ಬೆಂಗಳೂರು:ಬಿಬಿಎಂಪಿ ಆಯುಕ್ತ ಮಂಜುನಾಥ್ ಸೇರಿ ಹಲವರಿಗೆ ಕೊರೊನಾ ಲಸಿಕೆ

ಬೆಂಗಳೂರು,ಫೆಬ್ರವರಿ 10: ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಸೇರಿ ಹಲವು ಸಿಬ್ಬಂದಿ ಕೊರೊನಾ ಲಸಿಕೆ ಹಾಕಿಸಿಕೊಂಡರು.

ಬಿಬಿಎಂಪಿ ಕೇಂದ್ರ ಕಚೇರಿಯ ಡಾ.ರಾಜ್ ಕುಮಾರ್ ಗಾಜಿನ ಮನೆ ಸಭಾಂಗಣದಲ್ಲಿ ಮಂಗಳವಾರ ಪಾಲಿಕೆಯ ಆಡಳಿತಾಧಿಕಾರಿ ಗೌರವ್ ಗುಪ್ತ ಅವರೊಂದಿಗೆ ಕೊರೊನಾ ಲಸಿಕೆ ಹಾಕಿಸಿಕೊಳ್ಳುವ ಮೂಲಕ 2ನೇ ಹಂತದ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದರು.

ವದಂತಿಗಳ ನಂಬಿ ಕೊರೋನಾ ಲಸಿಕೆ ಹಾಕಿಸಿಕೊಳ್ಳಲು ಹಿಂದೇಟು ಹಾಕುತ್ತಿರುವ ಸಿಬ್ಬಂದಿಗಳಿಗೆ ಪ್ರೇರಣೆ ಹಾಗೂ ಅಭಯ ನೀಡುವ ಸಲುವಾಗಿ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಅವರು ಮಂಗಳವಾರ ಲಸಿಕೆ ಹಾಕಿಸಿಕೊಂಡರು.

BBMP Commissioner Manjunath Prasad Takes The Covid 19 Vaccine at Head Office

ಕೊರೊನಾ ಮುಂಚೂಣಿ ಹೋರಾಟಗಾರರ ಕುರಿತು ಮಾತನಾಡಿ, ಭಾರತದಿಂದ ಇತರೆ ರಾಷ್ಟ್ರಗಳು ಲಸಿಕೆಗಾಗಿ ಬೇಡಿಕೆಗಳನ್ನು ಇಡುತ್ತಿವೆ. ದೇಶದಲ್ಲಿ ಉಚಿತ ದರದಲ್ಲಿ ಲಸಿಕೆ ನೀಡುತ್ತಿರುವಾಗ ಇಂತಹ ಅವಕಾಶವನ್ನು ಜನರು ಬಳಕೆ ಮಾಡಿಕೊಳ್ಳಬೇಕು. ಎಲ್ಲಾ ನಿಯಮಗಳನ್ನೂ ಅನುಸರಿಸಿ, ಲಸಿಕೆ ಪಡೆದುಕೊಂಡು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಕೊರೊನಾ ಲಸಿಕೆ ಹಾಕಿಸಿಕೊಳ್ಳಲು ಭಯ ಪಡಬಾರದು. ಲಸಿಕೆ ಹಾಕಿಸಿಕೊಳ್ಳುವ ಮೂಲಕ ಇತರರಿಗೆ ಪ್ರೇರಣೆ ಹಾಗೂ ಉದಾಹರಣೆಯಾಗಬೇಕು. ಸಂದೇಹಗಳನ್ನು ಪರಿಹರಿಸಬೇಕು. ಲಸಿಕೆ ಪಡೆಯುವಂತೆ ಯಾರಿಗೂ ಬಲವಂತ ಮಾಡಬಾರದು ಎಂದರು.

Recommended Video

      ಶಿಕ್ಷಣ ಸಚಿವರಿಂದ ಮಹತ್ವದ ನಿರ್ಧಾರ! | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+