ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ಗೆ ಕೊರೊನಾ ಸೋಂಕು
ಬೆಂಗಳೂರು, ಡಿಸೆಂಬರ್ 22: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತ ಎನ್ ಮಂಜುನಾಥ್ ಪ್ರಸಾದ್ಗೆ ಕೊರೊನಾ ಸೋಂಕು ತಗುಲಿದೆ.
ಕಳೆದ ಕೆಲ ದಿನಗಳಲ್ಲಿ ತಮ್ಮ ಸಂಪರ್ಕಕ್ಕೆ ಬಂದವರು, ಕಾರ್ಯಕ್ರಮಗಳಲ್ಲಿ ಪಾಲ್ಗೊಂಡವರು ಮತ್ತು ಮಾಧ್ಯಮ ಮಿತ್ರರು ಕೂಡಲೇ ಕೋವಿಡ್-19 ಪರೀಕ್ಷೆ ಮಾಡಿಸಿಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ.
ಕೊರೊನಾ ಸೋಂಕಿನ ಯಾವುದೇ ಲಕ್ಷಣಗಳು ಕಾಣಿಸಿಕೊಂಡಿಲ್ಲ ಹಾಗೂ ಅವರು ಆರೋಗ್ಯವಾಗಿದ್ದಾರೆ ಎಂದು ಆಯುಕ್ತರ ಕಚೇರಿ ಸಿಬ್ಬಂದಿ ದೃಢಪಡಿಸಿದ್ದಾರೆ. ಇದೀಗ ತಾವು ಗೃಹಬಂಧನದಲ್ಲಿರುವುದಾಗಿ ತಿಳಿಸಿದ್ದಾರೆ.

ಬ್ರಿಟನ್ನಲ್ಲಿ ಕಾಣಿಸಿಕೊಂಡಿರುವ ಹೊಸ ರೂಪಾಂತರಿ ಕೊರೊನಾ ವೈರಸ್ ಸೋಂಕು ಜಗತ್ತಿನಾದ್ಯಂತ ಭೀತಿ ಮೂಡಿಸಿರುವ ನುಡವೆಯೇ ಭಾರತದಲ್ಲಿ ಕೋವಿಡ್ ವಿರುದ್ಧದ ಹೋರಾಟದಲ್ಲಿ ಮತ್ತಷ್ಟು ಗಮನಾರ್ಹ ಸಾಧನೆ ಕಂಡುಬಂದಿದೆ. ಸೋಮವಾರ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಇಳಿಕೆಯಾಗಿದ್ದು, ಸಕ್ರಿಯ ಪ್ರಕರಣಗಳು ಕೂಡ ಸಾಕಷ್ಟು ತಗ್ಗಿವೆ.












Click it and Unblock the Notifications