ರಷ್ಯಾಕ್ಕೆ ಹಾರಿದ ಬಿಬಿಎಂಪಿಯ 27 ಸದಸ್ಯರು
ಬೆಂಗಳೂರು, ಜು. 22 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 27 ಸದಸ್ಯರ ತಂಡವೊಂದು ಏಳು ದಿನಗಳ ರಷ್ಯಾ ಪ್ರವಾಸ ಕೈಗೊಂಡಿದೆ. ಬೆಂಗಳೂರಿನ ಕಸದ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ, ಇನ್ನು ಬಿಬಿಎಂಪಿ ಆರ್ಥಿಕ ಸ್ಥಿತಿ ಏನು ಎಂಬುದು ಎಲ್ಲರಿಗೂ ತಿಳಿಸಿದೆ. ಈ ಸಂದರ್ಭದಲ್ಲಿ ಕುಟುಂಬ ಸಮೇತರಾಗಿ ಬಿಬಿಎಂಪಿ ಸದಸ್ಯರು ವಿದೇಶಕ್ಕೆ ಹಾರಿದ್ದಾರೆ.
ಬಿಬಿಎಂಪಿಯ ಪ್ರತಿಪಕ್ಷ ನಾಯಕ ಬಿ.ಎನ್.ಮಂಜುನಾಥ ರೆಡ್ಡಿ, ಕಾಂಗ್ರೆಸ್ ನ ಎಂ.ಕೆ.ಗುಣಶೇಖರ್, ಎಂ.ನಾಗರಾಜ್, ಜೆಡಿಎಸ್ ನಾಯಕ ಆರ್.ಪ್ರಕಾಶ್, ಬಿಜೆಪಿಯ ಕೆ.ರಂಗಣ್ಣ ಸೇರಿದಂತೆ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ 27 ಕಾರ್ಪೋರೇಟರ್ಗಳು ವಿದೇಶ ಪ್ರವಾಸ ಕೈಗೊಂಡಿದ್ದಾರೆ.

ಮಂಗಳವಾರ ಮುಂಜಾನೆ ನಾಲ್ಕು ಗಂಟೆಗೆ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಬಿಬಿಎಂಪಿ ಸದಸ್ಯರು ದುಬೈಗೆ ತೆರಳಿದ್ದು, ಅಲ್ಲಿಂದ ರಷ್ಯಾಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಮೊದಲ ಮೂರು ದಿನ ಪೀಟರ್ಸ್ ಬರ್ಗ್ ನಗರ ಹಾಗೂ ನಂತರದ ಮೂರು ದಿನಗಳನ್ನು ಮಾಸ್ಕೊ ನಗರದಲ್ಲಿ ಕಳೆಯುವ ತಂಡ ಜು.29ರಂದು ಬೆಂಗಳೂರಿಗೆ ಮರಳಲಿದೆ. [ದುಬೈ ಪ್ರವಾಸ ರದ್ದುಗೊಳಿಸಿದ ಮೇಯರ್]
ರಷ್ಯಾ ಪ್ರವಾಸ ಕೈಗೊಳ್ಳುವ ಬಗ್ಗೆ ಎರಡು ತಿಂಗಳ ಹಿಂದೆಯೇ ಚರ್ಚೆ ನಡೆದಿತ್ತು ಎಂದು ತಿಳಿದುಬಂದಿದೆ. ಸುಮಾರು 27 ಸದಸ್ಯರು ಹಲವರು ಕುಟುಂಬ ಸಮೇತರಾಗಿ ಪ್ರವಾಸಕ್ಕೆ ತೆರಳಿದ್ದಾರೆ. ಪಾಲಿಕೆಯಲ್ಲಿ ಜನಪ್ರತಿನಿಧಿಗಳ ಅಧಿಕಾರಾವಧಿ ಕೆಲವೇ ತಿಂಗಳಲ್ಲಿ ಮುಕ್ತಾಯವಾಗುತ್ತಿರುವ ಹಿನ್ನೆಲೆಯಲ್ಲಿ ಈ ಪ್ರವಾಸ ಕೈಗೊಳ್ಳಲಾಗುತ್ತಿದೆ ಎಂದು ತಿಳಿದುಬಂದಿದೆ.
ಮಂಡೂರಿಗೆ ಭೇಟಿ ನೀಡುತ್ತಾರಾ? : ಬೆಂಗಳೂರು ನಗರದ ಕಸ ತೆಗೆದುಕೊಂಡು ಹೋಗಿ ಸುರಿಯುತ್ತಿರುವ ಮಂಡೂರು ಘಟಕಕ್ಕೆ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ರಷ್ಯಾ ಪ್ರವಾಸಕ್ಕೆ ಹೊರಟಿರುವ ಬಿಬಿಎಂಪಿ ಪಾಲಿಕೆ ಸದಸ್ಯರು ಮಂಡೂರು ಭೇಟಿಯನ್ನು ಬಿಟ್ಟು ರಷ್ಯಾಕ್ಕೆ ಹಾರಿದ್ದಾರೆ.
ಮೇಯರ್ ಏನು ಹೇಳ್ತಾರೆ : ಪಾಲಿಕೆ ಸದಸ್ಯರ ವಿದೇಶ ಪ್ರವಾಸದ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಬಿಬಿಎಂಪಿ ಮೇಯರ್ ಕಟ್ಟೆ ಸತ್ಯನಾರಾಯಣ "ಬಿಬಿಎಂಪಿ ಸದಸ್ಯರ ಪ್ರವಾಸದ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ವೈಯಕ್ತಿಕವಾಗಿ ಅವರು ಪ್ರವಾಸ ಕೈಗೊಂಡಿರಬಹುದು" ಎಂದು ಹೇಳಿದ್ದಾರೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications