ಬಸವನಗುಡಿಯಲ್ಲಿ ಬಿಬಿಎಂಪಿಯ ಮೊದಲ ಇ ಟಾಯ್ಲೆಟ್
ಬೆಂಗಳೂರು, ಜು.15: ನಗರದಲ್ಲಿ ಬಿಬಿಎಂಪಿ'ಇ-ಶೌಚಾಲಯ' ನಿರ್ಮಿಸುತ್ತಿದ್ದು ಸದ್ಯದಲ್ಲೇ ಸಾರ್ವಜನಿಕರ ಬಳಕೆಗೆ ಲಭ್ಯವಾಗಲಿದೆ.ಆರಂಭಿಕ ಹಂತದಲ್ಲಿ ನಗರದ ಬಸವನಗುಡಿಯ ಕೃಷ್ಣರಾವ್ ಪಾರ್ಕ್ನಲ್ಲಿ ಇ-ಶೌಚಾಲಯ ಜೋಡಣೆ ಕಾರ್ಯ ಆರಂಭವಾಗಿದೆ.[ಬೆಂಗಳೂರಿನಲ್ಲಿ ಇ-ಶೌಚಾಲಯ ಸ್ಥಾಪಿಸಲಿದೆ ಬಿಬಿಎಂಪಿ]
ಇರಾಮ್ ವೈಜ್ಞಾನಿಕ ಇ- ಟಾಯ್ಲೆಟ್ ಕಂಪನಿಯ ಜೊತೆಗೆ ಬಿಬಿಎಂಪಿ ಒಪ್ಪಂದ ಮಾಡಿಕೊಂಡಿದ್ದು, ಮೊದಲಿಗೆ ನಗರದ 100 ಸ್ಥಳಗಳಲ್ಲಿ ಇ ಶೌಚಾಲಯ ಸ್ಥಾಪನೆ ಮಾಡಲು ನಿರ್ಧರಿಸಿದೆ. ಬಳಿಕ ಎಲ್ಲಾ 198 ವಾರ್ಡ್ಗಳ ಪ್ರಮುಖ ರಸ್ತೆ, ಉದ್ಯಾನ, ಬಸ್ ತಂಗುದಾಣ, ಜನಸಂದಣಿ ಇರುವ ಪ್ರದೇಶಗಳಲ್ಲಿ ನಿರ್ಮಾಣ ಮಾಡಲು ಬಿಬಿಎಂಪಿ ಚಿಂತನೆ ನಡೆಸಿದೆ.[ಕೃಷ್ಣರಾವ್ ಪಾರ್ಕ್ ಅಭಿವೃದ್ಧಿಗೆ ಕ್ರಮ: ಅನಂತಕುಮಾರ್]

45 ಚದರ ಅಡಿ ವಿಸ್ತೀರ್ಣದಲ್ಲಿ ನಿರ್ಮಾಣ
ಇ- ಶೌಚಾಲಯವನ್ನು 45 ಚದರ ಅಡಿ ವಿಸ್ತೀರ್ಣದಲ್ಲಿ ಇದನ್ನು ನಿರ್ಮಿಸಬಹುದು. ಶೌಚಾಲಯದ ವ್ಯವಸ್ಥೆಗಳೆಲ್ಲಾ ಯಾಂತ್ರೀಕೃತವಾಗಿ ನಡೆಯಲಿದೆ. ಒಂದು ರೂ. ನಾಣ್ಯ ಹಾಕಿದರೆ ಬಾಗಿಲು ತೆರೆಯುತ್ತದೆ.

ಸೆನ್ಸರ್ ಶೌಚಾಲಯ:
ಒಳಭಾಗದಲ್ಲಿ ಸೆನ್ಸರ್ ಅಳವಡಿಸಲಾಗಿದ್ದು, ದೀಪ ಹಾಗೂ ಫ್ಯಾನ್ ಯಾಂತ್ರಿಕವಾಗಿ ಚಾಲನೆಯಾಗಲಿದೆ. ಶೌಚಾಲಯ ಬಳಸಿದ ತರುವಾಯ ಸೆನ್ಸರ್ ವ್ಯವಸ್ಥೆ ಮೂಲಕವೇ ನೀರು ಪೂರೈಕೆಯಾಗಲಿದೆ. ನಂತರ ಒಳಗಿನ ಗುಂಡಿ ಒತ್ತಿದರೆ ಬಾಗಿಲು ತೆರೆಯುತ್ತದೆ .

ವಿವರ ನಿಯಂತ್ರಣ ಕೊಠಡಿಗೆ:
ಇ -ಶೌಚಾಲಯದಲ್ಲಿ ಜಿಪಿಎಸ್ ಸೆನ್ಸರ್ ತಂತ್ರಜ್ಞಾನ ಅಳವಡಿಸಲಾಗಿದೆ.ನೀರಿನ ಪ್ರಮಾಣ, ಸಂಗ್ರಹವಾದ ನಾಣ್ಯಗಳ ಸಂಖ್ಯೆ ವಿವರದ ಜತೆಗೆ ಯಾವುದೇ ಹಾನಿ ಸಂಭವಿಸಿದರೂ ತಕ್ಷಣವೇ ನಿಯಂತ್ರಣ ಕೊಠಡಿಗೆ ಮಾಹಿತಿ ರವಾನೆಯಾಗಲಿದೆ. ಹಾಗೆಯೇ ಬಳಕೆದಾರರು ದೂರು ದಾಖಲಿಸಲು ಧ್ವನಿಮುದ್ರಿತ ವ್ಯವಸ್ಥೆ ಇರಲಿದೆ.

ಜಮ್ಮು ಕಾಶ್ಮೀರ, ಕೇರಳದಲ್ಲಿ ಸಕ್ಸಸ್:
ಬಿಬಿಎಂಪಿ 4.50 ಲಕ್ಷ ರೂ ವೆಚ್ಚ ಮಾಡಿ ಒಂದೊಂದು ಟಾಯ್ಲೆಟ್ನ್ನು ನಿರ್ಮಿಸುತ್ತಿದೆ. ಸದ್ಯ ಕೇರಳದಲ್ಲಿ 500ಕ್ಕೂ ಅಧಿಕ ಹಾಗೂ ಜಮ್ಮ ಮತ್ತು ಕಾಶ್ಮೀರದಲ್ಲಿ 15 ಇ-ಶೌಚಾಲಯ ಅಳವಡಿಸಲಾಗಿದೆ ಅವುಗಳು ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿವೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications