ಅಧಿಕಾರ ವಹಿಸಿಕೊಂಡ ಮರುದಿನವೇ ಉಪಮೇಯರ್ ವಿಧಿವಶ
Recommended Video

ಬೆಂಗಳೂರು, ಅಕ್ಟೋಬರ್ 05: ದುರಂತ ಎಂದರೆ ಇದೇ ಇರಬೇಕು! ಉಪಮೇಯರ್ ಆಗಿ ಸೆ.28 ರಂದು ಆಯ್ಕೆಯಾಗಿ, ನಂತರ ಅ.3 ರಂದು ಅಧಿಕಾರ ವಹಿಸಿಕೊಂಡ ಮರುದಿನವೇ ರಮೀಳಾ ಉಮಾಶಂಕರ್ ನಿಧನರಾಗಿದ್ದಾರೆ.
ಕೇವಲ 44 ವರ್ಷ ವಯಸ್ಸು, ಸಾಯುವ ವಯಸ್ಸಲ್ಲವೇ ಅಲ್ಲ. ಆದರೆ ಇದ್ದಕ್ಕಿದ್ದಂತೆ ಕಾಣಿಸಿಕೊಂಡ ಎದೆನೋವಿನಿಂದಾಗಿ ಅ.04 ರ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾದರು.
ಉಪಮೇಯರ್ ಅವರ ಅಕಾಲಿಕ ಮರಣಕ್ಕೆ ನೂರಾರು ಗಣ್ಯರು ಕಂಬನಿ ಮಿಡಿದಿದ್ದಾರೆ. ಅವರ ಅಗಲಿಕೆ ತುಂಬಲಾರದ ನಷ್ಟ ಎಂದಿರುವ ಗಣ್ಯರು, ಉಪಮೇಯರ್ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

ಅ.3 ರಂದು ಅಧಿಕಾರ ಸ್ವೀಕಾರ, 4 ರಂದು ನಿಧನ!
ಉಪಮೇಯರ್ ಆದ ಖುಷಿಯಲ್ಲಿದ್ದ ರಮೀಳಾ ಅಕ್ಟೋಬರ್ 3 ರಂದು ತಮ್ಮ ಬಿಬಿಎಂಪಿ ಕಚೇರಿಯಲ್ಲಿ ಪೂಜೆ ಸಲ್ಲಿಸಿ ಅಧಿಕಾರ ವಹಿಸಿಕೊಂಡರು. ತಮ್ಮ ಅಧಿಕಾರಾವಧಿಯಲ್ಲಿ ಸಾಕಷ್ಟು ಜನಪರ ಕಾರ್ಯಗಳನ್ನು ಮಾಡುವ ಇಂಗಿತ ಹೊಂದಿದ್ದ ಅವರು ಮಹತ್ವಾಕಾಂಕ್ಷಿಯೂ ಆಗಿದ್ದರು.

ಉಪಮೇಯರ್ ಸ್ಥಾನ ಗೆದ್ದರೂ, ಸಾವು ಗೆಲ್ಲಲಿಲ್ಲ!
ಜಟಾಪಟಿಯ ನಡುವೆಯೇ ಉಪಮೇಯರ್ ಆಗಿ ಆಯ್ಕೆಯಾದ ರಮೀಳಾ ಉಪಮೇಯರ್ ಸ್ಥಾನ ಗೆದ್ದರಾದರೂ ಸಾವನ್ನು ಗೆಲ್ಲಲಾಗದೆ ಇದ್ದಿದ್ದು ದುರದೃಷ್ಟ. ಕಾವೇರಿಪುರ ವಾರ್ಡ್ ನಿಂದ ಜೆಡಿಎಸ್ ಕಾರ್ಪೋರೇಟರ್ ಆಗಿ 2015 ರಲ್ಲಿ ಆಯ್ಕೆಯಾಗಿದ್ದ ರಮೀಳಾ ಸೆ.28 ರಂದು ಉಪಮೇಯರ್ ಆಗಿ ಆಯ್ಕೆಯಾಗಿದ್ದರು.

ದಿನಪೂರ್ತಿ ಕಾರ್ಯಕ್ರಮದಲ್ಲೇ ಇದ್ದ ರಮೀಳಾ
ಅ.4 ರಂದು ಬೆಳಗ್ಗಿನಿಂದಲೂ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರ ಜೊತೆಯಲ್ಲೇ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅವರು ಲವಲವಿಕೆಯಲ್ಲೇ ಇದ್ದರು. ಕೆಲಸದ ಒತ್ತಡವೋ ಅಥವಾ ಆಯಾಸಕ್ಕೋ ರಾತ್ರಿ ಎದೆನೋವು ಎಂದು ಬಳಲುತ್ತಿದ್ದ ಅವರನ್ನು ತಕ್ಷಣವೇ ವೆಸ್ಟ್ ಆಫ್ ಕಾರ್ಡ್ ರೋಡ್ ನ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲೇ ನಿಧನರಾದರು.

ಮುಗಿಲುಮುಟ್ಟಿದ ಆಕ್ರಂದನ
ರಮೀಳಾ ಉಮಾಶಂಕರ್ ಅವರ ಅಕಾಲಿಕ ಮರಣಕ್ಕೆ ಕುಟುಂಬ ವರ್ಗ ತೀವ್ರ ನೋವು ವ್ಯಕ್ತಪಡಿಸಿದ್ದು, ಆಕ್ರಂದನ ಮುಗಿಲುಮುಟ್ಟಿದೆ. ಅವರು ಪತಿ ಉಮಾಶಂಕರ್ ಮತ್ತು ಓರ್ವ ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರವಿದ್ದು ಕಾಂಗ್ರೆಸ್ ಮೇಯರ್ ಪಟ್ಟ, ಜೆಡಿಎಸ್ ಉಪ ಮೇಯರ್ ಪಟ್ಟ ಹಂಚಿಕೊಂಡಿವೆ. ಜಯನಗರ ವಾರ್ಡ್ ನ ಗಂಗಾಬಿಕೆ ಮಲ್ಲಿಕಾರ್ಜುನ್ ಮೇಯರ್ ಆಗಿ, ರಮೀಳಾ ಅವರು ಉಪ ಮೇಯರ್ ಆಗಿ ಆಯ್ಕೆಯಾಗಿದ್ದರು.
-
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications