ರಷ್ಯಾಕ್ಕೆ ಹಾರಿದ ಬಿಬಿಎಂಪಿಯ 27 ಸದಸ್ಯರು
ಬೆಂಗಳೂರು, ಜು. 22 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 27 ಸದಸ್ಯರ ತಂಡವೊಂದು ಏಳು ದಿನಗಳ ರಷ್ಯಾ ಪ್ರವಾಸ ಕೈಗೊಂಡಿದೆ. ಬೆಂಗಳೂರಿನ ಕಸದ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ, ಇನ್ನು ಬಿಬಿಎಂಪಿ ಆರ್ಥಿಕ ಸ್ಥಿತಿ ಏನು ಎಂಬುದು ಎಲ್ಲರಿಗೂ ತಿಳಿಸಿದೆ. ಈ ಸಂದರ್ಭದಲ್ಲಿ ಕುಟುಂಬ ಸಮೇತರಾಗಿ ಬಿಬಿಎಂಪಿ ಸದಸ್ಯರು ವಿದೇಶಕ್ಕೆ ಹಾರಿದ್ದಾರೆ.
ಬಿಬಿಎಂಪಿಯ ಪ್ರತಿಪಕ್ಷ ನಾಯಕ ಬಿ.ಎನ್.ಮಂಜುನಾಥ ರೆಡ್ಡಿ, ಕಾಂಗ್ರೆಸ್ ನ ಎಂ.ಕೆ.ಗುಣಶೇಖರ್, ಎಂ.ನಾಗರಾಜ್, ಜೆಡಿಎಸ್ ನಾಯಕ ಆರ್.ಪ್ರಕಾಶ್, ಬಿಜೆಪಿಯ ಕೆ.ರಂಗಣ್ಣ ಸೇರಿದಂತೆ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ 27 ಕಾರ್ಪೋರೇಟರ್ಗಳು ವಿದೇಶ ಪ್ರವಾಸ ಕೈಗೊಂಡಿದ್ದಾರೆ.

ಮಂಗಳವಾರ ಮುಂಜಾನೆ ನಾಲ್ಕು ಗಂಟೆಗೆ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಬಿಬಿಎಂಪಿ ಸದಸ್ಯರು ದುಬೈಗೆ ತೆರಳಿದ್ದು, ಅಲ್ಲಿಂದ ರಷ್ಯಾಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಮೊದಲ ಮೂರು ದಿನ ಪೀಟರ್ಸ್ ಬರ್ಗ್ ನಗರ ಹಾಗೂ ನಂತರದ ಮೂರು ದಿನಗಳನ್ನು ಮಾಸ್ಕೊ ನಗರದಲ್ಲಿ ಕಳೆಯುವ ತಂಡ ಜು.29ರಂದು ಬೆಂಗಳೂರಿಗೆ ಮರಳಲಿದೆ. [ದುಬೈ ಪ್ರವಾಸ ರದ್ದುಗೊಳಿಸಿದ ಮೇಯರ್]
ರಷ್ಯಾ ಪ್ರವಾಸ ಕೈಗೊಳ್ಳುವ ಬಗ್ಗೆ ಎರಡು ತಿಂಗಳ ಹಿಂದೆಯೇ ಚರ್ಚೆ ನಡೆದಿತ್ತು ಎಂದು ತಿಳಿದುಬಂದಿದೆ. ಸುಮಾರು 27 ಸದಸ್ಯರು ಹಲವರು ಕುಟುಂಬ ಸಮೇತರಾಗಿ ಪ್ರವಾಸಕ್ಕೆ ತೆರಳಿದ್ದಾರೆ. ಪಾಲಿಕೆಯಲ್ಲಿ ಜನಪ್ರತಿನಿಧಿಗಳ ಅಧಿಕಾರಾವಧಿ ಕೆಲವೇ ತಿಂಗಳಲ್ಲಿ ಮುಕ್ತಾಯವಾಗುತ್ತಿರುವ ಹಿನ್ನೆಲೆಯಲ್ಲಿ ಈ ಪ್ರವಾಸ ಕೈಗೊಳ್ಳಲಾಗುತ್ತಿದೆ ಎಂದು ತಿಳಿದುಬಂದಿದೆ.
ಮಂಡೂರಿಗೆ ಭೇಟಿ ನೀಡುತ್ತಾರಾ? : ಬೆಂಗಳೂರು ನಗರದ ಕಸ ತೆಗೆದುಕೊಂಡು ಹೋಗಿ ಸುರಿಯುತ್ತಿರುವ ಮಂಡೂರು ಘಟಕಕ್ಕೆ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ರಷ್ಯಾ ಪ್ರವಾಸಕ್ಕೆ ಹೊರಟಿರುವ ಬಿಬಿಎಂಪಿ ಪಾಲಿಕೆ ಸದಸ್ಯರು ಮಂಡೂರು ಭೇಟಿಯನ್ನು ಬಿಟ್ಟು ರಷ್ಯಾಕ್ಕೆ ಹಾರಿದ್ದಾರೆ.
ಮೇಯರ್ ಏನು ಹೇಳ್ತಾರೆ : ಪಾಲಿಕೆ ಸದಸ್ಯರ ವಿದೇಶ ಪ್ರವಾಸದ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಬಿಬಿಎಂಪಿ ಮೇಯರ್ ಕಟ್ಟೆ ಸತ್ಯನಾರಾಯಣ "ಬಿಬಿಎಂಪಿ ಸದಸ್ಯರ ಪ್ರವಾಸದ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ವೈಯಕ್ತಿಕವಾಗಿ ಅವರು ಪ್ರವಾಸ ಕೈಗೊಂಡಿರಬಹುದು" ಎಂದು ಹೇಳಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications