ಸ್ಮೋಕ್ ಫ್ರೀ ಬೆಂಗಳೂರು: ಬಿಬಿಎಂಪಿ ಆಯುಕ್ತರ ಪಣ
ಬೆಂಗಳೂರು, ಡಿಸೆಂಬರ್ 13: ಬೃಹತ್ ಬೆಂಗಳೂರು ನಗರ ಮಹಾನಗರ ಪಾಲಿಕೆ ಆಯುಕ್ತರಾದ ಬಿ. ಎಚ್. ಅನಿಲ್ ಕುಮಾರ್ ಅವರು ಇಂದು ಮುಂದಿನ ದಿನಗಳಲ್ಲಿ ತಂಬಾಕು ನಿಯಂತ್ರಣ ಕಾನೂನುಗಳನ್ನು ಇನ್ನಷ್ಟು ಕಠಿಣ ರೀತಿಯಲ್ಲಿ ಬೆಂಗಳೂರು ನಗರದಲ್ಲಿ ಜಾರಿಗೊಳಿಸುವುದಾಗಿ ಘೋಷಿಸಿದ್ದಾರೆ.
ಕ್ಯಾನ್ಸರ್ ಅಥವಾ ಮಧುಮೇಹ ಮತ್ತಿತರ ಸಾಂಕ್ರಮಿಕವಲ್ಲದ ರೋಗಗಳು(ಎನ್ ಸಿ ಡಿಎಸ್)ಗಳಿಂದ ಜೀವಗಳನ್ನು ಉಳಿಸುವ ನಿಟ್ಟಿನಲ್ಲಿ ಜಾಗತಿಕ ಮಟ್ಟದಲ್ಲಿ 70 ನಗರಗಳಲ್ಲಿ ಕೈಗೊಂಡಿರುವ ಆರೋಗ್ಯ ನಗರ ನಿರ್ಮಾಣ ಪಾಲುದಾರಿಕೆಯಲ್ಲಿ ಈ ಕ್ರಮವನ್ನು ಕೈಗೊಳ್ಳಲು ಉದ್ದೇಶಿಸಲಾಗಿದೆ. ಜಗತ್ತಿನಾದ್ಯಂತ ಆರೋಗ್ಯ ನಗರಗಳ ಪಾಲುದಾರಿಕೆ 54 ನಗರಗಳಿಂದ 70 ನಗರಗಳಿಗೆ ವಿಸ್ತರಣೆಗೊಂಡಿದ್ದು, ಅದರ ಒಟ್ಟಾರೆ ಜನಸಂಖ್ಯೆ 300 ಮಿಲಿಯನ್ ಆಗಿದೆ.
ಅಲ್ಲದೆ ಅನಿಲ್ ಕುಮಾರ್ ಅವರು, ಹಾಲಿ ತಂಬಾಕು ನಿಯಂತ್ರಣ ಕಾನೂನುಗಳ ಪಾಲನೆ ಬಗ್ಗೆ ಪಾಲಿಕೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವುದಲ್ಲದೆ, ಸಂಬಂಧಿಸಿದವರ ಜೊತೆಗೂಡಿ ಸಾಮಾಜಿಕ ಮಾಧ್ಯಮ, ರೇಡಿಯೋ ಶೋ ಮತ್ತು ಆಟೋ ರಿಕ್ಷಾಗಳ ಮೇಲೆ ಸಂದೇಶಗಳನ್ನು ಪಸರಿಸುತ್ತಾ ಅಭಿಯಾನವನ್ನು ಕೈಗೊಂಡಿದೆ ಎಂದರು.

"ಪಾಲಿಕೆ ಕೈಗೊಂಡಿರುವ ಅಂತಹ ಕ್ರಮಗಳಿಂದಾಗಿ ಇತ್ತೀಚೆಗೆ ಇಂಡೋನೇಷ್ಯಾದಲ್ಲಿ ನಡೆದ ತಂಬಾಕು ನಿಯಂತ್ರಣ ಮತ್ತು ಎನ್ ಸಿ ಡಿಎಸ್ ನಿಯಂತ್ರಿಣ ಕುರಿತ ಏಷ್ಯಾ ಪೆಸಿಫಿಕ್ ನಗರಗಳ ಸಮಾವೇಶದಲ್ಲಿ ಬೆಂಗಳೂರು ನಗರಕ್ಕೆ 2019ರ ಉತ್ತಮ ಸಾಧನೆ ನಗರಿ ಪ್ರಶಸ್ತಿ ಲಭಿಸಿದೆ. ಬೆಂಗಳೂರು ನಗರವನ್ನು ಧೂಮಪಾನರಹಿತಗೊಳಿಸಲು ಈಗಾಗಲೇ ಸಾಕಷ್ಟು ಜಾರಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇನ್ನೂ ಹೆಚ್ಚಿನ ಫಲಿತಾಂಶಗಳನ್ನು ಪಡೆಯಲು ಎರಡನೇ ಹಂತದ ಧೂಮಪಾನ ರಹಿತ ಬೆಂಗಳೂರು - ಸ್ಮೋಕ್ ಫ್ರಿ ಬೆಂಗಳೂರು ಯೋಜನೆಯಲ್ಲಿ ಇನ್ನೂ ಹೆಚ್ಚಿನ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.
ಬೆಂಗಳೂರು ನಗರದಲ್ಲಿ ಮಾರಾಟ ಸ್ಥಳ(ಪೆಟ್ಟಿಗೆ ಅಂಗಡಿಗಳು ಮತ್ತು ಇತರೆ ವಾಣಿಜ್ಯ ಮುಂಗಟ್ಟುಗಳು)ಗಳಲ್ಲಿ ಸಿಗರೇಟು ಮತ್ತು ಇತರೆ ತಂಬಾಕು ಪದಾರ್ಥಗಳ ಕಾಯ್ದೆ - 2003 ಅಥವಾ ಕೋಟ್ಪಾ ಉಲ್ಲಂಘನೆಗಳು ಅತಿ ಹೆಚ್ಚು ಪ್ರಮಾಣದಲ್ಲಿ ನಡೆಯುತ್ತಿವೆ. ಶೇ.70.5ರಷ್ಟು ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧವಿದ್ದರೂ ಅಲ್ಲಿ ತಂಬಾಕು ಪದಾರ್ಥಗಳ ಮಾರಾಟ ಎಗ್ಗಿಲ್ಲದೆ ಸಾಗಿದೆ. ಧೂಮಪಾನ ನಿಷೇಧ ಫಲಕಗಳು ಶೇ.49.8ರಷ್ಟು ಇದ್ದರೂ ಸಹ ಸುಸ್ಥಿರ ಜಾರಿ ಮತ್ತು ಜಾಗೃತಿ ಆಂದೋಲನಗಳನ್ನು ಕೈಗೊಳ್ಳಲಾಗುತ್ತಿದೆ.
ಬ್ಲೂಮ್ ಬರ್ಗ್ ಫಿಲಾಂತ್ರಫೀಸ್ ಜೊತೆಗೂಡಿ ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯೂಎಚ್ಒ) ಮತ್ತು ವೈಟಲ್ ಸ್ಟ್ರಾಟಜೀಸ್ ಈ ಆರೋಗ್ಯ ನಗರಿ ಪಾಲುದಾರಿಕೆಯನ್ನು ಬೆಂಬಲಿಸಿವೆ. ಇದು ಎನ್ ಸಿ ಡಿ ಮತ್ತು ಗಾಯಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸಾಕ್ಷ್ಯ ಆಧರಿಸಿದ ಪರಿಣಾಮಕಾರಿ ಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications