ಬಿಬಿಎಂಪಿ: ಬೊಮ್ಮನಹಳ್ಳಿಯ ಅಪಾರ್ಟ್ಮೆಂಟ್ ಒತ್ತುವರಿ ತೆರವು
ಬೆಂಗಳೂರು, ಸೆಪ್ಟಂಬರ್ 28: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯಿಂದ ರಾಜಕಾಲುವೆ ಒತ್ತುವರಿ ತೆರವು ಕಾರ್ಯ ಮುಂದುವರಿದಿದೆ. ಬುಧವಾರ ವಿವಿಧೆಡೆ ಒತ್ತುವರಿ ತೆರವು ಮಾಡುವ ಜತೆಗೆ ಸರ್ವೇ ಕಾರ್ಯವನ್ನು ನಡೆಸಿದೆ.
ಬೆಂಗಳೂರಿನ ಬೊಮ್ಮನಹಳ್ಳಿ ವಲಯದ ಕೋಡಿಚಿಕ್ಕನಹಳ್ಳಿಯಲ್ಲಿರುವ ಜನಪ್ರಿಯ ಲೇಕ್ ವ್ಯೂ ಅಪಾರ್ಟ್ಮೆಂಟ್ ಬಳಿ 11 ಅಡಿ ಅಗಲ ಹಾಗೂ 100 ಅಡಿ ಉದ್ದದ ರಾಜಕಾಲುವೆಯ ಒತ್ತುವರಿ ತೆರವು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಲ್ಲಿ ಬೃಹತ್ ನೀರುಗಾಲುವೆಗಳನ್ನು ಒತ್ತುವರಿ ಮಾಡಿಕೊಂಡಿರುವುದು ಸರ್ವೇಯಿಂದ ದೃಢಪಟ್ಟಿತ್ತು. ಜನಪ್ರಿಯ ಲೇಕ್ ವ್ಯೂ ಅಪಾರ್ಟ್ಮೆಂಟ್ (ಫೇಸ್-2, ಗೇಟ್-1) ಬಳಿ 2 ಕಾಂಪೌಂಡ್ ಗೋಡೆ, ಒಂದು ಖಾಲಿ ಜಾಗ ಹಾಗೂ ರಾಜಕಾಲುವೆ ಮೇಲೆ ನಿರ್ಮಿಸಿದ್ದ ರಸ್ತೆಯನ್ನು ತೆರವುಗೊಳಿಸಲಾಗುತ್ತಿದೆ. ಕಾರ್ಯಾಚರಣೆ ಪ್ರಗತಿಯಲ್ಲಿದ್ದು, ಸದರಿ ಸ್ಥಳದಲ್ಲಿಯೇ ನಾಳೆ ಕೂಡ ಸಂಪೂರ್ಣ ತೆರವು ಮಾಡಿ ಖಾಲಿ ಜಾಗ ವಶಪಡಿಸಿಕೊಳ್ಳಲಾಗುವುದು ಎಂದು ಬಿಬಿಎಂಪಿ ತಿಳಿಸಿದೆ.

ಮಹದೇವಪುರ ವಲಯದಲ್ಲಿ ಸರ್ವೇ ಕಾರ್ಯ ಪ್ರಗತಿ
ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಹಲವೆಡೆ ಸರ್ವೇ ಕಾರ್ಯ ನಡೆಸಿದ ಬಿಬಿಎಂಪಿ ಅಧಿಕಾರಿಗಳಿಗೆ ರಾಜಕಾಲುವೆ ಒತ್ತುವರಿ ಆಗಿರುವುದು ಕಂಡು ಬಂದಿದೆ. ಹೂಡಿ, ದೊಡ್ಡಾನೆಕುಂದಿ, ವರ್ತೂರು, ಕುಂದನಹಳ್ಳಿ, ಮುನ್ನೇನಕೊಳಲು, ಕಸವಹಳ್ಳಿಯ ಪ್ರದೇಶಗಳಲ್ಲಿ ಸುಮಾರು 5,000 ಮೀಟರ್ ರಾಜಕಾಲುವೆ ಒತ್ತುವರಿಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ವಿವಿಧೆಡೆ ಸರ್ವೇ ಮುಂದುವರಿದ ಕಾರ್ಯ
"ಭೂಮಾಪಕ ಅಧಿಕಾರಿಗಳು ಸೇರಿದಂತೆ ಬಿಬಿಎಂಪಿ ಸಿಬ್ಬಂದಿ ಒತ್ತುವರಿ ಮಾರ್ಕಿಂಗ್ ಮಾಡುತ್ತಿದ್ದಾರೆ. ಅದು ಪೂರ್ಣಗೊಂಡ ಬೆನ್ನಲ್ಲೆ ಜೆಸಿಬಿ, ಟಿಪ್ಪರ್ ಸಹಾಯದಿಂದ ಕೂಡಲೇ ಒತ್ತುವರಿ ತೆರವು ಮಾಡಲಾಗುವುದು. ಈ ಪೈಕಿ ಸರ್ವೇ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಿ ಮಾರ್ಕಿಂಗ್ ಮಾಡಿ ಒತ್ತುವರಿ ತೆರವಿಗೆ ಸೂಕ್ತ ಕ್ರಮ ಕೈಗೊಳ್ಳಿ," ಎಂದು ಮುಖ್ಯ ಅಭಿಯಂತರ ಬಸವರಾಜ್ ಕಬಾಡೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬೆಂಗಳೂರಿಗೆ ಪ್ರವಾಹ ಉಂಟಾದ ಬೆನ್ನಲ್ಲೆ ಬಿಬಿಎಂಪಿ ಕಾಯೋನ್ಮುಖವಾಗಿದ್ದು, ಈಗಾಗಲೇ ಮಾರತ್ತಹಳ್ಳಿ, ಮಹದೇವಪುರ, ಬೊಮ್ಮನಹಳ್ಳಿ, ದಾಸರಹಳ್ಳಿ ಸೇರಿದಂತೆ ವಿವಿಧಡೆ ಒತ್ತುವರಿ ತೆರವು ನಡೆಸುತ್ತಿದ್ದಾರೆ. ರಾಜಕಾಲುವೆ ಮೇಲಿನ ಸ್ಲಾಬ್, ಶೆಡ್, ಕಾಂಪೌಂಡ್, ಅಂಗಡಿ ಮುಂಗಟ್ಟುಗಳನ್ನು ತೆರವು ಮಾಡಿದ ಅಧಿಕಾರಿಗಳು ಪನಃ ಈ ಪ್ರದೇಶಗಳಲ್ಲಿ ಒತ್ತುವರಿ ಮಾಡಿದಂತೆ ತಾಕೀತು ಮಾಡಿದ್ದಾರೆ. ಗುರುವಾರವ ನಗರದ ವಿವಿಧೆಡೆ ಬಿಬಿಎಂಪಿ ತೆರವು ಕಾರ್ಯಾಚರಣೆ ಮುಂದುವರಿಯಲಿದೆ.
-
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
ಸಿಎಸ್ಕೆ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಸ್ಫೋಟಕ ಸತ್ಯ ಬಿಚ್ಚಿಟ್ಟ ಆರ್ಸಿಬಿ ಸ್ಟಾರ್, ಕನ್ನಡಿಗ ಪಡಿಕ್ಕಲ್ -
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ! -
Match Weather Report: ಚಿನ್ನಸ್ವಾಮಿಯಲ್ಲಿ ಆರ್ಸಿಬಿ-ಸಿಎಸ್ಕೆ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಉಪೇಂದ್ರ ಅಣ್ಣನ ಮಗನ ಜೊತೆ ಶ್ರೇಯಾಂಕ ಪಾಟೀಲ್ ಮದುವೆ ಸುದ್ದಿ: ಖಡಕ್ ಪ್ರತಿಕ್ರಿಯೆ ಕೊಟ್ಟ ನಟ ನಿರಂಜನ್ ಸುಧೀಂದ್ರ -
Prakash Raj: ಚಹಾ ಮಾರುವುದರಿಂದ ಸಿನಿಮಾ ಮಾರುವವರೆಗೆ ಮೋದಿ ಬಗ್ಗೆ ನಟ ಪ್ರಕಾಶ್ ರಾಜ್ ವ್ಯಂಗ್ಯ -
ಪಾಪರ್ ಸರ್ಕಾರದ ಸಾಹುಕಾರ ಸಿದ್ದರಾಮಯ್ಯ: ಬಾಗಲಕೋಟೆ ಮೆಡಿಕಲ್ ಕಾಲೇಜ್ ಬಗ್ಗೆ ಬೊಮ್ಮಾಯಿ ಪ್ರಶ್ನೆ












Click it and Unblock the Notifications