲೀಕರು ಹೈಕೋರ್ಟ್ ಮೆಟ್ಟಿಲೇರಿದ್ದರು, ಈ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಹಾಗಾಗಿ ಅಂಗಡಿ ಮುಂಗಟ್ಟುಗಳ ನಾಮಫಲಕದಲ್ಲಿ ಕನ್ನಡಕ್ಕೆ ಆದ್ಯತೆ ನೀಡುವುದನ್ನು ಜಾಹೀರಾತು ಬೈಲಾದಲ್ಲಿ ಕಡ್ಡಾಯ ಮಾಡುತ್ತಿದ್ದೇವೆ ಎಂದು ಆಯುಕ್ತರು ಹೇಳಿದ್ದಾರೆ.
ಬಿಬಿಎಂಪಿ ಹೊರಡಿಸುವ ಪ್ರತಿಯೊಂದು ಸುತ್ತೋಲೆಯಲ್ಲೂ ಕನ್ನಡ ಇರುತ್ತದೆ. ಆದರೆ ಕೇಂದ್ರ ಸರ್ಕಾರಕ್ಕೆ ಕಳುಹಿಸುವ ಸುತ್ತೋಲೆಗಳು ಮಾತ್ರ ಇಂಗ್ಲಿಷ್ನಲ್ಲೂ ಇರುತ್ತದೆ.
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ -
ಪ್ರೇಮ್ ಬರೆದ ಹಾಡು ಅಕ್ಷರ ರೂಪದ ಬೆತ್ತಲೆ ಸಿನೆಮಾ ತೋರಿಸಿದಂತಿದೆ: ಅರುಣ್ ಜೋಳದಕೂಡ್ಲಿಗಿ ಬರಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು












Click it and Unblock the Notifications