ಸಿಎ ಸೈಟು ಕೇಸ್: ಗಿರಿನಗರದ ರಾಮಚಂದ್ರಾಪುರ ಮಠಕ್ಕೆ ಮುಖಭಂಗ
ಬೆಂಗಳೂರು, ಮೇ 30: ಗಿರಿನಗರದಲ್ಲಿರುವ ರಾಮಚಂದ್ರಾಪುರ ಮಠಕ್ಕೆ ಲಭ್ಯವಾಗಿದ್ದ ನಾಗರಿಕ ಸೌಲಭ್ಯದ (ಸಿ.ಎ) ನಿವೇಶನಕ್ಕೆ ಸಂಬಂಧಿಸಿದ ವ್ಯಾಜ್ಯದಲ್ಲಿ ರಾಮಚಂದ್ರಪುರಮಠಕ್ಕೆ ಹಿನ್ನಡೆ ಉಂಟಾಗಿದೆ
ಸಿಎ ಸೈಟಿನಲ್ಲಿ ಕಟ್ಟಡ ನಿರ್ಮಾಣ ಯೋಜನೆ ಮತ್ತು ಖಾತೆ ನೋಂದಣಿಯನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ರದ್ದುಗೊಳಿಸಿದೆ. ಬಿಬಿಎಂಪಿ ನಗರ ಯೋಜನೆ ಹೆಚ್ಚುವರಿ ನಿರ್ದೇಶಕ ವಿಜಯ್ ಗೋಪಾಲ್ ಪ್ರತಿಕ್ರಿಯಿಸಿ, ಈ ಬಗ್ಗೆ ಸಂಬಂಧಿಸಿದ ಕೋರ್ಟ್ ಆದೇಶ ಪ್ರತಿ ಬಂದ ತಕ್ಷಣ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಏನಿದು ಪ್ರಕರಣ?: 1979ರಲ್ಲಿ 21,249 ಚದರ ಅಡಿ ನಿವೇಶನವನ್ನು ವಿಶ್ವಭಾರತಿ ಗೃಹ ನಿರ್ಮಾಣ ಸಂಘದಿಂದ ಮಠಕ್ಕೆ ಜಾಗ ಹಸ್ತಾಂತರವಾಗಿತ್ತು. 2010ರಲ್ಲಿ ಸಿ.ಎ ನಿವೇಶನ ಸಂಖ್ಯೆ 2ರ ಖಾತೆ ನೋಂದಣಿಗೆ ನಿರಾಕ್ಷೇಪಣಾ ಪತ್ರ ನೀಡಲು ಬಿಡಿಎಗೆ ಅರ್ಜಿ ಸಲ್ಲಿಸಿತ್ತು. ಅಂಥ ಯಾವುದೇ ಸೈಟನ್ನು ತಾನು ಮಂಜೂರು ಮಾಡಿಲ್ಲ ಎಂದು ಹೇಳಿ ಬಿಡಿಎ ಅರ್ಜಿಯನ್ನು ತಿರಸ್ಕರಿಸಿತು.
1981ರಲ್ಲಿ ಸಿ.ಎ ನಿವೇಶನ ಎಂದು ಖರೀದಿಸಲಾಗಿದ್ದ ಪ್ರದೇಶದಲ್ಲಿ ಬಿಡಿಎ ಒಪ್ಪಿಗೆ ನೀಡಿದ ಯೋಜನೆಗೆ ಹೊರತಾಗಿ ಕಟ್ಟಡ ನಿರ್ಮಾಣಕ್ಕೆ ಮುಂದಾಗಿರುವುದು ಕಂಡು ಬಂದಿದೆ.
1985ರ ಏಪ್ರಿಲ್ 6ರಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಸಿಕ್ಕಿದೆ ಎನ್ನಲಾದ ನಿರಾಕ್ಷೇಪಣಾ ಪತ್ರ (NOC) ದ ಜೆರಾಕ್ಸ್ ಪ್ರತಿ ಮಾತ್ರ ಲಭ್ಯವಿದ್ದು, ಮೂಲ ಪ್ರತಿ ಬಿಡಿಎ ಬಳಿಯೂ ಇಲ್ಲ ಎಂಬುದು ದೃಢಪಟ್ಟಿತ್ತು. ಈ ಬಗ್ಗೆ ಹೈಕೋರ್ಟಿನಲ್ಲಿ ವಿಚಾರಣೆ ನಡೆದು, ಮೂಲ ಪ್ರತಿ ಒದಗಿಸಲು ಸೂಚಿಸಲಾಗಿತ್ತು.
ಹೀಗಾಗಿ, ಅಕ್ರಮವಾಗಿ ಒತ್ತುವರಿಯಾಗಿರುವ ಜಾಗವನ್ನು ಹಿಂಪಡೆಯುವಂತೆ ಹೈಕೋರ್ಟ್ ನಿಂದ ಬಿಬಿಎಂಪಿಗೆ ಆದೇಶ ಸಿಕ್ಕಿದೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಹೇಳಿದ್ದಾರೆ.
ಈ ಆಸ್ತಿಯನ್ನು ಧಾರ್ಮಿಕ ಮತ್ತು ಸಾರ್ವಜನಿಕ ಉದ್ದೇಶಕ್ಕಾಗಿ ಬಳಸಲಾಗುತ್ತಿದೆ ಎಂದು ಮಠದವರು ಹೇಳಿದರೂ, ಅದಕ್ಕೆ ಪುರಾವೆ ನೀಡಲು ವಿಫಲವಾಗಿತ್ತು.
-
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ











Click it and Unblock the Notifications