ಒತ್ತುವರಿದಾರರಿಗೆ ಬಿಗ್ ಶಾಕ್: ರಾಜಕಾಲುವೆ ಒತ್ತುವರಿ ತೆರವು ಸಂಬಂಧ ನಾಳೆ ಮಹತ್ವದ ಸಭೆ
ಬೆಂಗಳೂರು, ಜೂನ್ 12: ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಖಡಕ್ ಸೂಚನೆ ನೀಡಿದ ನಂತರ ಎಚ್ಚೆತ್ತಿರುವ ಬೆಂಗಳೂರು ಜಿಲ್ಲಾಡಳಿತ, ಒತ್ತುವರಿ ತೆರವು ಮಾಡಲು ಮುಂದಾಗಿದೆ. ಒತ್ತುವರಿ ತೆರವು ಕಾರ್ಯಾಚರಣೆ ಸಂಬಂಧ ಚರ್ಚೆ ನಡೆಸಲು, ಜೂನ್ 13ರಂದು ಮಹತ್ವದ ಸಭೆ ಕರೆಯಲಾಗಿದೆ.
ಈ ಸಭೆ ಬಗ್ಗೆ ಜಿಲ್ಲಾಧಿಕಾರಿ ದಯಾನಂದ ಅವರು ಟಿವಿ 9ಗೆ ಮಾಹಿತಿ ನೀಡಿದ್ದಾರೆ. ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಮತ್ತು ಜಿಲ್ಲಾಧಿಕಾರಿ ದಯಾನಂದ ಅವರ ನೇತೃತ್ವದಲ್ಲಿ ಈ ಸಭೆ ನಡೆಯಲಿದೆ. ಸಭೆಯಲ್ಲಿ ಸರ್ವೆ ಅಧಿಕಾರಿಗಳು, ಬಿಬಿಎಂಪಿ ಎಸ್ಡಬ್ಲ್ಯುಡಿ ಇಂಜಿನಿಯರ್ ಗಳು, ಬೆಂಗಳೂರು ನಗರದ ತಹಶೀಲ್ದಾರ್ ಭಾಗವಹಿಸಲಿದ್ದಾರೆ. ರಾಜಕಾಲುವೆ ಒತ್ತುವರಿ ಸರ್ವೆ ಕೆಲಸ ಮುಗಿದಿದ್ದು, ಸದ್ಯದಲ್ಲೇ ಒತ್ತುವರಿಯನ್ನು ಗುರುತಿಸುವ ಕೆಲಸ ಶುರುವಾಗಲಿದೆ ಎಂದು ಹೇಳಿದ್ದಾರೆ.

ಡಿಸಿಎಂ ಮತ್ತು ಬೆಂಗಳೂರು ಅಭಿವೃದ್ಧಿ ಸಚಿವರಾಗಿರುವ ಡಿಕೆ ಶಿವಕುಮಾರ್ ಇತ್ತೀಚೆಗೆ ಬೆಂಗಳೂರು ನಗರ ಪ್ರದಕ್ಷಿಣೆ ಹಾಕುವ ಮೂಲಕ ವಿವಿಧ ಕಾಮಗಾರಿಗಳು, ಸಮಸ್ಯೆಗಳನ್ನು ಗುರುತಿಸಿದ್ದರು. ಇನ್ನೇನು ಮಳೆ ಶುರುವಾಗಲಿದ್ದು, ನಗರದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಪರಿಶೀಲನೆ ಮಾಡಿದ್ದರು. ನಂತರ ಮಾತನಾಡಿದ್ದ ಅವರು, ಒಳಚರಂಡಿ, ರಾಜಕಾಲುವೆಗಳನ್ನು ವೀಕ್ಷಿಸಿದ್ದು, ಮಳೆಯಿಂದಾಗಿ ಆಗುವ ಸಮಸ್ಯೆಗಳ ಬಗ್ಗೆ ತಿಳಿದುಕೊಂಡಿದ್ದೇನೆ ಎಂದು ಹೇಳಿದ್ದರು.
ಮಳೆಯಿಂದಾಗಿ ತುಂಬಿದ್ದ ಅಂಡರ್ ಪಾಸ್
ಇನ್ನು ಇತ್ತೀಚೆಗೆ ತಾನೆ ನಗರದಲ್ಲಿ ಸುರಿದ ಮಳೆಯಿಂದಾಗಿ ಅಂಡರ್ ಪಾಸ್ನಲ್ಲಿ ನೀರು ನಿಂತು ಮಹಿಳೆಯೊಬ್ಬರು ಮೃತಪಟ್ಟಿದ್ದರು. ನಗರದ ಕೆಆರ್ ಸರ್ಕಲ್ ಬಳಿ ಇರುವ ಅಂಡರ್ ಪಾಸ್ನಲ್ಲಿ ನೀರು ತುಂಬಿ ಕಾರು ಮುಳುಗಡೆಯಾದ ಪರಿಣಾಮ ಆಂಧ್ರ ಮೂಲಕ ಮಹಿಳೆ ಮೃತಪಟ್ಟಿದ್ದರು. ನಂತರ ಎಚ್ಚೆತ್ತಿದ್ದ ಬಿಬಿಎಂಪಿ ಅಧಿಕಾರಿಗಳು ವಿವಿಧ ಅಂಡರ್ ಪಾಸ್ಗಳಲ್ಲಿ ಮಳೆ ನೀರು ಸರಾಗವಾಗಿ ಹರಿದುಹೋಗಲು ಕ್ರಮ ವಹಿಸಿದ್ದರು.
ಸಿಎಂ ಸಿದ್ದರಾಮಯ್ಯ ಅವರು ಕೂಡ ಮಳೆಗಾಲದಲ್ಲಿ ಆಗುವ ತೊಂದರೆಗಳನ್ನು ತಪ್ಪಿಸುವಂತೆ ಸೂಚನೆ ನೀಡಿದ್ದರು. ಡಿಕೆ ಶಿವಕುಮಾರ್ ಬೆಂಗಳೂರು ಉಸ್ತುವಾರಿ ಸಚಿವರಾದ ಬಳಿಕ ನಗರದಲ್ಲಿ ಮಳೆಯಿಂದ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.
ಕಳೆದ ಬಾರಿ ಮಳೆಯಿಂದಾಗಿ ಅವಾಂತರ
ಕಳೆದ ವರ್ಷ ಸುರಿದ ಭಾರಿ ಮಳೆಯಿಂದಾಗಿ ಬೆಂಗಳೂರಿನಲ್ಲಿ ಜಲ ಪ್ರವಾಹ ಉಂಟಾಗಿತ್ತು. ಹಲವು ಬಡಾವಣೆಗಳು, ಅಪಾರ್ಟ್ಮೆಂಟ್ಗಳಿಗೂ ನೀರು ನುಗ್ಗಿತ್ತು, ಹೊರ ವರ್ತುಲ ರಸ್ತೆಗಳಲ್ಲಿ ವಾರಗಟ್ಟಲೆ ನೀರು ನಿಂತು ಕೆರೆಗಳಂತಾಗಿದ್ದವು. ನಗರದಲ್ಲಿ ಈ ಅವಸ್ಥೆಗೆ ರಾಜಕಾಲುವೆ ಒತ್ತುವರಿಯೇ ಕಾರಣ ಎಂದು ವ್ಯಾಪಕ ಆಕ್ರೋಶ ವ್ಯಕ್ತವಾದ ಬಳಿಕ ಎಚ್ಚೆತ್ತಿದ್ದ ಸರ್ಕಾರ, ರಾಜಕಾಲುವೆ ಒತ್ತುವರಿಗೆ ಸೂಚನೆ ನೀಡಿತ್ತು, ನಂತರ ರಾಜಕಾಲುವೆ ಮತ್ತು ಕೆರೆ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಬಿಬಿಎಂಪಿ ಆರಂಭಿಸಿತ್ತು, ಮಳೆಗಾಲದ ನಂತರ ತೆರವು ಕಾರ್ಯಾಚರಣೆ ನಿಂತಿತ್ತು.
ಈಗ ಮಳೆಗಾಲ ಆರಂಭವಾಗಲಿದ್ದು ಮೊದಲೇ ಎಚ್ಚೆತ್ತಿರುವ ಅಧಿಕಾರಿಗಳು ಸಮಸ್ಯೆಯಾಗದಂತೆ ನೋಡಿಕೊಳ್ಳಲು ಮುಂದಾಗಿದ್ದಾರೆ. ರಾಜಧಾನಿಯಲ್ಲಿ ಮತ್ತೆ ಜೆಸಿಬಿ ಅಬ್ಬರಿಸಲಿದ್ದು, ಒತ್ತುವರಿದಾರರಿಗೆ ಶಾಕ್ ಕಾದಿದೆ.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ










Click it and Unblock the Notifications