ದಕ್ಕದ ಅಧಿಕಾರ: ಹೋರಾಟದ ಹಾದಿ ಹಿಡಿದ ಬಿಜೆಪಿ
ಬೆಂಗಳೂರು, ಸೆಪ್ಟೆಂಬರ್.04: ಬಿಬಿಎಂಪಿ ಮೇಯರ್ ಗಾದಿ ತಮಗೆ ಒಲಿಯುವುದಿಲ್ಲ ಎಂದು ಬಹುತೇಕ ಖಚಿತಮಾಡಿಕೊಂಡಿರುವ ಬಿಜೆಪಿ ಇದೀಗ ಹೋರಾಟದ ಹಾದಿ ಹಿಡಿದಿದೆ. ಸತತ ಐದು ದಿನಗಳ ಕಾಲ ಪ್ರತಿಭಟನೆ ನಡೆಸಲು ಮುಂದಾಗಿದೆ.
ಈ ಬಗ್ಗೆ ಬಿಜೆಪಿ ಆರ್ ಅಶೋಕ್ ನೇತೃತ್ವದಲ್ಲಿ ಸಮಾಲೋಚನಾ ಸಭೆಯನ್ನು ನಡೆಸಿದ್ದು, ಸೆಪ್ಟೆಂಬರ್ 4 ರಂದು ಬೆಂಗಳೂರು ಪುರಭವನದ ಎದುರು ಬೃಹತ್ ಪ್ರತಿಭಟನೆ ನಡೆಸಲಿದೆ.[ಬಿಬಿಎಂಪಿ ಮೇಯರ್ ಆಯ್ಕೆಗೆ ಸೆ.11ಕ್ಕೆ ಚುನಾವಣೆ]

ಕಾಂಗ್ರೆಸ್ ಹಿಂಬಾಗಿಲ ಮೂಲಕ ಅಧಿಕಾರ ಹಿಡಿಯುವ ಯತ್ನ ಮಾಡುತ್ತಿದೆ. ಜನಾದೇಶದ ವಿರುದ್ಧ ಹೋಗುತ್ತಿದೆ. ಪುರಭವನ, ರಾಜಭವನದ ಎದುರು ಪ್ರತಿಭಟನೆ ನಡೆಸಿ ಕಾಂಗ್ರೆಸ್ ನ ಪ್ರಜಾಪ್ರಭುತ್ವ ವಿರೋಧಿ ನೀತಿಯನ್ನು ಖಂಡಿಸಲಾಗುವುದು. ಅಲ್ಲದೇ ಈ ಬಗ್ಗೆ ರಾಜ್ಯಪಾಲರಿಗೂ ದೂರು ಸಲ್ಲಿಕೆ ಮಾಡಲಾಗುವುದು ಎಂದು ಆರ್ ಅಶೀಕ್ ಹೇಳಿದ್ದಾರೆ.
ಆದರೆ ಕಾಂಗ್ರೆಸ್ ನೊಂದಿಗೆ ಮೈತ್ರಿಗೆ ಮುಂದಾಗಿರುವ ಜೆಡಿಎಸ್ ಬಗ್ಗೆ ಚಕಾರ ಎತ್ತಿಲ್ಲ. ಬಿಬಿಎಂಪಿಯಲ್ಲಿ 100 ಸ್ಥಾನ ಗಳಿಸಿದ್ದರೂ ಅಧಿಕಾರ ಕೈ ತಪ್ಪುತ್ತಿರುವುದು ಬಿಜೆಪಿಗೆ ಅರಗಿಸಿಕೊಳ್ಳಲಾಗುತ್ತಿಲ್ಲ. ಗುರುವಾರ ರಾತ್ರಿ ನಡೆದ ಬಿಜೆಪಿ ಸಮಾಲೋಚನಾ ಸಭೆಗೆ ಬೆಂಗಳೂರಿಗೆ ಸಂಬಂಧಿಸಿದ ಕೆಲ ಶಾಸಕರು ಗೈರಾಗಿದ್ದು ಆರ್. ಅಶೋಕ್ ಪರ ತಮ್ಮ ಅಸಮಾಧಾನ ಹೊರಹಾಕಿದರು.[ಬಿಬಿಎಂಪಿಯ ಮೇಯರ್ ಹುದ್ದೆ ಮ್ಯಾಜಿಕ್ ನಂಬರ್ ಹಿಂದೆ-ಮುಂದೆ]
ಬಿಬಿಎಂಪಿ ಬೆಳವಣಿಗೆ ಕುರಿತು ರಾಜ್ಯಪಾಲರಿಗೆ ಮನವಿ ಸಲ್ಲಿಸಿ ರಾಜ್ಯ ಸರ್ಕಾರಕ್ಕೆ ಛೀಮಾರಿ ಹಾಕಬೇಕು ಎಂದು ಕೇಳಿಕೊಳ್ಳಲಾಗುವುದು. ಇಡೀ ಬೆಂಗಳೂರು ನಾಗರಿಕರಿಗೆ ಕಾಂಗ್ರೆಸ್ ನ ಕುತಂತ್ರ ರಾಜಕಾರಣದ ಬಗ್ಗೆ ಹೇಳಲಾಗುವುದು ಎಂದು ಅಶೋಕ್ ಹೇಳಿದ್ದಾರೆ. ಅಲ್ಲದೇ ಬಿಜೆಪಿ ಅಭ್ಯರ್ಥಿಯೇ ಮೇಯರ್ ಆಗಲಿದ್ದಾರೆ ಎಂದು ಅಶೋಕ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
-
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications