100 ವಾರ್ಡ್ ಗಳ ಬದಲಿಗೆ ಒಂದು ವಾರ್ಡಲ್ಲಿ ಎಎಪಿ ಸ್ಪರ್ಧೆ!
ಬೆಂಗಳೂರು, ಆಗಸ್ಟ್ 11: ಚುನಾವಣೆಯಲ್ಲಿ ಪಕ್ಷ ಸ್ಪರ್ಧಿಸುವುದಿಲ್ಲ, ಬೆಂಬಲಿಸುವುದೂ ಇಲ್ಲ ಎನ್ನುತ್ತಿದ್ದರೂ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು 100 ಕ್ಕೂ ಹೆಚ್ಚು ವಾರ್ಡ್ಗಳಲ್ಲಿ ಕಣಕ್ಕಿಳಿಯುವ ಉತ್ಸಾಹದಲ್ಲಿದ್ದರು. ಅದರೆ, ಒಂದೇ ಒಂದು ವಾರ್ಡ್ ನಲ್ಲಿ ಆಮ್ ಆದ್ಮಿ ಪಕ್ಷದ ಸದಸ್ಯರೊಬ್ಬರು ಸ್ವ ಇಚ್ಛೆಯಿಂದ ಕಣಕ್ಕಿಳಿದಿದ್ದಾರೆ.
ಜೆಡಿಎಸ್ ಪಕ್ಷ ಕಳಿಸಿದ್ದ ಮೈತ್ರಿ ಯೋಜನೆಯನ್ನು ದೆಹಲಿ ಮುಖ್ಯಮಂತ್ರಿ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ನಿರಾಕರಿಸುತ್ತಿದ್ದಂತೆ ಆಪ್ ಕಾರ್ಯಕರ್ತರು ಪಕ್ಷದ ಹೆಸರು, ಚಿಹ್ನೆ, ಪ್ರಭಾವ ಬಳಸದೇ ವೈಯಕ್ತಿಕ ಪ್ರಭಾವ ಬಳಸಿಕೊಂಡು ಪಕ್ಷೇತರರಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದರು. [ಬಿಬಿಎಂಪಿ ಚುನಾವಣೆ : ಸಮಗ್ರ ಸುದ್ದಿಗಳಿಗೆ ಕ್ಲಿಕ್ಕಿಸಿ]
ಆದರೆ, ಬಿಬಿಎಂಪಿ ಚುನಾವಣೆಯಿಂದ 'ಆಪ್' ದೂರ ಉಳಿಯಲು ನಿರ್ಧರಿಸಿತು. ಕೊನೆಗೆ ಆಪ್ ಕಾರ್ಯಕರ್ತ ಅರವಿಂದ್ ಎಂಬುವರು ಗೋವಿಂದರಾಜನಗರ ವಾರ್ಡ್(ಸಂಖ್ಯೆ 101) ನಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.[ಬಿಬಿಎಂಪಿ ಚುನಾವಣೆ ಕಣದಿಂದ ಹಿಂದೆ ಸರಿದ ಎಎಪಿ]

ಬಿಬಿಎಂಪಿ ಚುನಾವಣಾ ಕಣದಿಂದ ಆಮ್ ಆದ್ಮಿ ಪಕ್ಷ ಸ್ಪರ್ಧೆಯಿಂದ ಹಿಂದೆ ಸರಿದ ಬೆನ್ನಲ್ಲೇ ಜೆಡಿಎಸ್ ವರಿಷ್ಠ ದೇವೇಗೌಡರು ಕೇಜ್ರಿವಾಲ್ಗೆ ಪತ್ರ ಬರೆದು ತಮ್ಮನ್ನು ಬೆಂಬಲಿಸುವಂತೆ ಮನವಿ ಮಾಡಿದ್ದರು. [ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದ್ಯಾ? ಪರೀಕ್ಷಿಸಿ]
ಆಪ್ ಹಾಗೂ ಜೆಡಿಎಸ್ ಎರಡೂ ಪಕ್ಷದ ಹೋರಾಟ ಭ್ರಷ್ಟಾಚಾರದ ವಿರುದ್ಧವಾಗಿದೆ. ಆದ್ದರಿಂದ ತಮಗೆ ಬೆಂಬಲಿಸುವಂತೆ ಗೌಡರು ಮನವಿ ಮಾಡಿದ್ದರು. ಆದರೆ ಆಪ್ ಕೇಂದ್ರ ಸಮಿತಿಯಿಂದ ಜೆಡಿಎಸ್ ಮನವಿ ತಿರಸ್ಕಾರಗೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.
ಯಲಚೇನಹಳ್ಳಿ, ಬೇಗೂರು, ವಿಜಯನಗರ ಮುಂತಾದ ಕಡೆ ಆಮ್ ಆದ್ಮಿ ಪಕ್ಷದ ಉತ್ಸಾಹಿಗಳು ಕಣಕ್ಕಿಳಿಯುವ ಸೂಚನೆ ಸಿಕ್ಕಿತ್ತು. ಅದರೆ, ಈ ಬಗ್ಗೆ ಪಕ್ಷದಲ್ಲಿ ಯಾವುದೇ ಒಮ್ಮತ ಮೂಡದ ಕಾರಣ ಪಕ್ಷದ ಚಿನ್ಹೆ, ಪ್ರಭಾವ ಬಳಸದೆ ಪಕ್ಷೇತರರಾಗಿ ಅರವಿಂದ್ ಅವರು ಕಣಕ್ಕಿಳಿದಿದ್ದಾರೆ. [40 ವಾರ್ಡ್ ಗಳ ಪೂರ್ವ ತಯಾರಿ ವರದಿ]
ಅರವಿಂದ್ ಅವರಿಗೆ ಎಎಪಿ ಕಡೆಯಿಂದ ಬೆಂಬಲವಿರುವುದಿಲ್ಲ, ಅವರನ್ನು ಬೆಂಬಲಿಸುವುದು ಬಿಡುವುದು ವೈಯಕ್ತಿಕ ವಿಚಾರ. ನಗರದಲ್ಲಿ ಪಕ್ಷದ ನಾಯಕರು, ಕಾರ್ಯಕರ್ತರು ಯಾವುದೇ ಪಕ್ಷಕ್ಕೆ ಬೆಂಬಲ ನೀಡುವುದಿಲ್ಲ. ಕೇಂದ್ರ ಸಮಿತಿಯಿಂದ ಈ ಬಗ್ಗೆ ಮಾಹಿತಿ ರವಾನೆ ಆಗಿದೆ ಎಂದು ಆಪ್ ರಾಜ್ಯ ಸಂಚಾಲಕ ಸಿದ್ಧಾರ್ಥ ಶರ್ಮ ಹೇಳಿದ್ದಾರೆ. ಇನ್ನೊಂದೆಡೆ ಲೋಕಸತ್ತಾ ಪಕ್ಷದಿಂದ 17 ಮಂದಿ ನಾಮಪತ್ರ ಸಲ್ಲಿಸಿದ್ದು, ಪ್ರಚಾರ ನಡೆಸಿದ್ದಾರೆ.
-
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್ -
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ












Click it and Unblock the Notifications