ಹೋಟೆಲ್ ಗಳಲ್ಲಿ ಉಚಿತವಾಗಿ ಕುಡಿಯುವ ನೀರು ನೀಡಲೇಬೇಕು!
ಹೋಟೆಲ್ ಗಳಲ್ಲಿ ಉಚಿತವಾಗಿ ಕುಡಿಯುವ ನೀರು ನೀಡಲೇಬೇಕು ಎಂದು ಬಿಬಿಎಂಪಿ ಆದೇಶ ಹೊರಡಿಸಿದೆ.
ಬೆಂಗಳೂರು, ಜೂನ್ 13: ನಗರದ ಎಲ್ಲಾ ಹೋಟೆಲ್ ಗಳಲ್ಲಿ ಉಚಿತವಾಗಿ ಕುಡಿಯುವ ನೀರು ನೀಡಲೇಬೇಕು ಎಂದು ಬಿಬಿಎಂಪಿ ಆದೇಶ ಹೊರಡಿಸಿದೆ. ಹೀಗಾಗಿ, ಯಾವುದೇ ಹೋಟೆಲ್, ರೆಸ್ಟೋರೆಂಟ್ , ಮಲ್ಟಿಪ್ಲೆಕ್ಸ್ ಫುಡ್ ಕೋರ್ಟ್ ಗಳಲ್ಲಿ ಇನ್ಮುಂದೆ ದುಡ್ಡು ಕೊಟ್ಟು ನೀರು ಖರೀದಿಸಬೇಕಾಗಿಲ್ಲ.
ಈ ಆದೇಶ ಕೆಎಫ್ ಸಿ, ಪಿಜ್ಜಾ ಹಟ್ ಗಳಿಗೂ ಅನ್ವಯವಾಗಲಿದೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಹೇಳಿದ್ದಾರೆ.
ಕುಡಿಯುವ ನೀರಿನ ಬಾಟಲ್ ಗೆ ನಿಗದಿತ ದರಕ್ಕಿಂತ ಹೆಚ್ಚಿನ ದರಕ್ಕೆ ಮಾರುತ್ತಿರುವ ಮಲ್ಟಿಪ್ಲೆಕ್ಸ್ ಮತ್ತು ವಿವಿಧ ಮಾಲ್ ಗಳಿಗೆ ರಾಜ್ಯ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ ನೀಡಿರುವುದನ್ನು ಇಲ್ಲಿ ಸ್ಮರಿಸಬಹುದು.

ಕುಡಿಯುವ ನೀರಿನ ಬಾಟಲಿಗಾಗಿ ಹೆಚ್ಚಿನ ಮೊತ್ತ ಆಗ್ರಹಿಸಿದರೆ, ಮೊದಲ ಬಾರಿ ತಪ್ಪು ಮಾಡಿದರೆ 2,000 ರು. ದಂಡ. ಪುನರಾವರ್ತನೆ ಮಾಡಿದರೆ 6 ತಿಂಗಳು ಜೈಲು ಶಿಕ್ಷೆ ವಿಧಿಸಲಾಗುತ್ತದೆ.
ಆಹಾರ ಇಲಾಖೆ ಅಧಿಕಾರಿಗಳು ಇತ್ತೀಚೆಗೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮಳಿಗೆ, ಮಲ್ಟಿಪ್ಲೆಕ್ಸ್ ಫುಡ್ ಕೋರ್ಟ್ ಸೇರಿದಂತೆ ವಿವಿಧೆಡೆ ದಾಳಿ ನಡೆಸಿ ದಂಡ ವಿಧಿಸಿದ್ದರು. ಪಂಚತಾರಾ ಹೋಟೆಲ್ ಗಳಲ್ಲೂ ದುಬಾರಿ ಬೆಲೆಗೆ ಕುಡಿಯುವ ನೀರು ಮಾರಾಟ ಬಗ್ಗೆ ಎಚ್ಚರ ವಹಿಸಲಾಗಿತ್ತು.
ಥ್ಯಾಂಕ್ಸ್ ಟು ಸುಧಾ: ಸುಧಾ ಕತ್ವಾ ಎಂಬ ಮಹಿಳೆ ಕಳೆದ ವರ್ಷ ಕೆಎಫ್ ಸಿ ಮಳಿಗೆ ಭೇಟಿ ನೀಡಿದ್ದಾಗ, ಕುಡಿಯಲು ನೀರು ಕೇಳಿದ್ದಾರೆ. ನೀರು ಕೊಡುವುದಿಲ್ಲ. ಬೇಕಾದರೆ ಬಾಟಲಿ ನೀರು ಖರೀದಿಸಿ ಎಂದು ಮಳಿಗೆಯವರು ಹೇಳಿದ್ದಾರೆ. ಇದರ ವಿರುದ್ಧ ಗ್ರಾಹಕರ ಕೋರ್ಟಿನಲ್ಲಿ ಸುಧಾ ಅವರು ದೂರು ದಾಖಲಿಸಿದ್ದರು.
ಈಗ ಸುಧಾ ಪರವಾಗಿ ತೀರ್ಪು ಬಂದಿದ್ದು, ಉಚಿತ, ಪರಿಶುದ್ಧ ನೀರನ್ನು ಎಲ್ಲಾ ಗ್ರಾಹಕರಿಗೂ ನೀಡುವಂತೆ ಆದೇಶ ಹೊರಡಿಸಲು ಬೃಹತ್ ಬೆಂಗಳೂರು ಮಹಾ ನಗರ ಪಾಲಿಕೆ(ಬಿಬಿಎಂಪಿ) ಗೆ ಸೂಚಿಸಲಾಗಿದೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ












Click it and Unblock the Notifications