BBMP: ಅನಧಿಕೃತ ಜಾಹೀರಾತುಗಳ ಕಂಡರೆ ನಿಯಂತ್ರಣ ಕೊಠಡಿಗೆ ಕರೆ ಮಾಡಿ
ಬೆಂಗಳೂರು, ಮೇ 30: ಬೆಂಗಳೂರು ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ಸ್, ಬಂಟಿಂಗ್ಸ್, ಭಿತ್ತಿಪತ್ರಗಳು ಇನ್ನಿತರ ಜಾಹೀರಾತುಗಳ ತೆರವು ಮತ್ತು ಕಡಿವಾಣಕ್ಕಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಾನೂನು ರೀತಿ ಕ್ರಮಕ್ಕೆ ಮುಂದಾಗಿದೆ. ಈ ಸಂಬಂಧ ಅಭಿಯಾನ ಆರಂಭಿಸಿದೆ. ದೂರು ನೀಡುವ ಸಾರ್ವಜನಿಕರಿಗಾಗಿ ವಲಯವಾರು ನಿಯಂತ್ರಣಾ ಕೊಠಡಿ ಸ್ಥಾಪಿಸಿದೆ.
ಬಿಬಿಎಂಪಿಯು ತನ್ನ ವ್ಯಾಪ್ತಿಯಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್ಸ್, ಬಂಟಿಂಗ್ಸ್ ಇತರೆ ಜಾಹೀರಾತುಗಳ ನಿಯಂತ್ರಿಸಲು "ಜಾಹೀರಾತು ಮುಕ್ತ ಅಭಿಯಾನ" ಆರಂಭಿಸಿದೆ.

ಹಾಲಿ ಜಾರಿಯಲ್ಲಿರುವ 'ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಹೊರಾಂಗಣ ಜಾಹೀರಾತು ಫಲಕ ಮತ್ತು ಸಾರ್ವಜನಿಕ ಸಂದೇಶದ ಉಪ ವಿಧಿಗಳು-2018" ರಲ್ಲಿ ಅಂಗಡಿ ಮುಂಗಟ್ಟು ಜಾಹೀರಾತುಗಳು, ವಾಹನ ಸ್ವ-ಜಾಹೀರಾತು ಇನ್ನಿತರೆ ಸಣ್ಣಪುಟ್ಟ ಜಾಹೀರಾತುಗಳನ್ನು ಸೀಮಿತ ಅವಧಿಗೆ ಮತ್ತು ಸೀಮಿತ ಅಳತೆಗೆ(ಪಿಪಿಪಿ ಯೋಜನೆಗಳು ಸೇರಿದಂತೆ) ಅನುಮತಿಸಲು ಮಾತ್ರ ಅವಕಾಶ ಇದೆ ಎಂದು ಬಿಬಿಎಂಪಿ ಹೇಳಿದೆ.
ಮೇಲಿನವುಗಳನ್ನು ಬಿಟ್ಟು ಇತರೆ ಯಾವುದೇ ವಸತಿ ಪ್ರದೇಶ, ಖಾಸಗಿ ಸ್ವತ್ತುಗಳಲ್ಲಿ ಜಾಹೀರಾತು ಫಲಕಗಳನ್ನು ಅಳವಡಿಸಿ ವಾಣಿಜ್ಯ ಜಾಹೀರಾತು, ಎಲ್.ಇ.ಡಿ ಜಾಹೀರಾತು ಪ್ರದರ್ಶನ ಹಾಗೂ ಸಾರ್ವಜನಿಕ ಮತ್ತು ವೈಯಕ್ತಿಕ ಜಾಹೀರಾತುಗಳು, ಶುಭಾಶಯಗಳು, ಸಭೆ ಸಮಾರಂಭಗಳು ಕುರಿತ ಜಾಹೀರಾತು / ಪ್ರಕಟಣೆಗಳ ಪ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್, ಭಿತ್ತಿಪತ್ರ, ಬಾವುಟಗಳು ಇತ್ಯಾದಿ ಅಳವಡಿಸುವುದನ್ನು ನಿಷೇದಿಸಲಾಗಿದೆ.
ಪರಿಸರಕ್ಕೆ ತೊಂದರೆ, ಜನರಿಗೆ ಕಿರಿಕಿರಿ
ಹೀಗಿದ್ದರೂ ಸಹ ಮೇಲಿಂದ ಮೇಲೆ ನಿಯಮ ಉಲ್ಲಂಘನೆ ಆಗುತ್ತಿದೆ. ಸಾರ್ವಜನಿಕ ಸುಗಮ ಸಂಚಾರಕ್ಕೆ ಅಡ್ಡಿ ಆಗುತ್ತಿರುವುದಲ್ಲದೇ, ನಗರದ ಸೌಂದರ್ಯ ಹಾಳಾಗುತ್ತಿದೆ ಮತ್ತು ಪರಿಸರಕ್ಕೆ ಇವೆಲ್ಲವು ಮಾರಕ ಆಗಿದೆ ಎಂದು ಪ್ರತಿಪಾದಿಸಿದೆ.
ರಾಜ್ಯ ಸರ್ಕಾರವು ಪರಿಸರ (ಸಂರಕ್ಷಣೆ), ಕಾಯಿದೆ 1986ರ ಸೆಕ್ಷನ್ 5ರ ಅಡಿಯಲ್ಲಿ ಅಧಿಕಾರ ಚಲಾಯಿಸಿ ಸರ್ಕಾರದ ಅಧಿಸೂಚನೆ ಸಂಖ್ಯೆ, ಅಪಜೀ 17 ಇಪಿಸಿ 2012 ಬೆಂಗಳೂರು ದಿನಾಂಕ: 11-03-2016 ರಂತೆ ಪ್ಲಾಸ್ಟಿಕ್ ಬಳಸುವುದನ್ನು ನಿಷೇಧಿಸಲಾಗಿದೆ.
ನಾಗರಿಕರು ಕೈ ಜೋಡಿಸುವಂತೆ ಮನವಿ
ನಗರದ ವಸತಿ ಪ್ರದೇಶಗಳಲ್ಲಿ, ಖಾಸಗಿ ಆಸ್ತಿ, ಅನಧಿಕೃತ ವಾಣಿಜ್ಯ ಜಾಹೀರಾತುಗಳು, ಪ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್, ಭಿತ್ತಿಪತ್ರಗಳು, ಇನ್ನಿತರೆ ಮುದ್ರಣ ಪ್ರಕಟಣೆ/ಜಾಹೀರಾತುಗಳು ಕಂಡು ಬಂದಲ್ಲಿ ಬಿಬಿಎಂಪಿ ಕೇಂದ್ರ ಕಚೇರಿ ಹಾಗೂ ಆಯಾ ವಲಯಗಳ ಕಚೇರಿಗಳಿಗೆ ಸಾರ್ವಜನಿಕರು ಮಾಹಿತಿ ನೀಡಬೇಕು. ಪರಿಸರಕ್ಕೆ ಮಾರಕವಾದ ಈ ಜಾಹೀರಾತು ನಿಯಂತ್ರಣಕ್ಕೆ ನಾಗಿಕರು ಕೈ ಜೋಡಿಸಬೇಕು ಎಂದು ಮನವಿ ಮಾಡಿದರು.

ಮಾಹಿತಿ ದೊರೆತಲ್ಲಿ ಯಾವುದೇ ಅನಧಿಕೃತ ಜಾಹೀರಾತು ಪ್ರದರ್ಶನ ಮತ್ತು ಜಾಹೀರಾತು ಫಲಕಗಳಿದ್ದು, ಬಿಬಿಎಂಪಿ ಸಿಬ್ಬಂದಿ ಅಧಿಕಾರಿಗಳು ಅವರಿಗೆ ಸಂಬಂಧಪಟ್ಟವರಿಗೆ ದಂಡ ವಿಧಿಸಿ ಜಾಹೀರಾತು ತಕ್ಷಣವೇ ತೆರವುಗೊಳಿಸಲಿದೆ. ಇದಕ್ಕೆ ಸಂಬಂಧಿಸಿದಂತೆ ಅಪರಾಧ ಎಸಗಿರುವವರಿಗೆ ಕರ್ನಾಟಕ ಮುಕ್ತ ಸ್ಥಳಗಳ (ವಿರೂಪಗೊಳಿಸುವಿಕೆ ತಡೆ) ಕಾಯ್ದೆ 1981ರ ಅಡಿಯಲ್ಲಿ ಸದರಿಯವರ ವಿರುದ್ಧ ಎಫ್.ಐ.ಆರ್ ದಾಖಲು ಮಾಡಿ, ಕಾನೂನು ರೀತಿಯ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ಪ್ರಕಟಣೆಯಲ್ಲಿ ತಿಳಿಸಿದೆ.
ಅನಧಿಕೃತ ವಿವಿಧ ಜಾಹೀರಾತುಗಳನ್ನು ನಿಯಂತ್ರಿಸುವ ಮುಕ್ತ ಅಭಿಯಾನಕ್ಕೆ ನಾಗರಿಕರು ಕೈ ಜೋಡಿಸಲು ಸಹಾಯವಾಗುವಂತೆ ವಲಯವಾರು ನಿಯಂತ್ರಣಾ ಕೊಠಡಿ ಸ್ಥಾಪಿಸಲಾಗಿದೆ. ನಾಗರಿಕರು ಸಂಪರ್ಕಿಸಬಹುದು ಎಂದು ಕಂದಾಯ ವಿಭಾಗದ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್ ಹೇಳಿದರು.
ಸಂಪರ್ಕಿಸಬೇಕಾದ ದೂರವಾಣಿ ಮಾಹಿತಿ
* ಜಾಹಿರಾತು ಉಪ ಆಯುಕ್ತರು: 9480683939
*ಬಿಬಿಎಂಪಿ ಕೇಂದ್ರ ಕಚೇರಿ: 080-22221188
*ನಿಯಂತ್ರಣ ಕೊಠಡಿ ಐಪಿಪಿ: 080-22660000
* ಪೂರ್ವ ವಲಯ ನಿಯಂತ್ರಣ ಕೊಠಡಿ: 080-22975803/ 22975502
* ಪಶ್ಚಿಮ ವಲಯ: 080-23561692/ 23463366
* ದಕ್ಷಿಣ ವಲಯ: 080-26566362/ 22975703
* ರಾಜರಾಜೇಶ್ವರಿ ನಗರ ವಲಯ : 080-28601851/ 28600957
* ಬೊಮ್ಮನಹಳ್ಳಿ ವಲಯ: 080-25732447/ 25735642
* ಮಹದೇವಪುರ ವಲಯ: 080-28512300/ 28512301
* ಯಲಹಂಕ ವಲಯ: 080-23636671/ 22975936
* ದಾಸರಹಳ್ಳಿ ವಲಯ: 080-28394909 / 28393688
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications