198 ವಾರ್ಡ್ಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಿಸಿದ ಬಿಬಿಎಂಪಿ
ಬೆಂಗಳೂರು, ಸೆಪ್ಟೆಂಬರ್ 22: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ 198 ವಾರ್ಡ್ಗಳಿಗೆ ನೋಡೆಲ್ ಅಧಿಕಾರಿಗಳನ್ನು ನೇಮಿಸಿದೆ. ಬಿಬಿಎಂಪಿ ಕೌನ್ಸಿಲ್ ಅವಧಿ ಮುಕ್ತಾಯಗೊಂಡಿದ್ದು, ಪಾಲಿಕೆ ಆಡಳಿತ ನೋಡಿಕೊಳ್ಳಲು ಸರ್ಕಾರ ಆಡಳಿತಾಧಿಕಾರಿ ನೇಮಿಸಿದೆ.
ಬಿಬಿಎಂಪಿ ಚುನಾಯಿತ ಸದಸ್ಯರ ಅವಧಿ ಮುಕ್ತಾಯವಾಗಿರುವುದರಿಂದ, ಸಾರ್ವಜನಿಕರಿಗೆ ಪರಿಣಾಮಕಾರಿಯಾದ ಸೇವೆಗಳನ್ನು ಒದಗಿಸಲು ಪ್ರತಿ ವಾರ್ಡ್ಗೆ ನೋಡೆಲ್ ಅಧಿಕಾರಿಗಳನ್ನು ನೇಮಿಸಲಾಗಿದೆ.
ಬಿಬಿಎಂಪಿ ಆಯುಕ್ತ ಎನ್. ಮಂಜುನಾಥ್ ಪ್ರಸಾದ್ ಎಲ್ಲಾ 198ವಾರ್ಡ್ಗಳಿಗೆ ಹಿರಿಯ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳಾಗಿ ನೇಮಿಸಲಾಗಿದೆ. ಜನರು ವಾರ್ಡ್ಗಳ ಸಮಸ್ಯೆಗಳ ಬಗ್ಗೆ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಹೇಳಿದ್ದಾರೆ.
ಬೃತಹ್ ಬೆಂಗಳೂರು ಮಹಾನಗರ ಪಾಲಿಕೆಗೆ ಚುನಾವಣೆ ನಡೆದು, ಕಾರ್ಪೊರೇಟರ್ ಆಯ್ಕೆಯಾಗುವ ತನಕ ನೋಡೆಲ್ ಅಧಿಕಾರಿಗಳು ವಾರ್ಡ್ಗಳ ಸಮಸ್ಯೆಗಳ ಬಗ್ಗೆ ಗಮನಹರಿಸಲಿದ್ದಾರೆ. ಡಿಸೆಂಬರ್ ವೇಳೆಗೆ ಚುನಾವಣೆ ನಡೆಯುವ ಸಾಧ್ಯತೆ ಇದೆ.

ಕೌನ್ಸಿಲ್ ಅವಧಿ ಅಂತ್ಯ
2015ರ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಎಲ್ಲಾ 198 ವಾರ್ಡ್ಗಳ ಕಾರ್ಪೊರೇಟರ್ಗಳ ಅವಧಿ ಸೆಪ್ಟೆಂಬರ್ 10ರಂದು ಅಂತ್ಯಗೊಂಡಿದೆ. ಕೌನ್ಸಿಲ್ ಅವಧಿ ಅಂತ್ಯಗೊಂಡ ಹಿನ್ನಲೆಯಲ್ಲಿ ಈಗ ವಾರ್ಡ್ಗಳಲ್ಲಿ ಕಾರ್ಪೊರೇಟರ್ಗಳಿಲ್ಲ. ಬಿಬಿಎಂಪಿಯ ಆಡಳಿತ ಅಧಿಕಾರಿಗಳ ಕೈಯಲ್ಲಿ ಇದೆ.

ಗೌರವ್ ಗುಪ್ತಾ ಆಡಳಿತಾಧಿಕಾರಿ
ಕರ್ನಾಟಕ ಸರ್ಕಾರ 1990ನೇ ಬ್ಯಾಚ್ ಐಎಎಸ್ ಅಧಿಕಾರಿ ಗೌರವ್ ಗುಪ್ತರನ್ನು ಬಿಬಿಎಂಪಿ ಆಡಳಿತಾಧಿಕಾರಿಯಾಗಿ ನೇಮಕ ಮಾಡಿದೆ. ಬಿಬಿಎಂಪಿ ಚುನಾವಣೆ ನಡೆದು ಹೊಸ ಕೌನ್ಸಿಲ್ ಅಸ್ತಿತ್ವಕ್ಕೆ ಬರುವ ತನಕ ಆಡಳಿತಾಧಿಕಾರಿಯೇ ಪಾಲಿಕೆಯ ಆಡಳಿತ ನೋಡಿಕೊಳ್ಳಲಿದ್ದಾರೆ.

ಸದ್ಯಕ್ಕೆ ಚುನಾವಣೆ ನಡೆಯಲ್ಲ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸದ್ಯ 198 ವಾರ್ಡ್ಗಳನ್ನು ಒಳಗೊಂಡಿದೆ. ಅದನ್ನು 225ಕ್ಕೆ ಹೆಚ್ಚಿಸಲು ಕರ್ನಾಟಕ ಸರ್ಕಾರ ಬಯಸಿದೆ. ಬಿಬಿಎಂಪಿ ಕಾಯ್ದೆಗೆ ತಿದ್ದುಪಡಿ ತರುವ ತನಕ ಪಾಲಿಕೆ ಚುನಾವಣೆ ನಡೆಯುದಿಲ್ಲ.
Recommended Video
|
ನೋಡಲ್ ಅಧಿಕಾರಿಗಳ ಪಟ್ಟಿ
ಸದ್ಯ 198 ವಾರ್ಡ್ಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಯಾವ ವಾರ್ಡ್ಗೆ ಯಾರು ಅಧಿಕಾರಿಗಳು ಎಂಬ ಮಾಹಿತಿ ಇಲ್ಲಿದೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಇನ್ಮುಂದೆ KPSC ಮೂಲಕ ಪ್ರತಿ ವರ್ಷ ಗ್ರೂಪ್ A, B ಅಧಿಕಾರಿಗಳ ನೇಮಕಾತಿ: ಕೃಷ್ಣ ಬೈರೇಗೌಡ ಸ್ಪಷ್ಟನೆ -
ಮಾರ್ಚ್ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Ugadi 2026: ಹಬ್ಬದ ಕಳೆ ಹೆಚ್ಚಿಸುವ ಸುಂದರ ರಂಗೋಲಿಗಳು; ಸರಳ, ಚುಕ್ಕಿ ಹಾಗೂ ಬಣ್ಣದ ರಂಗೋಲಿ ಐಡಿಯಾ ಇಲ್ಲಿದೆ












Click it and Unblock the Notifications