ಉಪಮೇಯರ್ ರಮೀಳಾ ವಿಧಿವಶ: ಗಣ್ಯರು ಏನಂದರು?
Recommended Video

ಬೆಂಗಳೂರು, ಅಕ್ಟೋಬರ್ 05: ಹೃದಯಾಘಾತದಿಂದ ಕೊನೆಯುಸಿರೆಳೆದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಉಪಮೇಯರ್ ರಮೀಳಾ ಉಮಾಂಕರ್ ಅವರ ನಿಧನಕ್ಕೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಸೇರಿದಂತೆ ಹಲವು ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಜೆಡಿಎಸ್ ನವರೇ ಆಗಿದ್ದ ರಮೀಳಾ ಕಾವೇರಿಪುರ ವಾರ್ಡ್ ನಿಂದ 2015 ರಲ್ಲಿ ಗೆದ್ದು, ಕಾರ್ಪೋರೇಟರ್ ಆಗಿದ್ದರು.

ಕಂಬನಿ ಮಿಡಿದ ದೇವೇಗೌಡರು
ಉಪ ಮಹಾಪೌರರಾದ ಶ್ರೀಮತಿ ರಮೀಳಾ ಉಮಾಶಂಕರ್ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ಬಹಳ ನೋವುಂಟಾಗಿದೆ. ಅತೀ ಚಿಕ್ಕ ವಯಸ್ಸಿನಲ್ಲೇ ಸಮಾಜದ ಬಗ್ಗೆ ಉತ್ತಮ ಕಾಳಜಿ ಹೊಂದಿದ್ದ ಕ್ರಿಯಾಶೀಲ ಮಹಿಳೆ ಅವರು. ಭಗವಂತ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ತುಂಬಲಿ, ಮೃತರ ಆತ್ಮಕ್ಕೆ ಚಿರಶಾಂತಿ ನೀಡಲಿ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಟ್ವೀಟ್ ಮಾಡಿ ಕಂಬನಿ ಮೀಡಿದಿದ್ದಾರೆ.
| Array |
ಪಿಸಿ ಮೋಹನ್ ಸಂತಾಪ
ಉಪಮೇಯರ್ ರಮೀಳಾ ಉಮಾಶಂಕರ್ ನಿಧನದ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ನಿನ್ನೆಯಷ್ಟೆ ಮೆಟ್ರೊ ಕಾರ್ಯಕ್ರಮದಲ್ಲಿ ಅವರೊಂದಿಗೆ ನಾನು ಕೂಡ ಭಾಗವಹಿಸಿದ್ದೆ. ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ ಅವರ ಹಠಾತ್ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬಿಜೆಪಿ ಸಂಸದ ಪಿಸಿ ಮೋಹನ್ ಟ್ವೀಟ್ ಮಾಡಿದ್ದಾರೆ.

ಯಡಿಯೂರಪ್ಪ ಅವರಿಂದ ನುಡಿ ನಮನ
ಬಿಬಿಎಂಪಿಯ ಉಪಮೇಯರ್ ಶ್ರೀಮತಿ ರಮೀಳಾ ಉಮಾಶಂಕರ್ ರವರ ಅಕಾಲಿಕ ನಿಧನವು ಅತೀವ ನೋವು ತಂದಿದೆ. ಸಕ್ರಿಯ ಜನಪ್ರತಿನಿಧಿಯಾಗಿದ್ದ ಅವರನ್ನು ದೇವರು ಇಷ್ಟು ಬೇಗ ಕರೆಸಿಕೊಳ್ಳಬಾರದಿತ್ತು. ಭಗವಂತನು ಅವರ ಆತ್ಮಕ್ಕೆ ಸದ್ಗತಿ ಕರುಣಿಸಲಿ ಹಾಗೂ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ನುಡಿನಮನ ಸಲ್ಲಿಸಿದ್ದಾರೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ.

ಸಂತಾಪ ಸೂಚಿಸಿದ ಉಪಮುಖ್ಯಮಂತ್ರಿ
ಇತ್ತೀಚೆಗಷ್ಟೇ ಉಪಮೇಯರ್ ಆಗಿ ಆಯ್ಕೆಯಾಗಿದ್ದ ರಮೀಳಾ ಉಮಾಶಂಕರ್ ಅವರು ನಮ್ಮನ್ನಗಲಿದ್ದಾರೆ ಎಂದು ನಂಬಲಿಕ್ಕೆ ಸಾಧ್ಯವಾಗುತ್ತಿಲ್ಲ. ಈ ಸುದ್ದಿ ತೀವ್ರ ಆಘಾತವನ್ನುಂಟು ಮಾಡಿದೆ. ಅವರ ಆತ್ಮಕ್ಕೆ ಶಾಂತಿ ಹಾಗೂ ಅವರ ಕುಟುಂಬಕ್ಕೆ ಇದನ್ನು ಭರಿಸುವ ಶಕ್ತಿ ದೊರಕಲಿ ಎಂದು ಉಪಮುಖ್ಯಮಂತ್ರಿ ಜಿ ಪರಮೇಶ್ವರ್ ಟ್ವೀಟ್ ಮಾಡಿದ್ದಾರೆ.
-
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price












Click it and Unblock the Notifications