ಬೆಂಗಳೂರಿನಲ್ಲಿ 20 ಹೊಸ ಉದ್ಯಾನವನಗಳನ್ನು ಅಭಿವೃದ್ಧಿಪಡಿಸಲು BBMP ನಿರ್ಧಾರ, ಎಲ್ಲೆಲ್ಲಿ?-ಮಾಹಿತಿ ತಿಳಿಯಿರಿ
ಬೆಂಗಳೂರು, ಜನವರಿ, 30: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯು 2024-25ರ ಅವಧಿಯಲ್ಲಿ ನಗರದಲ್ಲಿ 20 ಹೊಸ ಉದ್ಯಾನವನಗಳನ್ನು ಅಭಿವೃದ್ಧಿಪಡಿಸಲು ನಿರ್ಧರಿಸಿದೆ. ಹಾಗಾದರೆ ಎಲ್ಲೆಲ್ಲಿ ಪಾರ್ಕ್ಗಳನ್ನು ನಿರ್ಮಾಣ ಮಾಡಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ನಗರದ ಹೊರವಲಯದಲ್ಲಿ, ವಿಶೇಷವಾಗಿ ಬಿಬಿಎಂಪಿ ವ್ಯಾಪ್ತಿಗೆ ಸೇರ್ಪಡೆಗೊಂಡ 110 ಹಳ್ಳಿಗಳಲ್ಲಿ ಉದ್ಯಾನವನಗಳು ಬರಲಿವೆ ಮತ್ತು ಮಹದೇವಪುರ, ಯಲಹಂಕ, ದಾಸರಹಳ್ಳಿ, ಬೊಮ್ಮನಹಳ್ಳಿ ಮತ್ತು ಆರ್ಆರ್ನಗರ ವಲಯಗಳಲ್ಲಿ ನಿರ್ಮಾಣ ಮಾಡಲಾಗುತ್ತದೆ.

ಬಿಬಿಎಂಪಿ ಅಧಿಕಾರಿಗಳ ಪ್ರಕಾರ, ಬೇಲಿ ಹಾಕಿದ ಮತ್ತು ಬಳಕೆಯಾಗದೆ ಬಿದ್ದಿರುವ ಪಾಲಿಕೆ ಆಸ್ತಿಗಳಲ್ಲಿ ಉದ್ಯಾನವನಗಳನ್ನು ನಿರ್ಮಾಣ ಮಾಡಲಾಗುತ್ತದೆ. ಬೆಂಗಳೂರನ್ನು ಹಸಿರಾಗಿಡಲು ಬಿಬಿಎಂಪಿಯ ಪ್ರಯತ್ನದ ಭಾಗವಾಗಿ ಉದ್ಯಾನವನಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ .
ಪ್ರಾಜೆಕ್ಟ್ ವಿಭಾಗವು ಫೆನ್ಸಿಂಗ್, ಮಾರ್ಗಗಳು ಮತ್ತು ಇತರ ಸಿವಿಲ್ ಕಾಮಗಾರಿಗಳನ್ನು ನೋಡಿಕೊಳ್ಳುತ್ತದೆ. ಆದರೆ ತೋಟಗಾರಿಕೆ ವಿಭಾಗವು ನಿಂಬೆಯಂತಹ ಔಷಧೀಯ ಸಸ್ಯಗಳು ಸೇರಿದಂತೆ ಇತರ ಸಸ್ಯಗಳನ್ನು ನೆಡುವ ಜವಾಬ್ದಾರಿಯನ್ನು ಹೊತ್ತುಕೊಂಡಿದೆ.
ತೋಟಗಾರಿಕೆ ಇಲಾಖೆಯ ಅಧಿಕಾರಿಯೊಬ್ಬರು ಮಾತನಾಡಿ, ಪೌರಾಯುಕ್ತರ ಒಡೆತನದ ಹಲವು ಆಸ್ತಿಗಳು ಖಾಲಿ ಬಿದ್ದಿದ್ದು, ಅತಿಕ್ರಮಣ ತಡೆಯಲು ಬೇಲಿ ಹಾಕಲಾಗಿದೆ. ನಾವು ಬಿಬಿಎಂಪಿ ಕೇಂದ್ರ ಕಚೇರಿಗೆ ಪ್ರಸ್ತಾವನೆಯನ್ನು ಸಲ್ಲಿಸಿದ್ದೇವೆ. ಮತ್ತು ಮುಂಬರುವ 2024-25 ಬಿಬಿಎಂಪಿ ಬಜೆಟ್ನಲ್ಲಿ ಹಣ ಹಂಚಿಕೆಯನ್ನು ನಿರೀಕ್ಷಿಸುತ್ತಿದ್ದೇವೆ. ಈ ಹಂಚಿಕೆಯಾದ ಬಳಿಕ ನಾವು ವಿವರವಾದ ಯೋಜನಾ ವರದಿಯನ್ನು ಸಿದ್ಧಪಡಿಸುತ್ತೇವೆ ಎಂದು ಹೇಳಿದ್ದಾರೆ. ಇನ್ನು ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರಸ್ತುತ 1,146 ಪಾರ್ಕ್ಗಳಿವೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.
ಬೇವು, ಸೇಬಿನ ಮರಗಳನ್ನು ನೆಡಲು ಬಿಬಿಎಂಪಿ ಅರಣ್ಯ ವಿಭಾಗವು ಈ ನಡುವೆ ನಗರದಲ್ಲಿ ವಿಶೇಷವಾಗಿ ಬಿಬಿಎಂಪಿ ಉದ್ಯಾನವನಗಳಲ್ಲಿ ಬೇವು, ಸೇಬು, ಮಾವು ಸೇರಿದಂತೆ ಇತರ ಸಸಿಗಳನ್ನು ನೆಡಲು ನಿರ್ಧರಿಸಿದೆ.
ಅಲಂಕಾರಿಕಾ ಸಸ್ಯಗಳು ಜನರನ್ನು ಆಕರ್ಷಿಸುತ್ತವೆ ಎಂದು ನಮಗೆ ತಿಳಿದಿದೆ. ಆದರೆ ಅವು ಉಪಯುಕ್ತವಲ್ಲ, ಆದ್ದರಿಂದ, ನಾವು ಬೇವು, ಮಾವು, ನಿಂಬೆ, ಮರ, ಸೇಬು ಮತ್ತು ಇತರ ಮರಗಳನ್ನು ಬೆಳೆಯಲು ನಿರ್ಧರಿಸಿದ್ದೇವೆ. ಮಕ್ಕಳು ಹಣ್ಣುಗಳನ್ನು ಆನಂದಿಸಬಹುದು. ಮತ್ತು ಸ್ಥಳೀಯರು ಹಬ್ಬ ಹರಿದಿನಗಳಲ್ಲಿ ಬೇವು ಮತ್ತು ಮಾವಿನ ಎಲೆಗಳನ್ನು ತೆಗೆದುಕೊಳ್ಳಬಹುದು. ಇದಕ್ಕೆ ಇಂತಹ ಮರಗಳನ್ನು ನೆಡಲಾಗುತ್ತದೆ. ಹಾಗೆಯೇ ನಗರದಲ್ಲಿ ಸಾರ್ವಜನಿಕರಿಗೆ ಉಪಯುಕ್ತವಾದ ಹಣ್ಣುಗಳು ಮತ್ತು ಇತರ ಮರಗಳನ್ನು ನಾವು ಬೆಳೆಸುತ್ತೇವೆ, ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
'ಹಸಿರು ಬೆಂಗಳೂರು' ಎಂಬ ಶಿರ್ಷಿಕೆಯಡಿ ಪಾಲಿಕೆಯು ನಗರದಾದ್ಯಂತ ಒಂದು ಲಕ್ಷಕ್ಕೂ ಹೆಚ್ಚು ಸಸಿಗಳನ್ನು ನೆಡಲಿದೆ. ಅವುಗಳಲ್ಲಿ ಹೆಚ್ಚಿನವು ಮರದ ಸೇಬು ಮತ್ತು ಬೇವಿನ ಆಗಿರುತ್ತವೆ ಎಂದು ತಿಳಿಸಿದರು.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications