ಇಂದಿರಾ ಕ್ಯಾಂಟೀನ್ ಉಸ್ತುವಾರಿ ನೋಡಿಕೊಳ್ಳಲಿದ್ದಾರೆ ಮಾರ್ಷಲ್!
ಬೆಂಗಳೂರು, ಅಕ್ಟೋಬರ್ 05 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇಂದಿರಾ ಕ್ಯಾಂಟೀನ್ಗಳ ಉಸ್ತುವಾರಿ ನೋಡಿಕೊಳ್ಳಲು ನಿವೃತ್ತ ಮಾರ್ಷಲ್ಗಳನ್ನು ನೇಮಕ ಮಾಡಿಕೊಳ್ಳುತ್ತಿದೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಒಬ್ಬರು ನೇಮಕಗೊಳ್ಳಲಿದ್ದಾರೆ.
ಇಂದಿರಾ ಕ್ಯಾಂಟೀನ್ಗಳ ಆಹಾರದ ಗುಣಮಟ್ಟ ಪರೀಕ್ಷೆ, ನಿರ್ವಹಣೆ ಉಸ್ತುವಾರಿಯನ್ನು ಮಾರ್ಷಲ್ಗಳು ನೋಡಿಕೊಳ್ಳಲಿದ್ದಾರೆ. ಈಗಾಗಲೇ 12 ಮಾರ್ಷಲ್ಗಳನ್ನು ನೇಮಕ ಮಾಡಿಕೊಳ್ಳಲಾಗಿದೆ. ಕಿರಿಯ ಕಮೀಷನ್ ಅಧಿಕಾರಿಗಳು (ಜೆಸಿಒ) ಎಂಬ ಹುದ್ದೆಗಳನ್ನು ಇದಕ್ಕಾಗಿ ರಚನೆ ಮಾಡಲಾಗಿದೆ.

ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಒಂದರಂತೆ 12 ಅಡುಗೆ ಮನೆಗಳು ಈಗ ಸಿದ್ಧವಾಗಿವೆ. ಇವುಗಳಿಗೆ 12 ಮಾರ್ಷಲ್ ಗಳನ್ನು ನೇಮಿಸಿಕೊಳ್ಳಲಾಗಿದೆ. ಉಳಿದ ಅಡುಗೆ ಮನೆಗಳು ನಿರ್ಮಾಣವಾದ ಬಳಿಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನಗರದಲ್ಲಿ ಇನ್ನೂ 47 ಕ್ಯಾಂಟೀನ್ಗಳು ನಿರ್ಮಾಣವಾಗಬೇಕಿದೆ.
ಬಿಬಿಎಂಪಿಯ ಜಂಟಿ ಆಯುಕ್ತರ (ಹಣಕಾಸು) ಅಡಿ ಇವರೆಲ್ಲರೂ ಕೆಲಸ ಮಾಡಲಿದ್ದಾರೆ. ಕ್ಯಾಂಟೀನ್ ಆಹಾರದ ಗುಣಮಟ್ಟ ಪರೀಕ್ಷೆ ಮಾಡುವುದು, ಕ್ಯಾಂಟೀನ್ ನಿರ್ಹವಣೆ ನೋಡಿಕೊಳ್ಳುವುದು, ವಿತರಣೆಯಾದ ಊಟ, ತಿಂಡಿಗಳ ಲೆಕ್ಕವನ್ನು ಇವರು ನೋಡಿಕೊಳ್ಳಲಿದ್ದಾರೆ.
ಮೊದಲು ಪಾಲಿಕೆಯ ಸಹಾಯಕ ಇಂಜಿನಿಯರ್ಗಳಿಗೆ ಕ್ಯಾಂಟೀನ್ ಉಸ್ತುವಾರಿ ನೋಡಿಕೊಳ್ಳಲು ಸೂಚನೆ ನೀಡಲಾಗಿತ್ತು. ಆದರೆ, ಅವರಿಗೆ ಇತರ ಕೆಲಸದ ಜೊತೆ ಹೊರೆಯಾಗುತ್ತದೆ ಎಂಬ ಕಾರಣಕ್ಕೆ ಮಾರ್ಷಲ್ಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು












Click it and Unblock the Notifications