ಡಿಸೆಂಬರ್ನಲ್ಲಿ ಬಿಬಿಎಂಪಿ ಉಪಮೇಯರ್ ಆಯ್ಕೆ, ರೇಸಿನಲ್ಲಿ ಯಾರ್ಯಾರು?
ಬೆಂಗಳೂರು, ನವೆಂಬರ್ 21: ಬಿಬಿಎಂಪಿ ಉಪಮೇಯರ್ ರಮಿಳಾ ಉಮಾಶಂಕರ್ ಅವರ ಅಕಾಲಿಕ ಮರಣದಿಂದ ತೆರವಾದ ಸ್ಥಾನಕ್ಕೆ ಡಿಸೆಂಬರ್ 7 ರಂದು ಚುನಾವಣೆ ನಡೆಯು ಸಾಧ್ಯತೆ ಇದೆ. ಜೊತೆಗೆ ಸ್ಥಾಯಿ ಸಮಿತಿ ಸದಸ್ಯರ ಆಯ್ಕೆಯೂ ನಡೆಯಲಿದೆ.
ಬಿಬಿಎಂಪಿ ಉಪಮೇಯರ್ ಆಗಿ ಆಯ್ಕೆಯಾಗಿದ್ದ ಜೆಡಿಎಸ್ನ ರಮಿಳಾ ಉಮಾಶಂಕರ್ ಅವರು ಉಪಮೇಯರ್ ಆದ ಕೆಲವೇ ದಿನಗಳಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದರು. ಅಂದಿನಿಂದ ಉಪಮೇಯರ್ ಸ್ಥಾನ ಖಾಲಿ ಇತ್ತು.
12 ಸ್ಥಾಯಿ ಸಮಿತಿಗಳಿಗೆ ತಲಾ 11 ರಂತೆ ಸದಸ್ಯರನ್ನು ಸಹ ಆಯ್ಕೆ ಮಾಡಬೇಕಿದ್ದು, ಅದನ್ನೂ ಸಹ ಉಪಮೇಯರ್ ಆಯ್ಕೆ ಜೊತೆಯಾಗಿಯೇ ಮಾಡಲು ಆಯುಕ್ತರು ಯೋಜಿಸಿದ್ದಾರೆ. ಉಪಮೇಯರ್ ಆಯ್ಕೆಯು ನವೆಂಬರ್ನಲ್ಲೇ ನಡೆಯಬೇಕಿತ್ತು. ಆದರೆ ಸಚಿವ ಅನಂತ್ಕುಮಾರ್ ನಿಧನ ಹಾಗೂ ಉಗ್ರಪ್ಪ ಸಂಸದರಾಗಿ ಆಯ್ಕೆ ಆದ ಕಾರಣ ಮತದಾರರ ಪಟ್ಟಿ ಪರಿಷ್ಟರಣೆಗೆ ಮನವಿ ಮಾಡಲಾಗಿತ್ತು. ಪಟ್ಟಿ ಪರಿಷ್ಕರಣೆ ಆಗಿ ಬಂದಿದ್ದು ಕೆಲವೇ ದಿನಗಳಲ್ಲಿ ಚುನಾವಣೆ ಅಧಿಸೂಚನೆ ಹೊರಡಿಸಲಾಗುತ್ತದೆ.

ಜೆಡಿಎಸ್ಗೆ ಉಪಮೇಯರ್, ಕೈಗೆ ಮೇಯರ್
ಮೇಯರ್-ಉಪಮೇಯರ್ ಆಯ್ಕೆ ಸಂದರ್ಭ ಕಾಂಗ್ರೆಸ್ನ ಗಂಗಾಂಬಿಕೆ ಮಲ್ಲಿಕಾರ್ಜುನ್ ಅವರಿಗೆ ಮೇಯರ್ ಸ್ಥಾನ ಜೆಡಿಎಸ್ನರಮಿಳಾ ಉಮಾಶಂಕರ್ ಅವರಿಗೆ ಉಪಮೇಯರ್ ಸ್ಥಾನ ಒಲಿದಿತ್ತು. ಈಗಲೂ ಸಹ ಉಪಮೇಯರ್ ಸ್ಥಾನ ಜೆಡಿಎಸ್ ಬಳಿಯೇ ಇರಲಿದೆ. ಆದರೆ ಈ ಬಾರಿ ಪಕ್ಷೇತರರು ತಮಗೆ ಉಪಮೇಯರ್ ಸ್ಥಾನ ನೀಡುವಂತೆ ಒತ್ತಾಯಿಸುತ್ತಿದ್ದಾರೆ.

ಪಕ್ಷೇತರರಿಂದ ಬೇಡಿಕೆ
ತಮ್ಮ ಬೆಂಬಲದಿಂದಲೇ ಬಿಬಿಎಂಪಿಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಯಾಗಿ ಆಡಳಿತ ನಡೆಸಲು ಸಾಧ್ಯವಾಗುತ್ತಿದೆ. ಹಾಗಾಗಿ ಉಪಮೇಯರ್ ಸ್ಥಾನವನ್ನು ನಮ್ಮಲ್ಲಿ ಒಬ್ಬರಿಗೆ ನೀಡಬೇಕು ಎಂದು ಪಕ್ಷೇತರರು ಒತ್ತಾಯ ಮಾಡುತ್ತಿದ್ದಾರೆ. ಒಟ್ಟು ಏಳು ಜನ ಪಕ್ಷೇತರರು ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ಬೆಂಬಲ ನೀಡಿದ್ದಾರೆ.

ಮೂರು ಸದಸ್ಯರ ನಡುವೆ ಪೈಪೋಟಿ
ಪಕ್ಷೇತರರ ಈ ಬಿಗಿಪಟ್ಟಿನ ನಡುವೆಯೂ ಉಪಮೇಯರ್ ಸ್ಥಾನಕ್ಕಾಗಿ ಜೆಡಿಎಸ್ ಸದಸ್ಯರಾದ ನಾಗಪುರ ವಾರ್ಡ್ನ ಭದ್ರೇಗೌಡ, ವಿಶ್ವನಾಥ್ ನಾಗೇನಹಳ್ಳಿ ವಾರ್ಡ್ನ ರಾಜಶೇಖರ್ ಹಾಗೂ ಪಾಲಿಕೆಯಲ್ಲಿ ಜೆಡಿಎಸ್ ಗುಂಪಿನ ನಾಯಕಿಯಾಗಿರುವ ನೇತ್ರಾ ನಾರಾಯಣ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.

ವಿಶ್ವನಾಥ, ಬಂಡೆಪ್ಪ ಕಾಶೆಂಪುರ ಪ್ರಭಾವ
ರಮಿಳಾ ಉಮಾಶಂಕರ್ ಅವರು ಉಪಮೇಯರ್ ಆಗುವಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ ಹಾಗೂ ಸಚಿವ ಬಂಡೆಪ್ಪ ಕಾಶೆಂಪುರ ಅವರ ಕೃಪೆ ಇತ್ತು. ಈ ಬಾರಿ ಸಹ ಉಪಮೇಯರ್ ಆಯ್ಕೆಯಲ್ಲಿ ಅವರು ಪ್ರಭಾವ ಬೀರಲಿದ್ದಾರೆ. ನಾಗೇನಹಳ್ಳಿ ವಾರ್ಡ್ನ ರಾಜಶೇಖರ್ ಅವರ ಹೆಸರು ಉಪಮೇಯರ್ ಸ್ಥಾನಕ್ಕೆ ಮುಂಚೂಣಿಯಲ್ಲಿದೆ.
-
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?











Click it and Unblock the Notifications