BBMP Budget 2023: ಬಡ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆಗೆ ಅನುದಾನ ಹಂಚಿಕೆ
ಬಿಬಿಎಂಪಿ ಆಯವ್ಯಯ- 2023 ಬಜೆಟ್ ನಲ್ಲಿ ಮಂಡನೆ ಇದರಲ್ಲಿ ಸಾರ್ವಜನಿಕ ಶಿಕ್ಷಣಕ್ಕೆಂದೆ ನೂರು ಕೊಟಿಗೂ ಅಧಿಕ ಅನುದಾನ ಘೋಷಣೆ ಆಗಿದೆ.
ಬೆಂಗಳೂರು, ಮಾರ್ಚ್ 02: ಬಹುನಿರೀಕ್ಷೆಯ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP)ಯ ಆಯವ್ಯಯ- 2023 ಬಜೆಟ್ ಮಂಡನೆ ಯಾಗಿದೆ. ಇದರಲ್ಲಿ ಸಾರ್ವಜನಿಕ ಶಿಕ್ಷಣಕ್ಕೆಂದೆ ನೂರು ಕೊಟಿಗೂ ಅಧಿಕ ಅನುದಾನ ಘೋಷಣೆ ಆಗಿದೆ.
ಬೆಂಗಳೂರಿನಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಇರುವ ಒಟ್ಟು 47 ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ, ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿ ಸೇರಿದಂತೆ ವಿವಿಧ ಕಾರಣಕ್ಕಾಗಿ 152.61 ಕೋಟಿ ರೂಪಾಯಿ ಹಂಚಿಕೆ ಮಾಡಲಾಗಿದೆ. ಈ ಪೈಕಿ ಅದರಲ್ಲಿ 25 ಕೋಟಿ ರೂಪಾಯಿ ಅನುದಾನವನ್ನು ಮಕ್ಕಳಿಗೆ ಉಚಿತ ಲ್ಯಾಪ್ಟಾಪ್ ನೀಡಲು ಒದಗಿಸುವುದಾಗಿ ಬಿಬಿಎಂಪಿ ಘೋಷಿಸಿದೆ.

ಬಿಬಿಎಂಪಿ ಅಧೀನದಲ್ಲಿರುವ ಶಾಲೆಗಳಲ್ಲಿ ಕಲಿಯುತ್ತಿರುವ ಮಕ್ಕಳ ಪೈಕಿ ಒಟ್ಟು 10,000 ಆರ್ಥಿಕವಾಗಿ ಹಿಂದುಳಿದಿರುವ ಬಡ ಮಕ್ಕಳಿಗೆ 5 ಕೋಟಿ ಹಣದಲ್ಲಿ ಲ್ಯಾಪ್ ಟಾಪ್ ವಿತರಿಸಲಾಗುವುದು. ಈ ಸಂಬಂಧ ಬಿಬಿಎಂಪಿ ಯೋಜನೆ ರೂಪಿಸಿಕೊಂಡಿದೆ. ಇದರಿಂದ ಬಡ ಮಕ್ಕಳು ಲ್ಯಾಪ್ಟಾಪ್ ಪಡೆದುಕೊಂಡು ಇಂದಿನ ಡಿಜಿಟಲ್ ಶಿಕ್ಷಣದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬಹುದಾಗಿದೆ.
ಈ ಕುರಿತು ಮುಂದಿನ ದಿನಗಳಲ್ಲಿ ಬಿಬಿಎಂಪಿ ಮತ್ತೆ ಆದೇಶ ಹೊರಡಿಸಲಿದೆ. ಅದರಲ್ಲಿ ಲ್ಯಾಪ್ಟಾಪ್ ಖರೀದಿ, ಟೆಂಡರ್ ಆಹ್ವಾನ, ಲ್ಯಾಪ್ಪಾಟ್ ಒಮ್ಮೆಲೆ ಉದ್ದೇಶಿತ ಎಲ್ಲ ಮಕ್ಕಳಿಗೆ ವಿತರಿಸಬೇಕೋ ಅಥವಾ ಹಂತ ಹಂತವಾಗಿ ವಿತರಣೆ ಮಾಡಬೇಕೋ ಎಂಬ ಇತ್ಯಾದಿ ಮಾಹಿತಿಯನ್ನು ಪಾಲಿಕೆ ತಿಳಿಸಿ ಹಣ ಬಿಡುಗಡೆ ಮಾಡಲಿದೆ.

ಇನ್ನೂ ಸಾರ್ವಜನಿಕ ಶಿಕ್ಷಣ ಇಲಾಖೆಗೆಂದು ಒದಗಿಸಲಾಗುತ್ತಿರುವ ಒಟ್ಟು (152) ಕೋಟಿ ವೆಚ್ಚದಲ್ಲಿ ಶಾಲೆಗಳ ನವೀಕರಣ,ಸ್ಮಾರ್ಟ್ ತರಗತಿಗಳ ಸ್ಥಾಪನೆ, ಪಠ್ಯ ಪುಸ್ತಕ ಖರೀದಿ, ಸಮವಸ್ತ್ರ ಖರೀದಿ ಮತ್ತು ವಿತರಣೆ, ಶೂ ಹಾಗೂ ಸಾಕ್ಸ್, ಎಸ್ಎಸ್ಎಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಅಬ್ದುಲ್ ಕಲಾಂ ಹೆಸರಿನಲ್ಲಿ ಕನಸಿನ ಶಾಲೆ.
ಹೊಸ ಯೋಜನೆ - ಓದುವ ಬೆಳಕು ಯೋಜನೆಗಳಿಗೆ ಬಳಕೆಯಾಗಲಿದೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications