ಅಧಿಕಾರ ವಹಿಸಿಕೊಂಡ ಮರುದಿನವೇ ಉಪಮೇಯರ್ ವಿಧಿವಶ
Recommended Video

ಬೆಂಗಳೂರು, ಅಕ್ಟೋಬರ್ 05: ದುರಂತ ಎಂದರೆ ಇದೇ ಇರಬೇಕು! ಉಪಮೇಯರ್ ಆಗಿ ಸೆ.28 ರಂದು ಆಯ್ಕೆಯಾಗಿ, ನಂತರ ಅ.3 ರಂದು ಅಧಿಕಾರ ವಹಿಸಿಕೊಂಡ ಮರುದಿನವೇ ರಮೀಳಾ ಉಮಾಶಂಕರ್ ನಿಧನರಾಗಿದ್ದಾರೆ.
ಕೇವಲ 44 ವರ್ಷ ವಯಸ್ಸು, ಸಾಯುವ ವಯಸ್ಸಲ್ಲವೇ ಅಲ್ಲ. ಆದರೆ ಇದ್ದಕ್ಕಿದ್ದಂತೆ ಕಾಣಿಸಿಕೊಂಡ ಎದೆನೋವಿನಿಂದಾಗಿ ಅ.04 ರ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾದರು.
ಉಪಮೇಯರ್ ಅವರ ಅಕಾಲಿಕ ಮರಣಕ್ಕೆ ನೂರಾರು ಗಣ್ಯರು ಕಂಬನಿ ಮಿಡಿದಿದ್ದಾರೆ. ಅವರ ಅಗಲಿಕೆ ತುಂಬಲಾರದ ನಷ್ಟ ಎಂದಿರುವ ಗಣ್ಯರು, ಉಪಮೇಯರ್ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

ಅ.3 ರಂದು ಅಧಿಕಾರ ಸ್ವೀಕಾರ, 4 ರಂದು ನಿಧನ!
ಉಪಮೇಯರ್ ಆದ ಖುಷಿಯಲ್ಲಿದ್ದ ರಮೀಳಾ ಅಕ್ಟೋಬರ್ 3 ರಂದು ತಮ್ಮ ಬಿಬಿಎಂಪಿ ಕಚೇರಿಯಲ್ಲಿ ಪೂಜೆ ಸಲ್ಲಿಸಿ ಅಧಿಕಾರ ವಹಿಸಿಕೊಂಡರು. ತಮ್ಮ ಅಧಿಕಾರಾವಧಿಯಲ್ಲಿ ಸಾಕಷ್ಟು ಜನಪರ ಕಾರ್ಯಗಳನ್ನು ಮಾಡುವ ಇಂಗಿತ ಹೊಂದಿದ್ದ ಅವರು ಮಹತ್ವಾಕಾಂಕ್ಷಿಯೂ ಆಗಿದ್ದರು.

ಉಪಮೇಯರ್ ಸ್ಥಾನ ಗೆದ್ದರೂ, ಸಾವು ಗೆಲ್ಲಲಿಲ್ಲ!
ಜಟಾಪಟಿಯ ನಡುವೆಯೇ ಉಪಮೇಯರ್ ಆಗಿ ಆಯ್ಕೆಯಾದ ರಮೀಳಾ ಉಪಮೇಯರ್ ಸ್ಥಾನ ಗೆದ್ದರಾದರೂ ಸಾವನ್ನು ಗೆಲ್ಲಲಾಗದೆ ಇದ್ದಿದ್ದು ದುರದೃಷ್ಟ. ಕಾವೇರಿಪುರ ವಾರ್ಡ್ ನಿಂದ ಜೆಡಿಎಸ್ ಕಾರ್ಪೋರೇಟರ್ ಆಗಿ 2015 ರಲ್ಲಿ ಆಯ್ಕೆಯಾಗಿದ್ದ ರಮೀಳಾ ಸೆ.28 ರಂದು ಉಪಮೇಯರ್ ಆಗಿ ಆಯ್ಕೆಯಾಗಿದ್ದರು.

ದಿನಪೂರ್ತಿ ಕಾರ್ಯಕ್ರಮದಲ್ಲೇ ಇದ್ದ ರಮೀಳಾ
ಅ.4 ರಂದು ಬೆಳಗ್ಗಿನಿಂದಲೂ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರ ಜೊತೆಯಲ್ಲೇ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅವರು ಲವಲವಿಕೆಯಲ್ಲೇ ಇದ್ದರು. ಕೆಲಸದ ಒತ್ತಡವೋ ಅಥವಾ ಆಯಾಸಕ್ಕೋ ರಾತ್ರಿ ಎದೆನೋವು ಎಂದು ಬಳಲುತ್ತಿದ್ದ ಅವರನ್ನು ತಕ್ಷಣವೇ ವೆಸ್ಟ್ ಆಫ್ ಕಾರ್ಡ್ ರೋಡ್ ನ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲೇ ನಿಧನರಾದರು.

ಮುಗಿಲುಮುಟ್ಟಿದ ಆಕ್ರಂದನ
ರಮೀಳಾ ಉಮಾಶಂಕರ್ ಅವರ ಅಕಾಲಿಕ ಮರಣಕ್ಕೆ ಕುಟುಂಬ ವರ್ಗ ತೀವ್ರ ನೋವು ವ್ಯಕ್ತಪಡಿಸಿದ್ದು, ಆಕ್ರಂದನ ಮುಗಿಲುಮುಟ್ಟಿದೆ. ಅವರು ಪತಿ ಉಮಾಶಂಕರ್ ಮತ್ತು ಓರ್ವ ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರವಿದ್ದು ಕಾಂಗ್ರೆಸ್ ಮೇಯರ್ ಪಟ್ಟ, ಜೆಡಿಎಸ್ ಉಪ ಮೇಯರ್ ಪಟ್ಟ ಹಂಚಿಕೊಂಡಿವೆ. ಜಯನಗರ ವಾರ್ಡ್ ನ ಗಂಗಾಬಿಕೆ ಮಲ್ಲಿಕಾರ್ಜುನ್ ಮೇಯರ್ ಆಗಿ, ರಮೀಳಾ ಅವರು ಉಪ ಮೇಯರ್ ಆಗಿ ಆಯ್ಕೆಯಾಗಿದ್ದರು.
-
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications