Bengaluru News: ಯಲಹಂಕ ವ್ಯಾಪ್ತಿಯಲ್ಲಿ ಮಾಂಸಾಹಾರ ನಿಷೇಧಿಸಿದ ಬಿಬಿಎಂಪಿ, ಯಾಕೆ?
ಬೆಂಗಳೂರು, ಜನವರಿ 19: ಬೆಂಗಳೂರು ಯಲಹಂಕ ವಾಯುನೆಲೆಯಲ್ಲಿ ಕೇಂದ್ರ ರಕ್ಷಣಾ ಇಲಾಖೆ, ಕೇಂದ್ರ ಸರ್ಕಾರದ ವತಿಯಿಂದ "ಏರ್ ಶೋ-2025" ನಡೆಯಲಿದೆ. ಜನವರಿ ಅಂತ್ಯಕ್ಕೆ ವೈಮಾನಿಕ ಪ್ರದರ್ಶನ ಆರಂಭವಾದರೆ, ಫೆಬ್ರವರಿ ಎರಡನೇ ವಾರದವರೆಗೂ ಜರುಗಲಿದೆ. ಲೋಹದ ಹಕ್ಕಿಗಳು ಮೈಜುಂ ಎನ್ನಿಸುವ ಪ್ರದರ್ಶನ ನೀಡಲಿವೆ. ಈ ಅದ್ಧೂರಿ ಕಾರ್ಯಕ್ರಮ ಪ್ರಯುಕ್ತ ಯಲಹಂಕ ಭಾಗದಲ್ಲಿ ಮಾಂಸ ಮಾರಾಟವನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಿಷೇಧಿಸಿ ಆದೇಶಿಸಿದೆ.
ಬೆಂಗಳೂರು ಅಂತರಾಷ್ಟ್ರೀಯ ಏರ್ ಶೋ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) 23ನೇ ಜನವರಿಯಿಂದ 17ನೇ ಫೆಬ್ರವರಿ 2025 ರವರೆಗೆ ಮಾಂಸ ಮಾರಾಟ ನಿಷೇಧಿಸಲಾಗಿದೆ ಎಂದು ಯಲಹಂಕ ವಲಯ ಜಂಟಿ ಆಯುಕ್ತರಾದ ಮೊಹ್ಮದ್ ನಯೀಮ್ ಮೊಮಿನ್ ಅವರು ತಿಳಿಸಿದರು.

ಯಲಹಂಕ ಏರ್ ಪೋರ್ಸ್ ಸ್ಟೇಷನಲ್ಲಿ ದಿನಾಂಕ 10.02.2025 ರಿಂದ 14.02.2025 ರವರೆಗೆ ಅಂತರಾಷ್ಟ್ರೀಯ ಏರ್ ಶೋ ನಡೆಯಲಿದೆ. ಈ ಸಂಬಂಧ ಯಲಹಂಕ ವಲಯದ ಏರ್ಪೋರ್ಸ್ ಸ್ಟೇಷನಿಂದ 13 ಕಿ.ಮೀ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮಾಂಸ ಮಾರಾಟದ ಉದ್ದಿಮೆಗಳನ್ನು ಮುಚ್ಚುವುದು ಹಾಗೂ ಹೋಟೆಲ್ ಮತ್ತು ಡಾಬಾಗಳಲ್ಲಿ ಮಾಂಸಾಹಾರ ತಯಾರಿಕೆ ಮತ್ತು ಮಾರಾಟ ನಿಷೇಧ ಮಾಡಿ ಆದೇಶಿಸಲಾಗಿದೆ.
ಈ ಕಾರಣದಿಂದ 23.01.2025 ರಿಂದ 17.02.2025 ರವರೆಗೆ ಎಲ್ಲಾ ಮಾಂಸಾಹಾರ ಮಾರಾಟ ಉದ್ದಿಮೆಗಳನ್ನು ಮುಚ್ಚಲು ಸೂಚಿಸಲಾಗಿದೆ. ಇದನ್ನು ಉಲ್ಲಂಘಿಸಿದಲ್ಲಿ ಬಿಬಿಎಂಪಿ ಕಾಯ್ದೆ 2020 ಮತ್ತು ಏರ್ ಕ್ರಾಫ್ಟ್ ರೂಲ್ಸ್ 1937 ರ ರೂಲ್ 91 ರಂತೆ ಮತ್ತು ಇತರ ಕಾನೂನು ರೀತಿಯಲ್ಲಿ ಕ್ರಮ ಜರುಗಿಸಲಾಗುವುದು ಎಂದು ಬಿಬಿಎಂಪಿ ಪ್ರಕಟಣೆಯಲ್ಲಿ ತಿಳಿಸಿದೆ.
ಮಹದೇವಪುರ ವಲಯ: ಪ್ಲಾಸ್ಟಿಕ್ ನಿಷೇಧ
ಮಹದೇವಪುರ ವಲಯಲ್ಲಿ ಮುಖ್ಯ ಆಯುಕ್ತರ ನಡೆ ವಲಯದ ಕಡೆ ಕಾರ್ಯಕ್ರಮ ನಡೆಯಿತು. ಈ ವಲಯ ವ್ಯಾಪ್ತಿಯಲ್ಲಿ ಒಮ್ಮೆ ಬಳಸುವ ಪ್ಲಾಸ್ಟಿಕ್ ಅನ್ನು ಸಂಪೂರ್ಣವಾಗಿ ನಿಷೇಧಿಸಲು ಸೂಕ್ತ ಕ್ರಮ ಕೈಗೊಳ್ಳಲು ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಕೆ.ಆರ್ ಪುರಂ ವ್ಯಾಪ್ತಿಯಲ್ಲಿ ಒಮ್ಮೆ ಬಳಸುವ ಪ್ಲಾಸ್ಟಿಕ್ ಬಳಕೆ ಹೆಚ್ಚಿದ್ದು, ಅದರ ನಿಯಂತ್ರಣಕ್ಕೆ ಮನವಿಗೆ ಸ್ಪಂದಿಸಿದ ಅವರು, ಒಮ್ಮೆ ಬಳಸುವ ಪ್ಲಾಸ್ಟಿಕ್ ಅನ್ನು ಸಂಪೂರ್ಣವಾಗಿ ನಿಷೆಧಿಸಬೇಕಿದೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು, ಮಾರ್ಷಲ್ಗಳು ಸೇರಿ ಒಮ್ಮೆ ಬಳಸುವ ಪ್ಲಾಸ್ಟಿಕ್ ಅನ್ನು ಹೆಚ್ಚು ಬಳಕೆ ಮಾಡುವ ಪ್ರದೇಶಗಳಿಗೆ ಅನಿರೀಕ್ಷಿತ ದಾಳಿ ನಡೆಸಿ ವಶಪಡಿಸಿಕೊಳ್ಳುವುದರ ಜೊತೆಗೆ ದಂಡ ವಿಧಿಸಬೇಕು. ಜೊತೆಗೆ ಒಮ್ಮೆ ಬಳಸುವ ಪ್ಲಾಸ್ಟಿಕ್ ಬಳಸದಂತೆ ಮಾರಾಟಗಾರರಿಗೆ ಎಚ್ಚರಿಕೆ ನೀಡಬೇಕೆಂದರು.
ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಿ
ಕೆ.ಆರ್ ಪುರಂ ವ್ಯಾಪ್ತಿಯಲ್ಲಿ ರಾಜಕಾಲುವೆ ಭಾಗದಲ್ಲಿ ಕಟ್ಟಡ ನಿರ್ಮಾಣ ಮಾಡುತ್ತಿದ್ದು, ಅದನ್ನು ತಡೆಯಲು ಕೇಳಿದ್ದಕ್ಕೆ ಪ್ರತಿಕ್ರಿಯಿಸಿ, ಸಂಬಂಧಪಟ್ಟ ರಾಜಕಾಲುವೆ ವಿಭಾಗದ ಅಧಿಕಾರಿಗಳು ಸ್ಥಳ ಪರಿಶೀಲಿಸಿ ರಾಜಕಾಲುವೆ ಒತ್ತುವರಿ ಮಾಡಿದ್ದರೆ ಅಥವಾ ಬಫರ್ ವಲಯದಲ್ಲಿ ನಿರ್ಮಾಣ ಮಾಡಿದ್ದರೆ ಕೂಡಲೆ ಕಾಮಗಾರಿಯನ್ನು ನಿಲ್ಲಿಸಲು ನೋಟೀಸ್ ಜಾರಿ ಮಾಡಬೇಕು. ಜೊತೆಗೆ ಬೆಸ್ಕಾಂ ನಿಂದ ವಿದ್ಯತ್ ಸಂಪರ್ಕ ಕಡಿತಗೊಳಿಸಿ ಭೂಮಾಪಕರಿಂದ ಸಮೀಕ್ಷೆ ನಡೆಸಿ ಒತ್ತುವರಿ ಮಾಡಿದ್ದರೆ ಕಟ್ಟಡ ತೆರವುಗೊಳಿಸಲು ಅಧಿಕಾರಿಗಳಿಗೆ ನಿರ್ದೇಶಿಸಿದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications