ಬಿಬಿಎಂಪಿಗೆ ಕೋಟಿ..ಕೋಟಿ ರೂ. ಆದಾಯ ಸಂಗ್ರಹ: ಒಟಿಎಸ್, ಇ- ಖಾತಾದಿಂದ ದುಡ್ಡಿನ ಮಳೆ!
ಬಿಬಿಎಂಪಿಯು (ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ)ಗೆ ಕೋಟಿ ಕೋಟಿ ದುಡ್ಡು ಹರಿದು ಬಂದಿದೆ. ಬಿಬಿಎಂಪಿಯು ಆದಾಯ ಸಂಗ್ರಹದಲ್ಲಿ ಹೊಸ ದಾಖಲೆಯನ್ನೇ ಸೃಷ್ಟಿ ಮಾಡಿದೆ. ಬೆಂಗಳೂರಿನಲ್ಲಿ ಆಸ್ತಿದಾರರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಬಿಬಿಎಂಪಿ ಹಾಗೂ ರಾಜ್ಯ ಸರ್ಕಾರ ಒಟಿಎಸ್ (ಒಂದು ಬಾರಿ ಪರಿಹಾರ ಯೋಜನೆ - OTS ) ಯೋಜನೆಯ ಲಾಭವನ್ನು ಪರಿಚಯಿಸಿತ್ತು. ಇದರಿಂದ ಬಿಬಿಎಂಪಿಗೆ ಕೋಟ್ಯಾಂತರ ರೂಪಾಯಿ ಆದಾಯ ಹರಿದು ಬಂದಿದೆ. ಬಿಬಿಎಂಪಿಯು ಆಸ್ತಿ ತೆರಿಗೆ ಸಂಗ್ರಹದಲ್ಲಿ ಹೊಸ ದಾಖಲೆಯನ್ನು ಬರೆದಿದ್ದು, ಇದನ್ನು ಇನ್ನಷ್ಟು ಹೆಚ್ಚಳ ಮಾಡುವುದಾಗಿ ಹೇಳಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಆಸ್ತಿ ತೆರಿಗೆ ಪ್ರಮುಖ ಆದಾಯ ಮೂಲವಾಗಿದೆ. ಬೆಂಗಳೂರಿನಲ್ಲಿ ವಿವಿಧ ಕಾಮಗಾರಿಗಳನ್ನು ಹಾಗೂ ಯೋಜನೆಗಳನ್ನು ಅನುಷ್ಠಾನ ಮಾಡುವುದು ಹಾಗೂ ಅಧಿಕಾರಿಗಳಿಗೆ ಸಂಬಳ ಸೇರಿದಂತೆ ಹಲವು ಖರ್ಚುಗಳಿಗೆ ಬೆಂಗಳೂರಿನ ಆಸ್ತಿ ತೆರಿಗೆ ಆದಾಯವೂ ಪ್ರಮುಖವಾಗಿದೆ. ಅಲ್ಲದೇ ಈಚೆಗೆ ಬೆಂಗಳೂರಿನ ಆಸ್ತಿಗಳಿಗೆ ಇ -ಖಾತಾ ಕಡ್ಡಾಯ ಮಾಡಲಾಗಿದ್ದು, ಇದರಿಂದ ಬಿಬಿಎಂಪಿಗೆ ಆದಾಯ ಸೋರಿಕೆಯಾಗುವುದು ಕಡಿಮೆಯಾಗಿದೆ. ಅದರೊಂದಿಗೆ ಆದಾಯ ಸಂಗ್ರಹವಾಗುವ ಪ್ರಮಾಣವೂ ಹೆಚ್ಚಳವಾಗಿದೆ.

ಇದೀಗ ಬಿಬಿಎಂಪಿಯ ಕಂದಾಯ ವಿಭಾಗದ ಅಧಿಕಾರಿಗಳೇ ನೀಡಿರುವ ಮಾಹಿತಿಯ ಪ್ರಕಾರ, ಬಿಬಿಎಂಪಿ ಆಸ್ತಿ ತೆರಿಗೆಯು 30.11.24 ಕ್ಕೆ 4284 ಕೋಟಿ ರೂಪಾಯಿ ಮೊತ್ತದ ಆದಾಯ ಸಂಗ್ರಹವಾಗಿದೆ. ಅಲ್ಲದೇ ಬಿಬಿಎಂಪಿಯಲ್ಲಿ ಇದುವರೆಗೆ ಸಂಗ್ರಹವಾಗಿರು ಅತ್ಯಧಿಕ ತೆರಿಗೆ ಸಂಗ್ರಹ ಇದಾಗಿದೆ ಎಂದು ಬಿಬಿಎಂಪಿ ಹೇಳಿದೆ.
ಅಲ್ಲದೇ ಈ ವರ್ಷ ಅಂದರೆ 2024 -25ನೇ ಸಾಲಿನಲ್ಲಿ ಬಿಬಿಎಂಪಿಯು 5,200 ಕೋಟಿ ಆದಾಯ ಸಂಗ್ರಹ ಮಾಡುವ ಗುರಿಯನ್ನು ಹಾಕಿಕೊಂಡಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿನ ಆಸ್ತಿಗಳ ಆಸ್ತಿ ತೆರಿಗೆ ಸಂಗ್ರಹದಿಂದ ಆರ್ಥಿಕ ವರ್ಷ ಮಾರ್ಚ್ 2025ರ ಅಂತ್ಯಕ್ಕೆ 5200 ಕೋಟಿ ರೂಪಾಯಿ ಸಂಗ್ರಹಿಸುವ ಗುರಿಯನ್ನು ಹಾಕಿಕೊಳ್ಳಲಾಗಿದೆ ಎಂದು ಬಿಬಿಎಂಪಿಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಮಾಹಿತಿ ನೀಡಿದ್ದಾರೆ. ಅಲ್ಲದೇ ಎಲ್ಲಕ್ಕಿಂತ ಮುಖ್ಯವಾಗಿ ಪ್ರತಿ ಸಾರ್ವಜನಿಕರಿಗೂ ಇ-ಖಾತಾವನ್ನು ಸುಗಮವಾಗಿ ಪಡೆಯಲು ಬಿಬಿಎಂಪಿ ಬದ್ಧವಾಗಿದೆ ಎಂದು ಹೇಳಲಾಗಿದೆ.

ಒಟಿಎಸ್ ಮುಕ್ತಾಯ: ನವೆಂಬರ್ 30ರ ವರೆಗೆ ಒಟಿಎಸ್ ಯೋಜನೆಯನ್ನು ನೀಡುವುದಾಗಿ ಹಾಗೂ ಇದಾದ ಮೇಲೆ ಡಿಸೆಂಬರ್ 1ರಿಂದ ಈ ಯೋಜನೆಯನ್ನು ಬಳಸಿಕೊಳ್ಳದೆ ಇದ್ದರೆ, ಬಾಕಿದಾರರು ದುಪ್ಪಟ್ಟು ಆಸ್ತಿ ತೆರಿಗೆ ಪಾವತಿ ಮಾಡಬೇಕು ಎಂದು ಬಿಬಿಎಂಪಿಯು ಹೇಳಿತ್ತು. ಅದರಂತೆ ನವೆಂಬರ್ 30 ಮುಕ್ತಾಯವಾಗಿದೆ. ಆದರೆ, ನಾಳೆಯಿಂದ ಇದು ದುಪ್ಪಟ್ಟಾಗಲಿದೆಯೇ ಅಥವಾ ಒಟಿಎಸ್ ಯೋಜನೆಯನ್ನು ಮುಂದುವರಿಸಲಾಗುವುದೇ ಇಲ್ಲ ಅಂತ್ಯವಾಗಲಿದೆಯೇ ಎನ್ನುವುದಕ್ಕೆ ಸಂಬಂಧಿಸಿದಂತೆ ಬಿಬಿಎಂಪಿಯಿಂದ ಇನ್ನಷ್ಟೇ ಅಧಿಕೃತ ಆದೇಶ ಬರಬೇಕಿದೆ.
ಇನ್ನು ಈಗಾಗಲೇ ಬಿಬಿಎಂಪಿಯ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಅವರು ಒಟಿಎಸ್ ಯೋಜನೆಯನ್ನು ಮುಂದುವರಿಸುವ ಪ್ಲಾನ್ ಇಲ್ಲ ಎಂದೇ ಹೇಳಿದ್ದರು. ಹೀಗಾಗಿ, ಈ ಯೋಜನೆ ಮುಂದುವರಿಯುವ ಸಾಧ್ಯತೆ ಕಡಿಮೆ ಇದೆ. ಆದರೆ, ಇದೀಗ ಹೆಚ್ಚು ಆದಾಯ ಸಂಗ್ರಹವಾಗುತ್ತಿರುವುದರಿಂದ ಈ ಯೋಜನೆ ಮುಂದುವರಿಸಲಾಗುವುದೇ ಎನ್ನುವ ಕುತೂಹಲ ಜನರಲ್ಲಿ ಇದೆ.
ಇನ್ನು ಬೆಂಗಳೂರಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಏಳರಿಂದ ಎಂಟು ಲಕ್ಷ ಆಸ್ತಿಗಳಿಗೆ ಸಂಬಂಧಿಸಿದಂತೆ ಆಸ್ತಿ ಖಾತಾಗಳನ್ನು ಮಾಡಿಸಿಲ್ಲ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಹೇಳಿದ್ದರು. ಈ ರೀತಿ ಆಸ್ತಿ ತೆರಿಗೆ ವ್ಯಾಪ್ತಿಯಿಂದ ಹೊರಗಿರುವವರನ್ನೂ ಇದೀಗ ಆಸ್ತಿ ವ್ಯಾಪ್ತಿಗೆ ಸೇರಿಸಿರುವುದರಿಂದ ಬಿಬಿಎಂಪಿಯ ಆಸ್ತಿ ತೆರಿಗೆ ಆದಾಯ ಹೆಚ್ಚಾಗಿರುವುದಕ್ಕೆ ಕಾರಣವಾದಂತೆ ಆಗಿದೆ.
-
Bengaluru property: ಬೆಂಗಳೂರಿನ 51 ಆಸ್ತಿಗಳ ಸ್ವಾಧೀನಕ್ಕೆ ಮುಂದಾದ ಉತ್ತರ ನಗರ ಪಾಲಿಕೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications