ಬಿಬಿಎಂಪಿ: ಬೊಮ್ಮನಹಳ್ಳಿಯ ಅಪಾರ್ಟ್ಮೆಂಟ್ ಒತ್ತುವರಿ ತೆರವು
ಬೆಂಗಳೂರು, ಸೆಪ್ಟಂಬರ್ 28: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯಿಂದ ರಾಜಕಾಲುವೆ ಒತ್ತುವರಿ ತೆರವು ಕಾರ್ಯ ಮುಂದುವರಿದಿದೆ. ಬುಧವಾರ ವಿವಿಧೆಡೆ ಒತ್ತುವರಿ ತೆರವು ಮಾಡುವ ಜತೆಗೆ ಸರ್ವೇ ಕಾರ್ಯವನ್ನು ನಡೆಸಿದೆ.
ಬೆಂಗಳೂರಿನ ಬೊಮ್ಮನಹಳ್ಳಿ ವಲಯದ ಕೋಡಿಚಿಕ್ಕನಹಳ್ಳಿಯಲ್ಲಿರುವ ಜನಪ್ರಿಯ ಲೇಕ್ ವ್ಯೂ ಅಪಾರ್ಟ್ಮೆಂಟ್ ಬಳಿ 11 ಅಡಿ ಅಗಲ ಹಾಗೂ 100 ಅಡಿ ಉದ್ದದ ರಾಜಕಾಲುವೆಯ ಒತ್ತುವರಿ ತೆರವು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಲ್ಲಿ ಬೃಹತ್ ನೀರುಗಾಲುವೆಗಳನ್ನು ಒತ್ತುವರಿ ಮಾಡಿಕೊಂಡಿರುವುದು ಸರ್ವೇಯಿಂದ ದೃಢಪಟ್ಟಿತ್ತು. ಜನಪ್ರಿಯ ಲೇಕ್ ವ್ಯೂ ಅಪಾರ್ಟ್ಮೆಂಟ್ (ಫೇಸ್-2, ಗೇಟ್-1) ಬಳಿ 2 ಕಾಂಪೌಂಡ್ ಗೋಡೆ, ಒಂದು ಖಾಲಿ ಜಾಗ ಹಾಗೂ ರಾಜಕಾಲುವೆ ಮೇಲೆ ನಿರ್ಮಿಸಿದ್ದ ರಸ್ತೆಯನ್ನು ತೆರವುಗೊಳಿಸಲಾಗುತ್ತಿದೆ. ಕಾರ್ಯಾಚರಣೆ ಪ್ರಗತಿಯಲ್ಲಿದ್ದು, ಸದರಿ ಸ್ಥಳದಲ್ಲಿಯೇ ನಾಳೆ ಕೂಡ ಸಂಪೂರ್ಣ ತೆರವು ಮಾಡಿ ಖಾಲಿ ಜಾಗ ವಶಪಡಿಸಿಕೊಳ್ಳಲಾಗುವುದು ಎಂದು ಬಿಬಿಎಂಪಿ ತಿಳಿಸಿದೆ.

ಮಹದೇವಪುರ ವಲಯದಲ್ಲಿ ಸರ್ವೇ ಕಾರ್ಯ ಪ್ರಗತಿ
ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಹಲವೆಡೆ ಸರ್ವೇ ಕಾರ್ಯ ನಡೆಸಿದ ಬಿಬಿಎಂಪಿ ಅಧಿಕಾರಿಗಳಿಗೆ ರಾಜಕಾಲುವೆ ಒತ್ತುವರಿ ಆಗಿರುವುದು ಕಂಡು ಬಂದಿದೆ. ಹೂಡಿ, ದೊಡ್ಡಾನೆಕುಂದಿ, ವರ್ತೂರು, ಕುಂದನಹಳ್ಳಿ, ಮುನ್ನೇನಕೊಳಲು, ಕಸವಹಳ್ಳಿಯ ಪ್ರದೇಶಗಳಲ್ಲಿ ಸುಮಾರು 5,000 ಮೀಟರ್ ರಾಜಕಾಲುವೆ ಒತ್ತುವರಿಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ವಿವಿಧೆಡೆ ಸರ್ವೇ ಮುಂದುವರಿದ ಕಾರ್ಯ
"ಭೂಮಾಪಕ ಅಧಿಕಾರಿಗಳು ಸೇರಿದಂತೆ ಬಿಬಿಎಂಪಿ ಸಿಬ್ಬಂದಿ ಒತ್ತುವರಿ ಮಾರ್ಕಿಂಗ್ ಮಾಡುತ್ತಿದ್ದಾರೆ. ಅದು ಪೂರ್ಣಗೊಂಡ ಬೆನ್ನಲ್ಲೆ ಜೆಸಿಬಿ, ಟಿಪ್ಪರ್ ಸಹಾಯದಿಂದ ಕೂಡಲೇ ಒತ್ತುವರಿ ತೆರವು ಮಾಡಲಾಗುವುದು. ಈ ಪೈಕಿ ಸರ್ವೇ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಿ ಮಾರ್ಕಿಂಗ್ ಮಾಡಿ ಒತ್ತುವರಿ ತೆರವಿಗೆ ಸೂಕ್ತ ಕ್ರಮ ಕೈಗೊಳ್ಳಿ," ಎಂದು ಮುಖ್ಯ ಅಭಿಯಂತರ ಬಸವರಾಜ್ ಕಬಾಡೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬೆಂಗಳೂರಿಗೆ ಪ್ರವಾಹ ಉಂಟಾದ ಬೆನ್ನಲ್ಲೆ ಬಿಬಿಎಂಪಿ ಕಾಯೋನ್ಮುಖವಾಗಿದ್ದು, ಈಗಾಗಲೇ ಮಾರತ್ತಹಳ್ಳಿ, ಮಹದೇವಪುರ, ಬೊಮ್ಮನಹಳ್ಳಿ, ದಾಸರಹಳ್ಳಿ ಸೇರಿದಂತೆ ವಿವಿಧಡೆ ಒತ್ತುವರಿ ತೆರವು ನಡೆಸುತ್ತಿದ್ದಾರೆ. ರಾಜಕಾಲುವೆ ಮೇಲಿನ ಸ್ಲಾಬ್, ಶೆಡ್, ಕಾಂಪೌಂಡ್, ಅಂಗಡಿ ಮುಂಗಟ್ಟುಗಳನ್ನು ತೆರವು ಮಾಡಿದ ಅಧಿಕಾರಿಗಳು ಪನಃ ಈ ಪ್ರದೇಶಗಳಲ್ಲಿ ಒತ್ತುವರಿ ಮಾಡಿದಂತೆ ತಾಕೀತು ಮಾಡಿದ್ದಾರೆ. ಗುರುವಾರವ ನಗರದ ವಿವಿಧೆಡೆ ಬಿಬಿಎಂಪಿ ತೆರವು ಕಾರ್ಯಾಚರಣೆ ಮುಂದುವರಿಯಲಿದೆ.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ












Click it and Unblock the Notifications