Get Updates
Get notified of breaking news, exclusive insights, and must-see stories!

Garbage Tax: ಬೆಂಗಳೂರಿಗರೇ ಗಮನಿಸಿ.. ಇನ್ಮುಂದೆ ಕಸ ಹಾಕುವುದಕ್ಕೂ ನೀಡಬೇಕು ಸೇವಾ ಶುಲ್ಕ!

ಬೆಂಗಳೂರು, ಜೂನ್. 12: ನಗರದಲ್ಲಿ ಈಗಾಗಲೇ ಕಸ ತೆಗೆದುಕೊಂಡು ಹೋಗುವ ಪೌರಕಾರ್ಮಿಕರಿಗೆ ಹಲವರು ಹಣ ನೀಡುತ್ತಿರುತ್ತಾರೆ. ಕೆಲವರು ಬಾಯಿ ಬಿಟ್ಟು ಕೇಳುತ್ತಾರೆ ಮತ್ತೆ ಕೆಲವರು ಕೇಳುವುದಿಲ್ಲ. ಆದರೆ, ಇನ್ಮುಂದೆ ನೀವು ಡೈರೆಕ್ಟ್ ಆಗಿಯೇ ಸೇವಾ ಶುಲ್ಕ ಕಟ್ಟಬೇಕಾಗುತ್ತದೆ.

ಹೌದು... ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಪ್ರತಿ ಮನೆಗೆ ತಿಂಗಳಿಗೆ 100 ರೂಪಾಯಿಗಳ ಘನತ್ಯಾಜ್ಯ ಸೇವಾ ಶುಲ್ಕವನ್ನು ವಿಧಿಸಲು ಯೋಚಿಸುತ್ತಿದೆ. ಹೀಗಾಗಿ ಬೆಂಗಳೂರಿನ ನಿವಾಸಿಗಳು ಶೀಘ್ರದಲ್ಲೇ ತಮ್ಮ ಬಿಲ್‌ಗಳಲ್ಲಿ ಹೆಚ್ಚುವರಿ ಶುಲ್ಕವನ್ನು ನೀಡಬೇಕಾಗುತ್ತದೆ.

BBMP considers Rs 100 Garbage Tax Former Minister Suresh Kumar Slams

ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಕಂಪನಿ ಲಿಮಿಟೆಡ್ (BSWML) ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ ಪ್ರಸ್ತಾವನೆಯಲ್ಲಿ ನಗರದಲ್ಲಿ ಕಸ ವಿಲೇವಾರಿಯಲ್ಲಿ ಹೆಚ್ಚುತ್ತಿರುವ ಸವಾಲನ್ನು ಎದುರಿಸಲು ಈ ಸೇವಾ ಶುಲ್ಕವನ್ನು ಜಾರಿ ಮಾಡಲು ಯೋಚಿಸುತ್ತಿದೆ. ಈಗಾಗಲೇ ದೇಶದ ಹಲವು ಭಾಗಗಳಲ್ಲಿ ಈ ವ್ಯವಸ್ಥೆಯನ್ನು ಅಳವಡಿಸಲಾಗಿದೆ.

ದೇಶದಾದ್ಯಂತ ಇತರ ಪ್ರಮುಖ ನಗರಗಳಲ್ಲಿ ಸೇವಾ ಶುಲ್ಕ ವ್ಯವಸ್ಥೆಯನ್ನು ಅಳವಡಿಸಲಾಗಿರುವ ಇದೇ ರೀತಿಯ ವ್ಯವಸ್ಥೆಗಳನ್ನು ಗಮನದಲ್ಲಿಟ್ಟುಕೊಂಡು ಇದನ್ನು ಜಾರಿಗೆ ತರಲಾಗುತ್ತಿದೆ. ಈ ಸೇವಾ ಶುಲ್ಕದಿಂದ ಬೆಂಗಳೂರಿನಲ್ಲಿ ತ್ಯಾಜ್ಯ ನಿರ್ವಹಣೆಯನ್ನು ಸುಗಮಗೊಳಿಸಬಹುದು ಎಂಬುದ ಬಿಬಿಎಂಪಿ ಲೆಕ್ಕಾಚಾರ.

ವಿದ್ಯುತ್ ಬಿಲ್ ಜೊತೆಗೆ ತ್ಯಾಜ್ಯಾ ಸೇವಾ ಶುಲ್ಕ!

ಆರಂಭದಲ್ಲಿ ಘನತ್ಯಾಜ್ಯ ಸೇವಾ ಶುಲ್ಕವನ್ನು ವಿದ್ಯುತ್ ಬಿಲ್‌ನಲ್ಲಿ ಸೇರಿಸುವ ಕುರಿತು ಚರ್ಚೆಗಳು ನಡೆದಿದ್ದವು. ಆದರೆ, ಇದಕ್ಕೆ ಹಲವು ಅಡೆತಡೆಗಳು ಇದ್ದವು. ಅದರಲ್ಲೂ ವಿಶೇಷವಾಗಿ ಅನೇಕ ನಿವಾಸಿಗಳು ಗೃಹ ಜ್ಯೋತಿ ಯೋಜನೆಗಳಿಂದ ಪ್ರಯೋಜನ ಪಡೆಯುತ್ತಿದ್ದಾರೆ. ಪರಿಣಾಮವಾಗಿ, ಆಸ್ತಿ ತೆರಿಗೆ ಸಂಗ್ರಹದೊಂದಿಗೆ ಸೇವಾ ಶುಲ್ಕವನ್ನು ಸೇರಿಸಲು ನಿರ್ಧರಿಸಲಾಗಿದೆ.

BBMP considers Rs 100 Garbage Tax Former Minister Suresh Kumar Slams

ಘನತ್ಯಾಜ್ಯ ನಿರ್ವಹಣಾ ನಿಯಮ 2016ರ ಪ್ರಕಾರ ವಸತಿ ಕಟ್ಟಡಗಳಿಗೆ ತಿಂಗಳಿಗೆ 200 ರೂ.ವರೆಗೆ ಸೇವಾ ಶುಲ್ಕ ವಿಧಿಸಲು ಅನುಮತಿ ನೀಡಲಾಗಿದ್ದರೂ, ತಿಂಗಳಿಗೆ 100 ರೂ.ಗೆ ನಿಗದಿಪಡಿಸಲಾಗಿದೆ. ಘನತ್ಯಾಜ್ಯ ಸೇವಾ ಶುಲ್ಕವನ್ನು ಆಸ್ತಿ ತೆರಿಗೆ ಪಾವತಿಯೊಂದಿಗೆ ಸಂಗ್ರಹಿಸಲಾಗುತ್ತದೆ. ಸಂಗ್ರಹಿಸಿದ ಹಣವನ್ನು ಸಮರ್ಥ ಕಸ ವಿಲೇವಾರಿ ಕಾರ್ಯಾಚರಣೆಗಳಿಗಾಗಿ ಬಿಬಿಎಂಪಿ ಮತ್ತು ಬಿಎಸ್‌ಡಬ್ಲ್ಯೂಎಂಎಲ್‌ಗೆ ರವಾನಿಸಲಾಗುತ್ತದೆ.

ಕಿಡಿಕಾರಿದ ಮಾಜಿ ಸಚಿವ ಸುರೇಶ್ ಕುಮಾರ್

ಬಿಬಿಎಂಪಿ ಯ ತ್ಯಾಜ್ಯಾ ಸೇವಾ ಶುಲ್ಕ ವಿಚಾರಕ್ಕೆ ಮಾಜಿ ಸಚಿವ ಎಸ್ ಸುರೇಶ್ ಕುಮಾರ್ ಕಿಡಿಕಾರಿದ್ದಾರೆ. "ಇದು ಸರಳವಾಗಿ ಮತ್ತು ನೇರವಾಗಿ ಹೇಳುವುದಾದರೆ ಕಾಂಗ್ರೆಸ್ ಸರಕಾರದ ಸೇಡಿನ ನಡೆ" ಎಂದು ಕಾಂಗ್ರೆಸ್ ಸರ್ಕಾರವನ್ನು ಟೀಕಿಸಿದ್ದಾರೆ.

"ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಪ್ರತಿ ಮನೆಗೆ ತ್ಯಾಜ್ಯ ನಿರ್ವಹಣೆಗಾಗಿ ತಿಂಗಳಿಗೆ ₹ 100 ಸೇವಾ ಶುಲ್ಕ ವಿಧಿಸಲು ಸರ್ಕಾರ ಮುಂದಾಗಿದೆ" ಎಂಬ ಸುದ್ದಿ ಓದಿದೆ. ಇದು ಸರಳವಾಗಿ ಮತ್ತು ನೇರವಾಗಿ ಹೇಳುವುದಾದರೆ ಕಾಂಗ್ರೆಸ್ ಸರಕಾರದ ಸೇಡಿನ ನಡೆ" ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.

ಮುಂದುವರಿದು, "ಬೆಂಗಳೂರಿನ ಉತ್ತರ, ಕೇಂದ್ರ, ದಕ್ಷಿಣ, ಎರಡು ವಿಧಾನಸಭಾ ಕ್ಷೇತ್ರಗಳನ್ನು (ರಾಜರಾಜೇಶ್ವರಿನಗರ, ಬೆಂಗಳೂರು ದಕ್ಷಿಣ) ಒಳಗೊಂಡ ಬೆಂಗಳೂರು ಗ್ರಾಮಾಂತರ, ಒಂದು ವಿಧಾನಸಭಾ ಕ್ಷೇತ್ರನ್ನು (ಯಲಹಂಕ) ಒಳಗೊಂಡ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಪಕ್ಷಕ್ಕೆ ಮತದಾರರು ನೀಡಿರುವ ಭಾರಿ ವಿಜಯಕ್ಕೆ ಕಾಂಗ್ರೆಸ್ ಪಕ್ಷ ನೀಡುತ್ತಿರುವ ಸೇಡಿನ ಕೊಡುಗೆ" ಎಂದು ಕಿಡಿಕಾರಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+