E-Khata: ಬೆಂಗಳೂರು ಆಸ್ತಿ ಮಾಲೀಕರಿಗೆ ಬಿಬಿಎಂಪಿ ಗುಡ್ನ್ಯೂಸ್, ಇ-ಖಾತೆ ಇಲ್ಲೂ ಲಭ್ಯ
ಬೆಂಗಳೂರು, ಜನವರಿ 28: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು (ಬಿಬಿಎಂಪಿ) ಲಕ್ಷಾಂತರ ಆಸ್ತಿಗಳ ಖಾತೆಗಳನ್ನು ಡಿಜಿಟಲೀಕರಣಗೊಳಿಸಿದೆ. ಈ ಕಾರ್ಯ ಮುಂದುವರಿದಿದ್ದು, ಅವುಗಳನ್ನು ವಿತರಣೆ ಕಾರ್ಯಕ್ಕೆ ವೇಗ ನೀಡುವ ನಿಟ್ಟಿನಲ್ಲಿ ಹೊಸ ನಿರ್ಧಾರ ಪ್ರಕಟಿಸಿದೆ. ಕಂದಾಯ ಅಧಿಕಾರಿಗಳ ಕಚೇರಿ, ಬೆಂಗಳೂರು ಒನ್ಗಳಲ್ಲಿ ಇ-ಖಾತೆ ನೀಡಿದಂತೆ ಇದೀಗ ಸೈಬರ್ ಕೆಫೆಗಳಲ್ಲಿ ಸಹ ಇ-ಖಾತಾ ನೀಡುವುದಾಗಿ ತಿಳಿಸಿದೆ.
ಖಾಸಗಿ ಸಹಭಾಗಿತ್ವದಲ್ಲಿ ಇ-ಖಾತೆ ನೀಡಲು ಬಿಬಿಎಂಪಿ ನಿರ್ಧರಿಸಿದ್ದು, ಶೀಘ್ರವೇ ಈ ಕುರಿತು ಆದೇಶ ಪ್ರಕಟಿಸಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ. ಇದರಿಂದ ಗ್ರಾಹಕರು/ಆಸ್ತಿ ಮಾಲೀಕರು ಮುಂದಿನ ದಿನಗಳಲ್ಲಿ ಬೆಂಗಳೂರು ಒನ್ ನಂತೆ ಹತ್ತಿರದ ಸೈಬರ್ ಕೆಫೆಗಳಲ್ಲೂ ಇ-ಖಾತೆ ಲಭ್ಯವಿವೆ.

ಬೆಂಗಳೂರಿನಂತಹ ಬೃಹತ್ ನಗರದಲ್ಲಿ ಆಸ್ತಿ ವಿವರಗಳನ್ನು ನಕಲಿ ಮಾಡಿ ಇತರರಿಗೆ ಆಸ್ತಿ ಮಾರಾಟ, ಇನ್ನಿತರ ಅಕ್ರಮಗಳ ತಡೆಗೆ ಮುಂದಾದ ಬಿಬಿಎಂಪಿ ಆಸ್ತಿಗಳ ವಿವರವನ್ನು ಡಿಜಿಟಲೀಕರಣಗೊಳಿಸುತ್ತಿದೆ. ಡಿಜಿಟಲೀಕರಣಗೊಂಡ ಉದ್ದೇಶಿತ 22 ಲಕ್ಷ ಇ-ಖಾತಾ ವಿತರಣೆ ಪೈಕಿ ಕೇವಲ ಒಂದು ಲಕ್ಷಕ್ಕೂ ಹೆಚ್ಚಿನ ಇ-ಖಾತಾಗಳು ವಿತರಣೆ ಆಗಿದೆ. ಈ ಕಾರ್ಯಕ್ಕೆ ವೇಗ ನೀಡುವ ಉದ್ದೇಶದಿಂದ ಸೈಬರ್ ಕೆಫೆಗಳಲ್ಲೂ ವಿತರಣೆಗೆ ಕ್ರಮ ವಹಿಸಲಾಗುವುದು ಎಂದರು.
ಇ-ಖಾತಾ ವಿತರಣೆ ಮುಂದಿನ ದಿನಗಳಲ್ಲಿ ನಿರೀಕ್ಷಿತ ಮಟ್ಟದಲ್ಲಿ ತಲುಪುವ ಉದ್ದೇಶದಿಂದ ಈ ನಿರ್ಧಾರ ಮಾಡಲಾಗಿದೆ. ರಾಜ್ಯದಲ್ಲಿ ಪಹಣಿ ವಿತರಣೆಯನ್ನು ಖಾಸಗಿ ಸಹಭಾಗಿತ್ವದಲ್ಲಿ ಅಂದರೆ ಖಾಸಗಿ ಯವರು ನೀಡಬಹುದಾಗಿದೆ. ಅದರಂತೆ ಪಾಸ್ಪೋರ್ಟ್ ವಿತರಣೆಯನ್ನು ಖಾಸಗಿಯವರಿಗೆ ನೀಡಲಾಗಿದೆ. ಇದೇ ಮಾದರಿಯಲ್ಲಿ ಡಿಜಿಟಲೀಕರಣಗೊಂಡ ಇ-ಖಾತಾಗಳನ್ನು ಸೈಬರ್ ಸೆಂಟರ್ಗಳಲ್ಲೂ ಶೀಘ್ರವೇ ವಿತರಣೆ ಆರಂಭವಾಗಲಿದೆ ಎಂದು ಅವರು ತಿಳಿಸಿದರು.
ಈಗಾಗಲೇ ಯಾರೆಲ್ಲ ಬಿಬಿಎಂಫಿ ವ್ಯಾಪ್ತಿಯಲ್ಲಿ ನೋಂದಣಿ ಮಾಡಿಕೊಂಡಿದ್ದಾರೋ ಅಂತಹ ಸೈಬರ್ ಕೆಫೆಗಳಿಗೆ ಸಂಪರ್ಕಿಸುವಂತೆ ತಿಳಿಸಲಾಗಿದೆ. ಅನುಮತಿ ಪಡೆದ ಸೈಬರ್ ಕೆಫೆಗಳು ಮಾತ್ರವೇ ಜನರಿಂದ ದಾಖಲಾತಿ ಪಡೆದು ಸೂಚಿತ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಲಿವೆ. ಅದನ್ನು ಸಂಬಂಧಿಸಿದ ಬಿಬಿಎಂಪಿ ಅಧಿಕಾರಿಗಳು ಪರಿಶೀಲಿಸುತ್ತಾರೆ. ಇದೆಲ್ಲ ಆಗಿ ಅಪ್ಲೋಡ್ ಆದ ಬಳಿಕ ನಿಮಗೆ ಸೈಬರ್ ಕೆಫೆಯಲ್ಲಿ ಇ-ಸಿಗುತ್ತವೆ.
45 ರೂಪಾಯಿಗೆ ಇ-ಖಾತೆ ಪಡೆಯಿರಿ
ಬಿಬಿಎಂಪಿ ಇ-ಖಾತೆಯನ್ನು ಸೈಬರ್ ಕೆಫೆಗಳಲ್ಲಿ ನೀಡಲು 45 ರೂಪಾಯಿ ನಿಗದಿ ಪಡಿಸಲಾಗಿದೆ. ಹೆಚ್ಚುವರಿಯಾಗಿ 05 ರೂಪಾಯಿ ಪಡೆಯಲು ಅವಕಾಶ ಇದೆ. ಸ್ಕ್ಯಾನ್ , ಝರಾಕ್ಸ್ ಸಂಬಂಧಿಸಿದಂತೆ ಐದು ರೂಪಾಯಿ ಹೆಚ್ಚುವರಿ ಪಡೆಯಬಹುದು. ಇದಕ್ಕಿಂತ ಹೆಚ್ಚಿನ ಹಣ ಪಡೆಯುವಂತಿಲ್ಲ ಎಂದು ಬಿಬಿಎಂಪಿ ಸೂಚನೆ ನೀಡಿದೆ. ಕೆಲವೇ ದಿನಗಳಲ್ಲಿ ಈ ಬಗ್ಗೆ ಆದೇಶ ಪ್ರಕಟವಾದ ಬಳಿಕ ಅದರಲ್ಲಿ ಎಲ್ಲ ಅಂಶಗಳು ಇರಲಿವೆ.
-
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ












Click it and Unblock the Notifications